ಶಿವಮೊಗ್ಗ | ಶೀಘ್ರದಲ್ಲೇ 2 ವಂದೇಭಾರತ್‌ ರೈಲು ಸಂಚಾರಕ್ಕೆ ಚಾಲನೆ: ಸಂಸದ ಬಿ ವೈ ರಾಘವೇಂದ್ರ

Date:

ಶಿವಮೊಗ್ಗಕ್ಕೆ 2 ವಂದೇ ಭಾರತ್‌ ರೈಲು, ಒಂದು ತಿರುಪತಿಗೆ, ಮತ್ತೊಂದು ಬೆಂಗಳೂರಿಗೆ ಸಂಚಾರ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ 2 ವಂದೇ ಭಾರತ್‌ ಎಕ್ಸ್‌ಪ್ರೆಸ್‌ ಸೇರಿ 7 ಹೊಸ ರೈಲುಗಳ ಸೇವೆ ಲಭ್ಯವಾಗಲಿವೆ. ಜತೆಗೆ ರಾಜ್ಯದ 4ನೇ ರೈಲ್ವೆ ಕೋಚಿಂಗ್‌ ಡಿಪೋ ಕೂಡ ಆರಂಭವಾಗಲಿದೆ. ಈ ಬಗ್ಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಮಾಹಿತಿ ನೀಡಿದ್ದಾರೆ.

ನಗರ ಹೊರ ವಲಯದ ಕೋಟೆಗಂಗೂರಿನಲ್ಲಿ ರಾಜ್ಯದ 4ನೇ ರೈಲ್ವೆ ಕೋಚಿಂಗ್‌ ಡಿಪೋ ಆರಂಭದೊಂದಿಗೆ ಶಿವಮೊಗ್ಗದಲ್ಲಿ ಹೊಸ ರೈಲ್ವೆ ಕ್ರಾಂತಿಗೆ ನಾಂದಿ ಹಾಡಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಮೈಸೂರು ರೈಲ್ವೆ ಮೇಲಿನ ಒತ್ತಡ ಕಡಿಮೆ ಮಾಡಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಅದಕ್ಕಾಗಿ ಬಹಳಷ್ಟು ರೈಲುಗಳು ಬೆಂಗಳೂರು ಮತ್ತು ಮೈಸೂರು ಬದಲಾಗಿ ಶಿವಮೊಗ್ಗದಿಂದ ಸಂಚಾರ ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2026 ಜನವರಿಗೆ ರೈಲ್ವೆ ಕೋಚಿಂಗ್ ಡಿಪೋ ಆರಂಭ ರೈಲ್ವೆ ಕೋಚಿಂಗ್‌ ಡಿಪೋ 2026ನೇ ಜನವರಿ ಅಂತ್ಯದೊಳಗೆ ಆರಂಭವಾಗಲಿದೆ. ಅದರ ಜತೆಗೆ ಎರಡು ವಂದೇ ಭಾರತ್‌ ರೈಲುಗಳು ಶಿವಮೊಗ್ಗದಿಂದ ಸಂಚಾರ ಆರಂಭಿಸುತ್ತವೆ ಎಂದು ತಿಳಿಸಿದರು.

ಈಗಾಗಲೆ ಎರಡೂ ವಂದೇ ಭಾರತ್‌ ರೈಲುಗಳ ವೇಳಾಪಟ್ಟಿ ಹಾಗೂ ಗಾಡಿ ಸಂಖ್ಯೆಯನ್ನೂ ಇಲಾಖೆ ಪ್ರಕಟಿಸಿದೆ.

ಶಿವಮೊಗ್ಗ ತಿರುಪತಿ ವಂದೇ ಭಾರತ್‌ ರೈಲು ಮುಂಜಾನೆ 4.30ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12.30ಕ್ಕೆ ತಿರುಪತಿ ತಲುಪುತ್ತದೆ. ಮತ್ತೆ ಸಂಜೆ 4.30ಕ್ಕೆ ಹೊರಟು ರಾತ್ರಿ 12.30 ಗಂಟೆಗೆ ಶಿವಮೊಗ್ಗ ತಲುಪುತ್ತದೆ.

ಮತ್ತೊಂದು ವಂದೇ ಭಾರತ್‌ ರೈಲು ಶಿವಮೊಗ್ಗ- ಬೆಂಗಳೂರು ನಡುವೆ ಸಂಚರಿಸಲಿದೆ ಎಂಬ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಿಂದ ಇತರೆ ರಾಜ್ಯಕ್ಕೆ ಹೊಸ ರೈಲುಗಳು,

ಶಿವಮೊಗ್ಗ ಎರ್ನಾಕುಲಂ(ಕೇರಳ), ಶಿವಮೊಗ್ಗ ಬಗಲ್‌ಪುರ್‌(ಬಿಹಾರ), ಶಿವಮೊಗ್ಗ ಜಮ್‌ಶೆಡ್‌ಪುರ್‌(ಜಾರ್ಖಂಡ್‌), ಶಿವಮೊಗ್ಗ ಚಂಡೀಗಢ, ಶಿವಮೊಗ್ಗ ಗೌಹಾಟಿ ರೈಲುಗಳ ಸಂಚಾರ ಜನವರಿ ಮತ್ತು ಫೆಬ್ರವರಿಯಲ್ಲಿ ಆರಂಭಿಸಲು ಇಲಾಖೆ ನಿರ್ಧರಿಸಿದೆ ಎಂದರು.

ಹೊಸ ರೈಲು ಮಾರ್ಗಗಳ ಸರ್ವೇ ಆರಂಭ ಮತ್ತೊಂದು ಕಡೆ ತಾಳಗುಪ್ಪದಿಂದ ಹುಬ್ಬಳ್ಳಿ ಸಂಪರ್ಕಕ್ಕೆ ಸಿದ್ದಾಪುರ, ಶಿರಸಿ, ಮುಂಡಗೋಡು ತಡಸ ನಡುವೆ 150 ಕಿ.ಮೀ. ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಆಗಿದೆ.

ಈ ಮಾರ್ಗದಲ್ಲಿ195 ಹೆಕ್ಟೆರ್‌ ಖುಷ್ಕಿ ಭೂಮಿ, 317 ಹೆಕ್ಟೆರ್‌ ನೀರಾವರಿ, 190 ಹೆಕ್ಟೆರ್‌ ಅರಣ್ಯ ಭೂಮಿ ಬರುತ್ತದೆ. ಅರಣ್ಯ ಭೂಮಿಗೆ ಬದಲಿ ಭೂಮಿ ಕೊಡುವ ಕಾರ್ಯ ಆರಂಭವಾಗಿದೆ.

ತಾಳಗುಪ್ಪ- ಹೊನ್ನಾವರ ರೈಲು ಮಾರ್ಗದ ಸರ್ವೆ ಸಹ ಆಗಿದೆ. ಇಲ್ಲಿ ಶೇ.73ರಷ್ಟು ಅರಣ್ಯ ಬರುವುದರಿಂದ ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಚಿಕ್ಕಮಗಳೂರು ಬೇಲೂರು ಹಾಸನ ನೂತನ ಮಾರ್ಗಕ್ಕೆ ಸರ್ವೆ ಆರಂಭವಾಗಿದೆ. ಬೀರೂರು ಶಿವಮೊಗ್ಗ ಡಬ್ಲಿಂಗ್‌ಗೆ 1900 ಕೋಟಿ ರೂ. ಅನುಮೋದನೆ ನೀಡಲಾಗಿದ್ದು ಈ ವರ್ಷಾಂತ್ಯದೊಳಗೆ ಕಾಮಗಾರಿ ಆರಂಭವಾಗಲಿದೆ ಎಂದರು.

ಭದ್ರಾವತಿ ಚಿಕ್ಕಜಾಜೂರು ನಡುವೆ 73 ಕಿ.ಮೀ. ರೈಲು ಮಾರ್ಗ ಸರ್ವೆಗೆ ಟೆಂಡರ್‌ ಆಗಿದೆ. ಇದು ವಿಐಎಸ್‌ಎಲ್‌ಗೆ ಅದಿರು ಸಾಗಿಸಲು ಅನುಕೂಲವಾಗುತ್ತದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...