ಶಿವಮೊಗ್ಗ | ʼದಸಂಸʼ ಹೆಸರು ದುರುಪಯೋಗದ ವಿರುದ್ಧ ಕ್ರಮ: ಗುರುಮೂರ್ತಿ

Date:

ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮಗೆ ಮಾತ್ರ ದಸಂಸ ಬಳಸಿಕೊಳ್ಳಲು ಎಂದು ನ್ಯಾಯಾಲಯ ಆದೇಶಿದೆ. ದಲಿತ ಸಂಘರ್ಷ ಸಮಿತಿ ಹೆಸರನ್ನು ಹಲವು ಮಂದಿ ತಮ್ಮದು ಎಂಬಂದೆ ಬಿಂಬಿಸಿಕೊಳ್ಳುತ್ತಿದ್ದಾರೆ. ಸಂಘಟನೆಯ ಹೆಸರು ಬಳಸಬಾರದು. ಬಳಸಿದಲ್ಲಿ ರಾಜ್ಯಾದ್ಯಂತ ಪ್ರಕರಣ ದಾಖಲಿಸಲಾಗುವುದು. ಹೈಕೋರ್ಟ್ ನಲ್ಲಿ ಕೆವಿಟ್ ಹಾಕಲಾಗುವುದು” ಎಂದು ಎಚ್ಚರಿಸಿದ್ದಾರೆ.

ಈ ಕುರಿತು ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ವಕೀಲ ಸೀತಾರಾಮ್ ಮಾತನಾಡಿ, “ದಲಿತ ಸಂಘರ್ಷ ಸಮಿತಿ ಹೆಸರನ್ನ ಪ್ರೊ.ಕೃಷ್ಣಪ್ಪ 74/75 ಎಂದು ನೋಂದಣಿ ಮಾಡಿಸಿದ್ದರು. ಗುರುಮೂರ್ತಿ 2008 ರವರೆಗೆ ಆಡಿಟ್ ಮಾಡಿಸುತ್ತಿದ್ದರು. ಸತ್ಯ ಮತ್ತು ಇತರರು ಡಿಆರ್‌ಗೆ ಪತ್ರ ಬರೆದು ತಕರಾರು ಮಾಡಿದ್ದರು. ತಕರಾರಿಗೆ ಸಮಿತಿ ರಚಿಸಲಾಗಿತ್ತು. ಸಮಿತಿಯು ಸಾಧ್ಯವಿಲ್ಲದ ಪ್ರಕರಣ ಎಂದು ಬರೆದು, ನ್ಯಾಯಾಲಯದಲ್ಲಿ ಫೈಟ್ ಮಾಡಲು ಸೂಚಿಸಿತ್ತು. ಗುರುಮೂರ್ತಿ ಅವರು ಭದ್ರಾವತಿಯ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಭದ್ರಾವತಿಯ ನ್ಯಾಯಾಲಯ ಗುರುಮೂರ್ತಿ ಪರ ನ್ಯಾಯ ಪ್ರಕಟಿಸಿದ್ದರು. ಸತ್ಯರವರು ಕೆಳ ನ್ಯಾಯಾಲಯದ ಆದೇಶವನ್ನ ಪ್ರಶ್ನಿಸಿ ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ ಕಂಡಿಷನ್ ಮೇಲೆ ಸ್ಟೇ ನೀಡುತ್ತದೆ. ಕಂಡಿಷನ್ ಪ್ರಕಾರ ಗುರುಮೂರ್ತಿಗೆ ಸಂಘಟನೆ ಹೆಸರು ಬಳಸಿಕೊಳ್ಳಲು ಮಾತ್ರ ಅಧಿಕಾರವಿದ್ದು, ಇತರರು ಬಳಸಿಕೊಳ್ಳದಂತೆ ಸೂಚಿಸಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಂತರ ಹೈಕೋರ್ಟ್ ವಿಚಾರಣೆ ನಡೆಸಿ ಕೆಳ ನ್ಯಾಯಾಲಯದ ಆದೇಶವನ್ನ ಎತ್ತಿಹಿಡಿದಿದೆ. ಇದರ‌ ಮಧ್ಯೆ ಸತ್ಯರವರು ಭದ್ರಾವತಿಯಲ್ಲಿ ದಲಿತ ಸಂಘರ್ಷ ಸಮಿತಿ ಹೆಸರಿನಲ್ಲಿ ಕಾರ್ಯಕ್ರಮ ನಡೆಸಿದ್ದರು. ಡಿವೈಎಸ್‌ಪಿ ಆಕ್ಷೇಪಣಾರ್ಹ ಹಿಂಬರಹ ಕೊಟ್ಟು ಈ ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟಿದ್ದರು. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಮೀಟರ್ ಬಳಸದ ಆಟೋಗಳು; ಕಣ್ಮುಚ್ಚಿ ಕುಳಿತ ಪೊಲೀಸರು

ದಲಿತ ಸಂಘರ್ಷ ಸಮಿತಿಯ ಭದ್ರಾವತಿ ವಕೀಲ ಶಿವಕುಮಾರ್, ದಸಂಸ ಜಿಲ್ಲಾ ಸಂಚಾಲಕ ಏಳುಕೋಟಿ, ಬೊಮ್ಮನ್ ಕಟ್ಟೆ ಕೃಷ್ಣಪ್ಪ, ಮೂಗೂರು ಪರಶುರಾಮ್, ಚಿಕ್ಕಮರಡಿ ರಮೇಶ್, ನಾಗರಾಜ್, ದೌರ್ಜನ್ಯ ಸಮಿತಿ ಸದಸ್ಯ ಹನುಮಂತಪ್ಪ ಯಡವಾಲ, ಹರಗೆ ರವಿ, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...