ಶಿವಮೊಗ್ಗ | ಅಂಬೇಡ್ಕರ್ ಬರಹಗಳು ಸ್ತ್ರೀವಾದಕ್ಕೆ ಹತ್ತಿರ : ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯ

Date:

ಶಿವಮೊಗ್ಗ, ಜಗತ್ತಿನ ಎಲ್ಲಾ ಧರ್ಮಗಳು ಪಿತೃ ಪ್ರಧಾನ ಮೌಲ್ಯಗಳನ್ನೇ ಅಳವಡಿಸಿಕೊಂಡಿವೆ. ಯಾವುದೇ ಧರ್ಮ ಸ್ತ್ರೀವಾದವನ್ನು ಬೆಂಬಲಿಸುವುದಿಲ್ಲ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ “ವೀಣಾ ಶಾಂತೇಶ್ವರ ಅವರ ಕಥನ : ಓದು ಮತ್ತು ಸಂವಾದ” ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.

1002463466

ಅಂಬೇಡ್ಕರ್ ಬರಹಗಳು ಸ್ತ್ರೀವಾದಕ್ಕೆ ಹತ್ತಿರವಾಗಿದ್ದು ಹೆಣ್ಣಿನ ಬದುಕನ್ನು ಅರ್ಥೈಸಿಕೊಳ್ಳಲು ಸಹಕಾರಿಯಾಗಿವೆ. ಅನೇಕ ತಾತ್ವಿಕತೆಗಳ ಹಿನ್ನೆಲೆಯಲ್ಲಿ ಸ್ತ್ರೀವಾದವನ್ನು ನೋಡಲಾಗುತ್ತಿದೆ. ಸ್ತ್ರೀವಾದ ಇಂದು ಹಲವಾರು ನೆಲೆಗಳಲ್ಲಿ ಹರಡಿಕೊಂಡಿದೆ. ಜೊತೆಗೆ ಗೊಂದಲಗಳೂ ಕಾಣುತ್ತಿವೆ. ಇದನ್ನು ಎಚ್ಚರಿಕೆಯಿಂದ ಅರಿಯಬೇಕಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002463465

ಕುವೆಂಪು ವಿವಿ ಕನ್ನಡ ಆಧ್ಯಾಪಕರ ವೇದಿಕೆ ಹಾಗೂ ಕನ್ನಡ ಭಾರತಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ವೇದಿಕೆಯ ಅಧ್ಯಕ್ಷೆ ಡಾ. ಸಬಿತಾ ಬನ್ನಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ವೀಣಾ ಶಾಂತೇಶ್ವರ ಅವರು ಅರವತ್ತು ಎಪ್ಪತ್ತರ ದಶಕದಲ್ಲಿಯೇ ವಿಶಿಷ್ಟವಾದ ಕಥೆಗಳನ್ನು ರಚಿಸಿದರು. ವೀಣಾ ಅವರ ಕಥೆಗಳನ್ನು ಸಾಹಿತ್ಯ ವಲಯದವರು ಮಾತ್ರವಲ್ಲದೆ ಭಿನ್ನ ವಲಯಗಳಿಂದ ಬಂದು ಓದುಗರು ಇಂದು ಓದುತ್ತಿದ್ದಾರೆ. ಅವರ ಕಥೆಗಳಲ್ಲಿ ಮೇಲ್ನೋಟಕ್ಕೆ ಪುರುಷ ದ್ವೇಷ ಇದೆ ಎನಿಸಿದರೂ ಅವರ ಒಟ್ಟು ಕಥೆಗಳ ಆಶಯ ಬದುಕಿನ ಅನ್ವೇಷಣೆಯೇ ಆಗಿದೆ ಎಂದರು.

ವಿಮರ್ಶೆಕ ಡಾ. ಕೆ. ಕೇಶವ ಶರ್ಮ ಹಾಗೂ ಬರಹಗಾರ್ತಿ ಡಾ. ತಾರಿಣಿ ಶುಭದಾಯಿನಿ ಅವರು ವೀಣಾರವರ ಕಥೆಗಳ ಕುರಿತು ಉಪನ್ಯಾಸ ನೀಡಿದರು. ಕನ್ನಡ ಭಾರತಿ ನಿರ್ದೇಶಕ ಡಾ. ಸಿದ್ದೇಶ್ ನೆಲ್ಲಿಕಟ್ಟೆ ಅವರು ಸ್ವಾಗತ ಕೋರಿದರು.

1002463464

ವೇದಿಕೆಯ ಉಪಾಧ್ಯಕ್ಷ ಡಾ. ಕುಂಸಿ ಉಮೇಶ್ ಉಪಸ್ಥಿತರಿದ್ದರು. ಮಧ್ಯಾಹ್ನದ ಗೋಷ್ಠಿಯಲ್ಲಿ ವಿದ್ಯಾರ್ಥಿಗಳು ಗುಂಪು ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯಲ್ಲಿ ವೀಣಾ ಶಾಂತೇಶ್ವರ ಅವರ ನಿರಾಕರಣೆ ಕಥೆ ಆಧಾರಿತ ನಾಟಕ ಏಕವ್ಯಕ್ತಿ ಪ್ರದರ್ಶನ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...