ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಂತೆ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.

ಅಂದಹಾಗೇ ಅಶೋಕ್ ಬೇಳೂರು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸಹೋದರರ ಪುತ್ರರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾಗಿದ್ದು, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಾಗಿ ಕೆಲಸ ಮಾಡುತ್ತಿದ್ದಾರೆ.
ಸಾಗರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಯುವ ಮುಖಂಡರಾಗಿರುವಂತ ಅಶೋಕ್ ಬೇಳೂರು ಅವರಿಗೆ ಪಕ್ಷವು ಅವರ ಪಕ್ಷ ನಿಷ್ಠೆಗೆ ನೀಡಿದಂತ ಗೌರವ ಇದಾಗಿದೆ. ಆ ಮೂಲಕ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ, ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ.





