ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Date:

ಶಿವಮೊಗ್ಗ, ವಾಣಿಜ್ಯ ಮಳಿಗೆಯ ನಾಮಫಲಕ ಜಾಹೀರಾತು ಫಲಕ ಶಾಲೆ ಮತ್ತು ಶಾಲಾ ವಾಹನಗಳಲ್ಲಿನಾ ನಾಮಫಲಕ ಆಹಾರ ಸರಬರಾಜುಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಒತ್ತಾಯಿಸಿ ಇಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಕನ್ನಡ ನಾಡು ಭಾಷೆ ಎಂದು ಭಾಷಣದಲ್ಲಿ ಮಾತ್ರ ಬೊಗಳೆ ಬಿಡುವ ರಾಜಕಾರಣಿಗಳು ಮತ್ತು ಅದಕ್ಕೆ ತಕ್ಕಂತೆ ವರ್ತಿಸುವ ಅಧಿಕಾರಿಗಳು ಎಲ್ಲಿಯೂ ಕನ್ನಡವನ್ನು ಬಳಸುವಂತೆ ಒತ್ತಾಯ ಪಡಿಸುವುದಾಗಲಿ, ಕಾನೂನನ್ನು ಪಾಲಿಸುವುದಾಗಲಿ ಯಾವುದನ್ನು ಮಾಡದೆ ಕನ್ನಡ ಉಳಿವಿಗಾಗಿ ಪತ್ರಗಳಲ್ಲಿ ಸುತ್ತೋಲೆಗಳಲ್ಲಿ ಮಾತ್ರ ಕಾಣುವುದು ವಿಪರ್ಯಾಸದ ಸಂಗತಿಯಾಗಿದೆ ಎಂದಿದ್ದಾರೆ.

ಕನ್ನಡ ಉಳಿವಿಗಾಗಿ ಹೋರಾಟ ಮಾಡುವ ನಾಯಕರ ಮಕ್ಕಳೇ ಆಂಗ್ಲ ಶಾಲೆಗೆ ಸೇರಿಸುವುದು ತಮ್ಮ ವ್ಯವಹಾರಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಆಸ್ಪತ್ರೆಗಳಲ್ಲಿ ತಾವುಗಳೇ ಕನ್ನಡ ಬಳಕೆಯನ್ನು ಮಾಡದೆ ಕನ್ನಡ ನಾಡಿಗೆ ಕನ್ನಡದ ಜನತೆಗೆ ದ್ರೋಹ ಎಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸರ್ಕಾರ ಈಗಾಗಲೇ ಕನ್ನಡ ಉಳಿವಿಗಾಗಿ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ ಅವುಗಳೆಲ್ಲವೂ ಕಾಗದಗಳಲ್ಲೇ ಉಳಿದುಹೋಗಿದೆ, ಕಾನೂನಿನ ಪ್ರಕಾರ ಯಾವುದೇ ಅಂಗಡಿ ಮುಂಗಟ್ಟುಗಳ ಮುಂದೆ ಶೇಕಡ 60%ರಷ್ಟು ಕನ್ನಡ ಭಾಷೆ ಹಾಗೂ ಶೇಕಡ 40%ರಷ್ಟು ಅನ್ಯ ಭಾಷೆ ಬಳಸುವಂತೆ ಆದೇಶವಿದ್ದರೂ, ಸಹ ಇದನ್ನು ಅನುಷ್ಠಾನ ತರಲು ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು ಅವರ ಭಾಷಾ ಪ್ರೀತಿ ಏನೆಂದು ಇಲ್ಲಿಯ ಗೊತ್ತಾಗುತ್ತದೆ.

ಸಾಮಾನ್ಯವಾಗಿ ನಗರಗಳಲ್ಲಿ ಎಲ್ಲಿ ನೋಡಿದರೂ ಯಾವ ಜಾಹಿರಾತು ಫಲಕಗಳಲ್ಲಿಯೂ ಅಂಗಡಿ ಮುಂಗಟ್ಟುಗಳ ಮುಂದೆ ಪ್ರದರ್ಶನ ಮಾಡಿದ ನಾಮ ಪಲಕಗಳಲ್ಲಿ ಹಾಗೆಯೇ ಶಾಲೆಗೆ ಓಡಾಡುವ ವಾಹನಗಳಲ್ಲಾಗಲಿ, ಆಹಾರ ಪೂರೈಕೆಯ ಕಂಪನಿಗಳ ಹೆಸರು, ಸಮವಸ್ತ್ರಗಳಲ್ಲಾಗಲಿ ಕನ್ನಡ ಇಲ್ಲದೆ ಇಂಗ್ಲಿಷ್ ಭಾಷೆ ರಾರಾಜಿಸುತ್ತಿರುವುದು ಖಂಡನೀಯ ಎಂದರು.

ಇವೆಲ್ಲವು ಅಧಿಕಾರಿಗಳಿಗೆ ಗೊತ್ತಿದ್ದರೂ ಕಂಡರೂ ಕಾಣದ ಹಾಗೆ ವರ್ತನೆ ಮಾಡುತ್ತಿರುವುದು ಕನ್ನಡ ನಾಡು ನುಡಿ ಭಾಷೆಗೆ ಮಾಡುವ ದ್ರೋಹವಾಗಿರುತ್ತದೆ ಎಂದಿದ್ದಾರೆ.

ಹಾಗಾಗಿ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾಹಿರಾತು ಫಲಕದಲ್ಲಿ ಪ್ರತಿಷ್ಠಿತ ಶಾಲೆಗಳ ಗೋಡೆ ಬರಹದಲ್ಲಾಗಲಿ ಶಾಲೆಗೆ ಓಡಾಡುವ ವಾಹನಗಳ ಫಲಕದಲ್ಲಾಗಲಿ, ಮನೆಮನೆಗೆ ಆಹಾರ ಪೂರೈಕೆ ಮಾಡುವ ಕಂಪನಿಗಳಲ್ಲಾಗಲಿ ಈ ಕೂಡಲೇ ಕನ್ನಡ ಬಳಕೆಯನ್ನು ಬಳಸುವಂತೆ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಒಂದು ಪಕ್ಷದಲ್ಲಿ ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಸಂಘಟನೆಯು ಕಟ್ಟಾಳುಗಳ ಮುಂದಾಳತ್ವದಲ್ಲಿ ಕನ್ನಡ ಬಳಸದ ಜಾಹೀರಾತು ಬಳಕೆಗಳಿಗೆ ಮಸಿ ಬಳೆಯುವುದು ಹಾಗೂ ಕನ್ನಡ ಬಳಸದೆ ಓಡಾಡುವ ಶಾಲಾ ವಾಹನಗಳ ವಾಹನಗಳ ಅಡ್ಡ ಹಾಕುವುದು ಅಂತಹ ಶಾಲೆಯ ವಿರುದ್ಧ ಮುತ್ತಿಗೆ ಹಾಕಲಾಗುವುದು ಎಂದು ಸಂಘಟನೆ ಎಚ್ಚರಿಸುತ್ತದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಖಜಾಂಚಿ ಗಣೇಶ್ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಕಾರ್ಯದರ್ಶಿ ರಾಮು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಾಧಿಕ್ ನಗರಾಧ್ಯಕ್ಷ ಜೀವನ್ ಯುವ ಅಧ್ಯಕ್ಷ ಸಂತೋಷ್ ಮಹಿಳಾ ಘಟಕದ ಅಧ್ಯಕ್ಷ ಕವಿತಾ ಉಪಾಧ್ಯಕ್ಷರಾದ ಪದ್ಮ ಮಾಲತಿ ಪ್ರಧಾನ ಕಾರ್ಯದರ್ಶಿ ಆರ್ಥಿಕ ತಿವಾರಿ ಸಂಘಟನಾ ಕಾರ್ಯದರ್ಶಿ ಜ್ಯೋತಿ ನಾಗರಾಜ್ ಪ್ರದೀಪ್ ನೂರಲ್ಲಕಾನ್ ಪ್ರಚಾರ ಸಮಿತಿ ಅಧ್ಯಕ್ಷರಾದ ಮಾಲತೇಶ್ ಮುಂತಾದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...