ಶಿವಮೊಗ್ಗ | 17 ನೆ ವಾರ್ಡ್ ನಲ್ಲಿ, ಮೂಲಭೂತ ಸೌಕರ್ಯಕ್ಕಾಗಿ : ಪೌರಾಯುಕ್ತರಿಗೆ ಮನವಿ

Date:

ಶಿವಮೊಗ್ಗ, ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಪೌರಾಯುಕ್ತ ಕೆ, ಮಾಯಣ್ಣ ಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ತುರ್ತಾಗಿ ಗಮನಹರಿಸುವಂತೆ ಮನವಿ ಸಲ್ಲಿಸಿದರು.

ಎಸ್ ಬಂಗಾರಪ್ಪ ಇಂಡೋರ್ ಶಟಲ್ ಕೋರ್ಟ್ ನ ಕಾಮಗಾರಿ ತುರ್ತಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳುವುದು,ಬಡಾವಣೆಗೆ ಹೋಗುವ ಪ್ರಮುಖ ರಸ್ತೆ ಆಯನೂರು ಗೇಟ್ ನಿಂದ ಶಾರದಾದೇವಿ ಅಂಧ ವಿಕಾಸ ಶಾಲೆಯವರೆಗೆ ರಸ್ತೆ ಗುಂಡಿ ಬಿದ್ದಿದ್ದು ತಕ್ಷಣ ವೆಟ್ ಮಿಕ್ಸಿ ಇಂದ ಗುಂಡಿ ಮುಚ್ಚುವಂತೆ ಕೋರಿದರು.

ಹೈ ವೋಲ್ಟೇಜ್ ವಿದ್ಯುತ್ ಲೈನ್ ನ ಕೆಳಗೆ ಗಿಡಗಂಟೆಗಳು ಬೆಳೆದಿದ್ದು ಇದನ್ನು ತಕ್ಷಣ ತೆರವುಗೊಳಿಸಬೇಕೆಂದು ಮತ್ತು ಚಂದನ ಆರೋಗ್ಯ ಪಾರ್ಕ್ ನ ತಡೆಗೋಡೆ ಕಾಮಗಾರಿ ತ್ವರಿತವಾಗಿ ಮುಗಿಸುವುದು, ಬೀದಿ ನಾಯಿಗಳ ಸಂಖ್ಯೆ ವಿಪರೀತ ಹೆಚ್ಚಳವಾಗಿದ್ದು ತಕ್ಷಣ ಸಂತಾನ ಹರಣ ಚಿಕಿತ್ಸೆ ಕೈಗೊಳ್ಳುವುದು ಹಾಗೂ ಹಂದಿಗಳ ಹೆಚ್ಚಳಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಪಾಲಗೌಡ ಬಡಾವಣೆ ವಾರ್ಡ್ ಹದಿನೇಳರ ವಿಸ್ತರಣೆ ದೊಡ್ಡದಿದ್ದು ಇದಕ್ಕೆ ಹೊಂದಿಕೊಂಡಂತೆ ಸ್ವಾಮಿ ವಿವೇಕಾನಂದ ಬಡಾವಣೆಯ ಕಸ ವಿಲೇವಾರಿಯ ಜವಾಬ್ದಾರಿಯು ಇರುವುದರಿಂದ ಪೌರಕಾರ್ಮಿಕರ ಸಂಖ್ಯೆ ಕಡಿಮೆ ಇರುವುದನ್ನು ಪರಿಗಣಿಸಿ ಹೆಚ್ಚುವರಿ ಕಾರ್ಮಿಕರನ್ನು ನಿಯೋಜಿಸಬೇಕೆಂದರು.

ವಾರ್ಡ್ನಲ್ಲಿ ಅತಿ ಹೆಚ್ಚು ಪಾರ್ಕ್ ಗಳಿದ್ದು ನಿರ್ವಹಣೆ ಇಲ್ಲವಾಗಿದೆ ಪಾರ್ಕ್ ಗಳ ನಿರ್ವಹಣೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಬೇಕೆಂದರು, ವಾರ್ಡಿನ ಒಳಬಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಆದ್ಯತೆ ಮೇರೆಗೆ ಕಾಮಗಾರಿ ಕೈಗೊಳ್ಳಬೇಕೆಂದರು.

ರಾಜ ಕಾಲುವೆಯ ಕಾಮಗಾರಿ ಅವೈಜ್ಞಾನಿಕವಾಗಿದ್ದು ಮಳೆಗಾಲದಲ್ಲಿ ಬಡಾವಣೆಗೆ ನೀರು ನುಗ್ಗುತ್ತಿದ್ದು ವೈಜ್ಞಾನಿಕವಾಗಿ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಅಗ್ರಹಿಸಿದರು. ಬೀದಿ ದೀಪಗಳ ನಿರ್ವಹಣೆ ಅಸಮರ್ಪಕವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವುದು 24/7 ಕುಡಿಯುವ ನೀರಿನ ಯೋಜನೆ ಅವೈಜ್ಞಾನಿಕವಾಗಿದ್ದು ನೀರಿನ ಅಭಾವ ಹೆಚ್ಚಾಗಿದ್ದು ಸಮಸ್ಯೆ ನಿರ್ವಹಣೆಗೆ ತುರ್ತು ಕ್ರಮ ಕೈಗೊಳ್ಳುವುದು ಅವಶ್ಯಕವಿದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಜಿ.ಡಿ. ಮಂಜುನಾಥ್ ಟಿ.ಡಿ ಗೀತೇಂದ್ರಗೌಡ, ಜಿ.ಎಸ್. ಶಿವಕುಮಾರ್,ಚಂದನ ಪಾರ್ಕ್ ನ ಪ್ರಧಾನ ಕಾರ್ಯದರ್ಶಿ ಶ್ರೀ ಗುರುರಾಜ್, ಅಶೋಕ್, ರವಿ, ಬೋರೇಗೌಡ, ನಾಗೇಶ್ ರಂಗೆಗೌಡ್ರು,ಆನಂದ್ ಮತ್ತು17ನೇ ವಾರ್ಡಿನ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಆರ್. ರಾಜಶೇಖರ್ ಹಾಗೂ ಇನ್ನು ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...