ಶಿವಮೊಗ್ಗ | ಶಿಕ್ಷಣ ಸಚಿವರ ತವರಲ್ಲೇ ಪುಟ್ಟ ಕಂದನ ಮೇಲೆ ಹಲ್ಲೆ; ಶಾಲೆ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳುವರೇ?

Date:

ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿ ಅಮಾನುಷ ಘಟನೆ ನಡೆದಿದ್ದು, ಶಿವಮೊಗ್ಗ ಗ್ರಾಮಾಂತರ ಭಾಗದ ಕುಂಸಿಯ ಖಾಸಗಿ ಶಾಲೆಯೊಂದರಲ್ಲಿ ಎರಡೂವರೆ ವರ್ಷದ ಪುಟ್ಟ ಕಂದನ ಮೇಲೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತಾಗಿ ಶಿಕ್ಷಣ ಇಲಾಖೆಯಲ್ಲೇ ಮಾಹಿತಿ ಇಲ್ಲದಾಗಿದ್ದು, ಹಣದ ಹಪಾಹಪಿಗೆ ಖಾಸಗಿ ಶಾಲೆಗಳು ಕಾನೂನು ಉಲ್ಲಂಘನೆಗೂ ಸಿದ್ದವಾಗಿರುತ್ತಾರ? ಎಂಬುದು ಕಂಡುಬರುತ್ತಿದೆ.

ಚಿಗುರು ಎಂಬ ಖಾಸಗಿ ಶಾಲಾ ಆಡಳಿತ ಮಂಡಳಿ ಎರಡುವರೆ ವರ್ಷದ ಮಗುವನ್ನು ದಾಖಲಾತಿ ಮಾಡಿಕೊಂಡಿದ್ದು, ಬಳಿಕ ಆ ಮಗುವಿಗೆ ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆ ಮಾಡಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಯಲ್ಲಿ ಮಗುವಿನ ಮೇಲೆ ಹಲ್ಲೆ ಮಾಡಿರುವುದಲ್ಲದೆ ಆಡಳಿತ ಮಂಡಳಿಯವರು ಪೋಷಕರಿಗೆ ಧಮ್ಕಿ ಹಾಕಿ, ʼಮುಂದೆ ನಿಮ್ಮ ಮಗುವಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಎಲ್ಲಿಯೂ ಕೂಡ ಈ ವಿಚಾರ ಬಾಯಿ ಬಿಡಬಾರದುʼ ಎಂದು ತಾಕಿತು ಮಾಡಿದ್ದಾರೆಂದು ಸ್ಥಳೀಯರೊಬ್ಬರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

1001720062

ಘಟನೆಗೆ ಸಂಬಂಧಿಸಿದಂತಡ ಈ ದಿನ.ಕಾಮ್‌ ಶಿವಮೊಗ್ಗ ಡಿಡಿಪಿಐ ಅವರನ್ನು ಸಂಪರ್ಕಿಸಿದಾಗ ಮಾತನಾಡಿ, ಪ್ರಕರಣವನ್ನು ಬಿಇಒ ಗಮನಕ್ಕೆ ತರುವಂತೆ ತಿಳಿಸಿದರು.

ಶಿವಮೊಗ್ಗ ಬಿಇಒ ರಮೇಶ್ ನಾಯ್ಕ್ ಮಾತನಾಡಿ, “ಮಗುವನ್ನು ಮುಟ್ಟಿದರೆ, ಮುಟ್ಟಿದ ಭಾಗದಲ್ಲಿ ಕೆಂಪಾಗತ್ತೆ. ಹಾಗಾಗಿ ಮಗುವಿನ ತೋಳನ್ನು ಹಿಡಿದ ಕಡೆ ಕೆಂಪಾಗಿದೆ” ಎಂದು ಮಾಹಿತಿ ನೀಡಿದರು.

ಎರಡೂವರೆ ವರ್ಷದ ಮಗುವನ್ನು ಶಾಲೆಗೆ ದಾಖಲಾತಿ ಮಾಡಿಕೊಂಡಿರುವುದು ಕಾನೂನು ಬಾಹಿರವಲ್ಲವೇ ಎಂಬ ಪ್ರಶ್ನೆಗೆ, ʼಇಂದು ಬಕ್ರೀದ್ ಹಬ್ಬದ ರಜೆ ಇರುವ ಕಾರಣ ಮಾಹಿತಿ ಪಡೆಯುವುದು ಕಷ್ಟ. ಶಾಲಾದಿನದಲ್ಲಿ ಘಟನೆ ಕುರಿತು ಸಂಪೂರ್ಣ ಮಾಹಿತಿ ಶೀಘ್ರದಲ್ಲಿ ನೀಡಲಾಗುವುದುʼ ಎಂದು ಉತ್ತರಿಸಿದರು.

1001720282

ಚಿಗುರು ಶಾಲೆಯ ಮುಖ್ಯ ಶಿಕ್ಷಕಿಯನ್ನು ಈ ದಿನ.ಕಾಮ್‌ ಸಂಪರ್ಕಿಸಿದಾಗ ವರದಿಗಾರರ ಮೇಲೆ ರೆಗಾಡಿ, ದರ್ಪ ತೋರಿದ್ದು, ಬಳಿಕ ʼಘಟನೆ ಆಗೋಗಿದೆ ಇದನ್ನು ದೊಡ್ಡದಾಗಿ ನ್ಯೂಸ್ ಮಾಡಬೇಡಿ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಈ ಬಗ್ಗೆ ನಾವು ಪೋಷಕರಿಗೂ ತಿಳಿಸಿದ್ದೇವೆ” ಎಂದರು.

“ಮಗುವಿಗೆ ಎಷ್ಟು ವರ್ಷ ಎಂಬುದೇ ನನಗೆ ಮಾಹಿತಿ ಇಲ್ಲ. ರಜೆ ಮುಗಿದ ನಂತರ ಶಾಲೆಗೆ ಬಂದಾಗ ನೋಡುತ್ತೇನೆ” ಎಂದು ತಿಳಿಸಿದರು.

ಘಟನೆ ನಡೆದಿರುವುದಾಗಿ ಶಾಲೆ ಶಿಕ್ಷಕಿಯವರೇ ತಿಳಿಸುತ್ತಿರುವಾಗ, ಶಿವಮೊಗ್ಗ ಜಿಲ್ಲೆಯವರೇ ಆದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ತಮ್ಮ ತವರೂರಲ್ಲಿ ನಡೆದಿರುವ ಈ ರೀತಿಯ ಘಟನೆ ಕುರಿತು ಏನು ಪ್ರತಿಕ್ರಿಯೆ ನೀಡುತ್ತಾರೆ?. ಈ ಶಾಲೆ ಬಗ್ಗೆ ಏನು ಸೂಕ್ತ ಕ್ರಮ ತೆಗೆದುಕೊಳ್ಳಲ್ಲಿದ್ದಾರೆ. ಕಾನೂನು ಉಲ್ಲಂಘನೆ ಹಾಗೂ ಮಗುವಿನ ದೌರ್ಜನ್ಯ ಕುರಿತು ಶಿಕ್ಷಣ ಇಲಾಖೆ ಮುಂದಿನ ದಿನಗಳಲ್ಲಿ ಯಾವ ರೀತಿಯ ಕ್ರಮ ಜರುಗಿಸಲಿದೆ ಎಂಬುದನ್ನು ಕಾದು ನೋಡಬೇಕು.

ಮಗುವಿಗೆ ಹಲ್ಲೆ

ಪೋಷಕರಿಗೆ ಸೂಕ್ತ ರಕ್ಷಣೆ ಹಾಗೂ ಧೈರ್ಯ ನೀಡಬೇಕು ಹಾಗೆಯೆ ಘಟನೆ ಆದಾಗ ಮಗುವಿನ ಜೀವಕ್ಕೆ ಏನಾದರೂ ಅಪಾಯವಾಗಿದ್ದಲ್ಲಿ ಯಾರು ಹೊಣೆಗಾರರಗುತ್ತಿದ್ದರು ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ ಹಾಗೂ ಇಂತಃ ಶಾಲೆಗಳ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕಾಗಿರುವುದು ಅತ್ಯವಶ್ಯವಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...