ಶಿವಮೊಗ್ಗ | ಹೊಸನಗರದಲ್ಲಿ ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕ ಸಾವು

Date:

ಶಿವಮೊಗ್ಗ, ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ.

ಪೊಲೀಸರು ಇದನ್ನು “ಆಕಸ್ಮಿಕ ಸಾವು” ಎಂದು ದಾಖಲಿಸಿ ಪ್ರಕರಣ ದಾಖಲಿಸಿಕೊಂಡರೂ , ಮಗನನ್ನು ಕಳೆದುಕೊಂಡ ಪೋಷಕರು ಮತ್ತು ಕುಟುಂಬಸ್ಥರು ಕಣ್ಣೀರಿನಿಂದ ಹೇಳುತ್ತಿರುವುದು, “ಇದು ಆಕಸ್ಮಿಕವಲ್ಲ, ಪೂರ್ವ ನಿಯೋಜಿತ ಕೊಲೆ.” ಎಂದು.ಮೇ 26 ರ ಮಧ್ಯಾಹ್ನ ಮಳೆ ಸುರಿಯುತ್ತಿತ್ತು. ಆ ಸಮಯದಲ್ಲಿ ಸುರೇಶ್ ಅವರ ಪುತ್ರನು ಅಜ್ಜಿಯ ಮನೆಗೆ ನಾಗದೇವರ ಪ್ರಸಾದ ಕೊಡುವುದಾಗಿ ಹೇಳಿ ಹೊರಟಿದ್ದ.

ಗಂಟೆಗಳಾದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ಆರಂಭಿಸಿದರು. ಸಂಜೆ ವೇಳೆಗೆ ಮನೆ ಹಿಂಭಾಗದಲ್ಲಿದ್ದ ಶುಂಠಿ ತೋಟದ ಬಳಿ ಟಾರ್ಪಲ್‌ ಹಾಕಿ ನಿರ್ಮಿಸಿದ್ದ ನೀರಿನ ಹೊಂಡದಲ್ಲಿ ಬಾಲಕನ ಶವ ಪತ್ತೆಯಾಗಿತ್ತು ಆದರೆ ಇದು ಆಕಸ್ಮಿಕ ಸಾವಲ್ಲ ಕೊಲೆ ಎಂದು ಪೋಷಕರು ಆರೋಪಿಸುತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಬಾಲಕನ ತಂದೆ ಸುರೇಶ್ ಅವರು ಹೇಳುವಂತೆ “ಮಳೆ ಬರುವ ಸಮಯದಲ್ಲಿ ಮಕ್ಕಳು ಆಟವಾಡಲು ಕೆರೆಗೆ ಇಳಿಯುವುದು ಅಸಾಧ್ಯ. ನಮ್ಮ ಮಗ ಮನೆಯಲ್ಲಿದ್ದಾಗಲೂ ಎಂದಿಗೂ ನಗ್ನವಾಗಿ ಸ್ನಾನ ಮಾಡಿರಲಿಲ್ಲ. ಆದರೆ ಶವ ಪತ್ತೆಯಾದಾಗ ಅವನು ಬಟ್ಟೆಯಿಲ್ಲದೇ ಕಂಡುಬಂದಿದ್ದಾನೆ.

ಇಷ್ಟೇ ಅಲ್ಲ, ಅವನ ಸೊಂಟದಲ್ಲಿ ಸದಾ ಇರುತ್ತಿದ್ದ ರೇಷ್ಮೆಯ ಉಡುದಾರ ಕಾಣಿಸದೆ ಹೋಯಿತು. ಇವೆಲ್ಲವೂ ಅವನನ್ನು ಯಾರೋ ಚಿತ್ರಹಿಂಸೆ ನೀಡಿ ಕೊಲೆಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದು ಆರೋಪಿಸುತ್ತಾರೆ.

ಕುಟುಂಬ ಸದಸ್ಯರ ಪ್ರಕಾರ, ಶವ ಪತ್ತೆಯಾದ ಸ್ಥಳದಲ್ಲೇ ಪಂಚನಾಮೆ ಮಾಡಬೇಕಾಗಿದ್ದರೂ, ಪೊಲೀಸರು ಬೇರೆ ಕೆರೆಯ ಬಳಿ ದಾಖಲಾತಿ ಮಾಡಿದ್ದಾರೆ. ಇಂತಹ ನಿರ್ಲಕ್ಷ್ಯದಿಂದ ಪೊಲೀಸರು ಯಾರನ್ನಾದರೂ ಉಳಿಸಲು ಯತ್ನಿಸುತ್ತಿದ್ದಾರೆಯೇ ಎಂಬುದು ಪೋಷಕರಲ್ಲಿ ಅನುಮಾನ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...