ಶಿವಮೊಗ್ಗ | ಶಿಕಾರಿಪುರದ ಒಂದು ಪ್ರಕರಣದಿಂದ 16 ಪ್ರಕರಣ ಬೆಳಕಿಗೆ

Date:

ಬೈಕ್ ಕಳುವು ಪ್ರಕರಣ ಬೇಧಿಸಲು ಹೊರಟ ಶಿಕಾರಿಪುರದ ಪೊಲೀಸರಿಗೆ ಅಧ್ಬುತ ಭೇಟೆ ಸಿಕ್ಕಿದೆ.‌ ಒಂದು ಕಳುವು ಪ್ರಕರಣದಿಂದ 16 ಪ್ರಕರಣಗಳು ಬೆಳಕಿಗೆ ಬಂದಿದೆ.

ಏ.25 ರಂದು ಶಿಕಾರಿಪುರ ಟೌನ್ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಬೇದಾರ್ ಕೇರಿಯ ವಾಸಿ ಫೈಜಾನ್ ಭಾಷಾ 38 ವರ್ಷ ರವರ ಬಜಾಜ್ ಪಲ್ಸರ್ ಬೈಕ್ ಅನ್ನು ಕಳವು ಪ್ರಕರಣ ದಾಖಲಾಗಿತ್ತು.ಪ್ರಕರಣದಲ್ಲಿ ಕಳುವಾದ ಬೈಕ್ ಹಾಗೂ ಆರೋಪಿತರ ಪತ್ತೆಗಾಗಿ ಮಿಥುನ್ ಕುಮಾ‌ರ್ ಜಿ. ಕೆ. ಐಪಿಎಸ್ ಮಾನ್ಯ ಪೊಲೀಸ್‌ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಅನಿಲ್ ಕುಮಾ‌ರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 1, ಶಿವಮೊಗ್ಗ ಜಿಲ್ಲೆ ಮತ್ತು ಕಾರಿಯಪ್ಪ ಎ. ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಕೇಶವ್ ಪೊಲೀಸ್‌ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ ಮತ್ತು ಸಂತೋಷ್ ಪಾಟೀಲ್‌, ಪೊಲೀಸ್ ನಿರೀಕ್ಷಕರು, ಶಿಕಾರಿಪುರ ಟೌನ್ ವೃತ್ತ ರವ ಮೇಲ್ವಿಚಾರಣೆಯಲ್ಲಿ, ಶರತ್ ಪಿಎಸ್‌ಐ ಶಿಕಾರಿಪುರ ಟೌನ್ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳಾದ ಎಎಸ್‌ಐ ಮಲ್ಲೇಶಪ್ಪ, ವಿಶ್ವನಾಥ್, ಹೆಚ್ ಸಿ ರವರಾದ ಸಂದೀಪ್ ಗಂಗಾಧ‌ರ್, ಸಿಪಿಸಿ ರವರಾದ ಶಿವಾಜಿ, ಗಿರೀಶ್, ಕೊಟ್ರೇಶ್, ಕುಮಾರ್, ಗಜೇಂದ್ರ, ವಿಜಯ್, ಚೇತನ್ ನಾಗರಾಜ್ ನವೀನ್, ರಾಜ್ ಕುಮಾರ್, ಜಯಶೀಲ, ವೀರೇಶ್ ಹಾಗೂ ತಾಂತ್ರಿಕ ವಿಭಾಗದ ಹೆಚ್ ಸಿ ಇಂದ್ರೇಶ್ ಮತ್ತು ಎ ಹೆಚ್ ಸಿ ಕೃಷ್ಣಸ ರವರುಗಳನ್ನೊಳಗೊಂಡ ತನಿಖಾ ತಂಡವ ರಚಿಸಲಾಗಿರುತ್ತದೆ.

ತನಿಖಾ ತಂಡವು ಪ್ರಕರಣದ ಆರೋಪಿತರಾದ ಪ್ರತಾಪ್, 33 ವರ್ಷ, ದೊಡ್ಡಲಿಂಗೇನಹಳ್ಳಿ, ತರೀಕೆರೆ ಚಿಕ್ಕಮಗಳೂರು ಮತ್ತು ಭೋಜರಾಜ, 32 ವರ್ಷ, ಬಿಳಚೋಡ್ ಗ್ರಾಮ, ಜಗಳೂರು ದಾವಣಗೆರೆ ಇವರುಗಳನ್ನು ದಸ್ತಗಿರಿ ಮಾಡಿ ಸದರಿ ಇಬ್ಬರು ಆರೋಪಿತರಿಂದ ಈ ಕೆಳಕಂಡ ಪೊಲೀಸ್‌ ಠಾಣೆಗಳಲ್ಲಿ ವರದಿಯಾದಶಿಕಾರಿಪುರ ಟೌನ್ ಪೊಲೀಸ್ ಠಾಣೆಯ 01, ಅರಸೀಕೆರೆ ಪೊಲೀಸ್ ಠಾಣೆಯ 01, ತರೀಕೆರೆ ಪೊಲೀಸ್ ಠಾಣೆಯ 02, ಚನ್ನರಾಯ ಪಟ್ಟಣ ಪೊಲೀಸ್‌ ಠಾಣೆಯ 01, ಶಿರಾ ಪೊಲೀಸ್‌ ಠಾಣೆಯ 01, ಚಿತ್ರದುರ್ಗ ಪೊಲೀಸ್ ಠಾಣೆಯ 01, ಜಗಳೂರು ಪೊಲೀಸ್ ಠಾಣೆಯ 01, ಕೂಡ್ಲಿ ಪೊಲೀಸ್ ಠಾಣೆಯ 01, ಕೊಟ್ಟೂರು ಪೊಲೀಸ್‌ ಠಾಣೆಯ 01, ಹಗರೀ ಬೊಮ್ಮನ ಹಳ್ಳಿ ಪೊಲೀಸ್‌ ಠಾಣೆಯ 01, ಹೊಸಪೇಟೆ ಪೊಲೀಸ್‌ ಠಾಣೆಯ 01, ಬೆಂಡೆಗೇರೆ ಪೊಲೀಸ್ ಠಾಣೆಯ 01, ಮುನಿರಾಬಾದ್ ಪೊಲೀಸ್ ಠಾಣೆಯ 01, ಮುಂಡರಗಿ ಪೊಲೀಸ್ ಠಾಣೆಯ 01 ಮತ್ತು ಹೂವಿನ ಹಡಗಲಿ ಪೊಲೀಸ್ ಠಾಣೆಯ 01 ಸೇರಿ ಅಂದಾಜು ಮೌಲ್ಯ 20,50,000/- ರೂಗಳ – ಒಟ್ಟು 16 ಬೈಕ್‌ ಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...