ಶಿವಮೊಗ್ಗ | ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನ : ದಸಂಸ ಖಂಡನೆ

Date:

ಶಿವಮೊಗ್ಗ, ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ಶೂ ಎಸೆತ ಪ್ರಯತ್ನದ ಪ್ರಕರಣವನ್ನು ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಮಿತಿಯ ಗುರುಮೂರ್ತಿ, ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ. ಇದು ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗಲೇ ನಮ್ಮ ದೇಶದ ಸಂವಿಧಾನವನ್ನು ಈ ಸನಾತನವಾದಿಗಳು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕೂತು ನ್ಯಾಯ ಕೊಡುವುದನ್ನು ಈ ಸನಾತನವಾದಿಗಳು ಯಾವೊತ್ತು ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದಿದ್ದಾರೆ.

ಇತ್ತೀಚೆಗೆ ಆರೆಸ್ಸೆಸ್ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ನಿರಾಕರಿಸಿದ ಗವಾಯಿ “ತಾನು ಅಂಬೇಡ್ಕರ್‌ವಾದಿ. ಆರ್ ಎಸ್ ಎಸ್ ನಂತಹ ಕಾರ್ಯಕ್ರಮಕ್ಕೆ ಹೋಗೋಕೆ ಸಾಧ್ಯವೇ ಇಲ್ಲ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಬೆನ್ನಲ್ಲೆ ವಿಚಾರಣೆಯ ವೇಳೆಯಲ್ಲಿ ವಕೀಲನೊಬ್ಬ ಚಪ್ಪಲಿ ಎಸೆಯಲೆತ್ನಿಸಿದ್ದಾನೆ. ಸನಾತನ ಧರ್ಮಕ್ಕೆ ಅಪಮಾನ ಮಾಡಿದರೆ ಸಹಿಸುವುದಿಲ್ಲ ಎಂದು ಉದ್ದಟತನದಿಂದ ಮಾತನಾಡಿರುವುದು ಸನಾತನವಾದಿಗಳ ಮುಖವಾಡ ಕಳಚಿದಂತಾಗಿದೆ ಎಂದಿದ್ದಾರೆ.

ಸಿ ಜೆ ಐ ಗವಾಯಿಯವರು ಉತ್ತರ ಪ್ರದೇಶ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿದ್ದಲ್ಲದೆ ಯಾವುದೇ ಪ್ರಕರಣವಿದ್ದರೂ ಸಂವಿಧಾನದಡಿಯಲ್ಲಿ ಆದೇಶ ನೀಡುತ್ತಿರುವುದು ಸನಾತನವಾದಿಗಳಿಗೆ ಬಿಸಿ ತುಪ್ಪವಾಗಿದೆ.

ಶೂ ಎಸೆದ ವಕೀಲನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸ ಬೇಕು. ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ, ಈ ದಾಳಿಯ ಹಿಂದಿನ ಸನಾತನವಾದಿಗಳ ಹುನ್ನಾರವನ್ನು ಕೇಂದ್ರ ಸರ್ಕಾರ ಬಯಲಿಗೆಳೆಯ ಬೇಕೆಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...