ಶಿವಮೊಗ್ಗ | ʼಬುದ್ಧ-ಬಸವ-ಅಂಬೇಡ್ಕರ್ ತತ್ವಗಳ ಮೇಲೆ ಅಹಿಂದ ಸಂಘಟನೆ ಕಟ್ಟಲಾಗಿದೆʼ

Date:

ಶಿವಮೊಗ್ಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳ ವಸತಿ ಸದೃಢತೆಗಾಗಿ ಸ್ಥಾಪಿಸಿರುವ ಅಹಿಂದ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಕಚೇರಿಗೆ ಮೇ 26 ರಂದು ಸೋಮವಾರ “ರಾಷ್ಟ್ರೀಯ ಅಹಿಂದ ಸಂಘಟನೆಯ” ರಾಜ್ಯದ್ಯಕ್ಷರಾದ ಮುತ್ತಣ್ಣ ಎಸ್ ಶಿವಳ್ಳಿ ರವರು ಭೇಟಿ ನೀಡಿ ಶುಭ ಹಾರೈಸಿದರು.

ಅಹಿಂದ ಸಮುದಾಯಕ್ಕಾಗಿ ವಸತಿಯ ಅಭಿವೃದ್ಧಿಗಾಗಿಯೇ ಸ್ಥಾಪಿತವಾಗಿರುವ ಅಹಿಂದ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಶಿವಮೊಗ್ಗದಲ್ಲಿ ಆರಂಭಿಸಿದ್ದು ಸ್ವಾಗತಾರ್ಹವಾಗಿದೆ ಎಂದರು.

ಈ ಸೊಸೈಟಿಯು ರಾಜ್ಯದಲ್ಲಿ ಮೊಟ್ಟಮೊದಲನೆ ಸೊಸೈಟಿ ಯಾಗಿದ್ದು, ಸೊಸೈಟಿಯ ಬೈಲವನ್ನು ಅನುಸರಿಸಿ ಈ ರೀತಿಯ ಮಾದರಿಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಅಹಿಂದ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಗಳನ್ನು ಹಂತ ಹಂತವಾಗಿ ಪ್ರಾರಂಭಿಸಲು ಕಾರ್ಯದಯೋಜನೆಯನ್ನು ರೂಪಿಸಲಾಗುತ್ತದೆ ಎಂದು ಮುತ್ತಣ್ಣ ಎಸ್ ಶಿವಳ್ಳಿರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001665514

ಬುದ್ಧ ಬಸವ ಅಂಬೇಡ್ಕರ್ ಅವರಗಳ ವಿಚಾರಧಾರೆಗಳು ಮುಂದಿಟ್ಟುಕೊಂಡು, ಅಹಿಂದ ಸಂಘಟನೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಕಟ್ಟಲಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಘಟನೆಯು ರಾಜ್ಯದಂತ ಒಂದು ಶಕ್ತಿಯಾಗಿ ಅಹಿಂದ ಸಮುದಾಯದ ಸಾಮಾಜಿಕ ನ್ಯಾಯದ ಧ್ವನಿಯಾಗಿ ರಾಜ್ಯಾದ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ರಾಷ್ಟ್ರೀಯ ಅಹಿಂದ ಸಂಘಟನೆಯನ್ನು ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಆಲೋಚಿಸಲಾಗಿದೆ ಎಂದು ಮುತ್ತಣ್ಣ ಎಸ್ ಶಿವಳ್ಳಿ ಹೇಳಿದರು.

ಅಹಿಂದ ಹೌಸಿಂಗ್ ಕೋ-ಆಪರೇಟಿವ್ಸೊಸೈಟಿ ಅಧ್ಯಕ್ಷರು ಮತ್ತು ಶಿವಮೊಗ್ಗ ಜಿಲ್ಲಾಮಟ್ಟದ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷರು ಸಿ.ಎಸ್.ಚಂದ್ರಭೂಪಾಲರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.ರಾಷ್ಟ್ರೀಯ ಅಹಿಂದ ಸಂಘಟನೆಯಮುಖಂಡರು ಡಾ.ಸಂಗಪ್ಪ ಹಡಪದರಶ್ರೀ ಲಕ್ಷ್ಮಣ ಧಾರವಾಡ , ತನ್ವೀರ್ರವರು ಆಗಮಿಸಿದ್ದರು.

ಅಹಿಂದ ಹೌಸಿಂಗ್ ಕೋ-ಆಪರೇಟಿವ್ಸೊಸೈಟಿಯ ನಿರ್ದೇಶಕರು ಎಸ್.ಎನ್ ಮೂರ್ತಿ,ಎಸ್.ಬಿ.ಅಶೋಕ್ ಕುಮಾರ್ಡಾ. ಡಿ. ಜೆ. ತಾನಾಜಿ , ಎಂ.ಮಂಜಪ್ಪ ,ಎಂ.ಪಿ.ದಿವಾಕರ ಶ್ರೀ ಮತಿ ನಾಜೀಮ ,ಶ್ರೀ ಮತಿ ವಿಜಯಲಕ್ಷ್ಮೀ ಹಾಜರಿದ್ದರು.

ರಾಷ್ಟ್ರೀಯ ಅಹಿಂದ ಸಂಘಟನೆಯ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರು ಮುಕುಬುಲ್ ಅಹ್ಮದ್,ಪ್ರಮುಖರಾದ ಮಹಮ್ಮದ್ ಆಲಿ ,ದಾದಾ ಕಲಂದರ್ , ಗೌಸ್ ಪೀರ್ , ಶ್ರೀಮತಿ ಪುಷ್ಪಲತಾರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...