ಶಿವಮೊಗ್ಗ | ಆ. 12ರಿಂದ 14 ; ರಾಜ್ಯದಾದ್ಯಂತ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಧರಣಿ : ಡಿ. ನಾಗಲಕ್ಣ್ಮೀ

Date:

ಶಿವಮೊಗ್ಗ, ಮುಖ್ಯಮಂತ್ರಿಗಳು 7 ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಜಾರಿ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ.

ರಾಜ್ಯಮಟ್ಟದ ಈ ಹೋರಾಟ ಆ. ೧೨ ರಿಂದ ೧೪ ರವರೆಗೆ ರಾಜ್ಯವ್ಯಾಪಿ ಅಹೋರಾತ್ರಿ ಹೋರಾಟ, ಧರಣಿ ನಡೆಸಲಾಗುವುದೆಂದು ಸಂಘದ ರಾಜ್ಯಾಧ್ಯಕ್ಷೆ ಡಿ. ನಾಗಲಕ್ಣ್ಮೀ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸರ್ಕಾರ “ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದುರು.ಈ ವರ್ಷದ ಬಜೆಟ್‌ ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಿಸಿದಂತೆ 42000 ಆಶಾ ಕಾರ್ಯಕರ್ತೆಯರಿಗೆ ರೂ.1000 ಹೆಚ್ಚಳ ಮಾಡಬೇಕು. ಆದರೆ ಈ ಬಜೆಟ್‌ನಲ್ಲಿ ಕೇವಲ 15004 ಆಶಾಗಳಿಗೆ ಕಡಿಮೆ ಇದ್ದ ಆಧಾರಿತ ಪ್ರೋತ್ಸಾಹಧನ ರೂ. ಒಂದು ಸಾವಿರ ಮಾತ್ರ ನೀಡಲಾಗಿದೆ ಎಂದರು.

ಏಪ್ರಿಲ್ 2025ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10,000 ಗಳ ಗೌರವಧನವನ್ನು ನೀಡಲಾಗುವುದು. ರೂ.10,000 ಹೊರತುಪಡಿಸಿ, ಕಾಂಪೋನೆಂಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆಂಟ್ಸ್‌ಗಳಿಂದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, 10,000 ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಕೂಡಲೇ ಸರ್ಕಾರದಿಂದ ಆದೇಶಿಸಬೇಕು ಎಂದರು.

ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್‌ ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದರು. ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು. ಮಾಧ್ಯಮಗಳಲ್ಲೂ ಕೂಡ ಅಧಿಕೃತವಾಗಿ ಮುಖ್ಯಮಂತ್ರಿ ಘೋಷಿಸಿರುತ್ತಾರೆ. ಆಡಳಿತ ಪಕ್ಷದ ಹಲವಾರು ಸಚಿವರುಗಳು, ಶಾಸಕರು ಈ ಬಗ್ಗೆ ಪೋಸ್ಟಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಆದರೆ ನೋವಿನ ವಿಷಯವೆಂದರೆ ಇಲ್ಲಿಯವರಗೆ 7 ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ ಆದೇಶ ಹೊರಬಿದ್ದಿಲ್ಲ ಎಂದು ವಿಷಾದಿಸಿದರು. ಆಶಾಗಳಲ್ಲಿಯೇ ಒಬ್ಬರನ್ನು ಕಳೆದ 10 ವರ್ಷಗಳಿಂದ 20 ಆಶಾಗಳಿಗೆ ಒಬ್ಬರಂತೆ ಸುಮಾರು 2000 ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವರು.

ಆದರೆ ಸೂಕ್ತ ಪರಿಹಾರ ನೀಡಿರುವುದಿಲ್ಲ. 6೦ವರ್ಷ ಆದವರನ್ನು ದಿಢೀರ್ ಅಂತ ತೆಗೆದುಹಾಕಲಾಗುತ್ತಿದೆ. ಇವರಿಗೆ ಯಾವುದೇ ಪರಿಹಾರ ಕೊಟ್ಟಿಲ್ಲ ಎಂದರು ಆಶಾ ಆನ್ಲೈನ್ ದಾಖಲಾತಿಯನ್ನು (ಆಶಾ ಸಾಫ್ಟ್) ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಈಗಾಗಲೇ ಈ ಆನ್ಲೈನ್ ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ, ವೆರಿಫೈ ಮಾಡದಿರುವ ಬಗ್ಗೆ, ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿಂದ ಹೋರಾಡುತ್ತಲೇ ಇದ್ದೇವೆ.

ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ. ಈಗಾಗಲೇ ರಾಜ್ಯದ ಆಶಾಗಳು ಕೋಟ್ಯಂತರ ರೂ.ಗಳ ನಷ್ಟವನ್ನು ಈ ಆನ್ಲೈನ್ ದಾಖಲಾತಿಯಿಂದ ಅನುಭವಿಸುತ್ತಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...