ಶಿವಮೊಗ್ಗ | ಆರೋಗ್ಯಪೂರ್ಣ ವ್ಯಕ್ತಿತ್ವದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ: ಡಾ. ಶುಭಾ

Date:

ಆರೋಗ್ಯಪೂರ್ಣ ವ್ಯಕ್ತಿತ್ವದಿಂದ ಆರೋಗ್ಯಪೂರ್ಣ ಸಮಾಜ ಕಟ್ಟಲು ಸಾಧ್ಯ ಎಂದು ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಮತ್ತು ಕುವೆಂಪು ವಿಶ್ವ ವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಶಿವಮೊಗ್ಗ ಇವರ ವತಿಯಿಂದ ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ 42 ಕುವೆಂಪು ವಿಶ್ವವಿದ್ಯಾಲಯ ನಗರ ಕೇಂದ್ರ ಕಚೇರಿಯಲ್ಲಿ ಎಚ್ಐವಿ ಏಡ್ಸ್ ಜಾಗೃತಿ, ರಕ್ತದಾನದ ಮಹತ್ವ, ರೆಡ್ ರಿಬ್ಬನ್ ಕ್ಲಬ್ ಮಾಹಿತಿ ಹಾಗೂ ತಂಬಾಕು ನಿಯಂತ್ರಣ ಕಾರ್ಯಕ್ರಮಗಳ ಬಗ್ಗೆ ಹಮ್ಮಿಕೊಂಡಿದ್ದ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಆರೋಗ್ಯದ ಬಗ್ಗೆ ಸರಿಯಾದ ಅರಿವು, ಮಾರ್ಗದರ್ಶನವಿಲ್ಲದೆ ತಪ್ಪು ತಿಳುವಳಿಕೆಯಿಂದ ಇಂದು ಅಪಾಯಗಳು ಹೆಚ್ಚುತ್ತಿವೆ. ನಮ್ಮ ಮುಂದಿನ ಯುವ ಜನಾಂಗವನ್ನು ಆರೋಗ್ಯ ಸಂಬಂಧಿ ಅಪಾಯಗಳಿಂದ ಪಾರು ಮಾಡಲು ಇಂತಹ ತರಬೇತಿ ಕಾರ್ಯಾಗಾರಗಳು ಅತ್ಯಗತ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001401174

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಭಾಕರ್ ಬಿ. ಟಿ, ” ಇಂದಿನ ನಮ್ಮ ಜೀವನ ಶೈಲಿಯೇ ನಮ್ಮ ದುರಂತಕ್ಕೆ ಕಾರಣ. ಗುಣಮಟ್ಟದ ಆಹಾರದ ಕೊರತೆ, ವ್ಯಾಯಾಮ, ನಡಿಗೆ ರಹಿತ ಜೀವನ ಕ್ರಮಗಳಿಂದಾಗಿ ನಾವು ಬೇಗ ಅಪಾಯಗಳಿಗೆ ಬಲಿಯಾಗುತ್ತಿದ್ದೇವೆ. ಏಡ್ಸ್ ನಂತಹ ಮಾರಕ ರೋಗಗಳನ್ನು ಬರದಂತೆ ತಡೆಗಟ್ಟುವುದೇ ನಮ್ಮ ಗುರಿಯಾಗಬೇಕು. ಇದಕ್ಕೆ ಸಾಕಷ್ಟು ಎಚ್ಚರ, ಜಾಗೃತಿ ಮತ್ತು ಸುರಕ್ಷತಾ ಕ್ರಮಗಳನ್ನು ವಹಿಸಬೇಕು” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಜೋಗದ ಕಾಮಗಾರಿ ವಿಳಂಬ; ಏಪ್ರಿಲ್ 30ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಶಿವಮೊಗ್ಗ ಡಿಎಪಿಸಿಯುದ ಜಿಲ್ಲಾ ಮೇಲ್ವಿಚಾರಕಿ ಮಂಗಳ ರಾಕ್ತದಾನ ಮತ್ತು ರೆಡ್ ರಿಬ್ಬನ್ ಕ್ಲಬ್ ಬಗ್ಗೆ ಮಾಹಿತಿ ನೀಡಿದರು. ಹೇಮಂತ್ ರಾಜ್ ಅವರು ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ವಿವರಿಸಿದರು. ಶಿವಮೊಗ್ಗ ಜಿಲ್ಲಾ ರಕ್ತ ಕೇಂದ್ರದ ಆಪ್ತ ಸಮಾಲೋಚಕಾ ಹನುಮಂತಪ್ಪ ರಕ್ತದಾನ ಶಿಬಿರಗಳ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ಎನ್ಎಸ್ಎಸ್ ಅಧಿಕಾರಿಗಳಿಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು. ಜೆಸಿಐನ ದಿವ್ಯಾ ವಿ. ಪಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...