ಶಿವಮೊಗ್ಗ | ಭದ್ರಾವತಿ ಬಾಬಾ ಸಾಹೇಬರ ವಿಚಾರಧಾರೆ ಮೈಗೂಡಿಸಿಕೊಳ್ಳಿ: ಡಾ. ಸಿದ್ದರಾಜು

Date:

ಡಾ. ಬಿ. ಆರ್. ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಿ ಎಂದು ಡಾ. ಸಿದ್ದರಾಜು ಇಂದು ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು.

ಡಾ. ಬಿ. ಆ‌ರ್. ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್ (ರಿ), ಭದ್ರಾವತಿಯ ಅಡಿಯಲ್ಲಿ ನಡೆಯುತ್ತಿರುವ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 12-04-2025 ರಂದು ಡಾ. ಬಿ. ಆರ್ ಅಂಬೇಡ್ಕರ್‌ರವರ ಜನ್ಮದಿನಾಚರಣೆ ಪ್ರಯುಕ್ತ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ ಬಿ.ಇಡಿ ಕಾಲೇಜುಗಳ ಡಾ. ಬಿ. ಆರ್ ಅಂಬೇಡ್ಕರವರ ವಿಚಾರಧಾರೆಗಳ ಕುರಿತು ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಅರಳಿಹಳ್ಳಿ ಅಣ್ಣಪ್ಪ, ಭಾಷಾ ಶಿಕ್ಷಕರು. ಸರ್ಕಾರಿ ಪ್ರೌಢಶಾಲೆ ಅರಕೆರೆರವರು ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಶ್ರೀಯುತರು, ಅಂತರ ಬಿ.ಇಡಿ ಕಾಲೇಜುಗಳ ಸ್ಪರ್ದೆ ಏರ್ಪಡಿಸಿರುವುದು ಶ್ಲಾಘನೀಯ, ಇಂದಿನ ಜಗತ್ತಿನಲ್ಲಿ ಯುವಜನತೆಯು ಮೊಬೈಲ್‌ನಲ್ಲಿ ಸಮಯ ಕಳೆಯುತ್ತಿದ್ದು, ಆದರ್ಶ, ಮಹಾನ್ ನಾಯಕರಾದಂತಹ ಡಾ.ಬಿ.ಆರ್ ಅಂಬೇಡ್ಕ‌ರ್, ಬುದ್ಧ, ಬಸವಣ್ಣನವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು, ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಂಡು, ಇತರರಿಗೆ ಮಾದರಿಯಾಗಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶಿಕ್ಷಕರಾದ ಸುದೀಂದ್ರ ರೆಡ್ಡಿ, ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜ್ಞಾನವನ್ನು ಗಳಿಸಿಕೊಳ್ಳುವುದರ ಜೊತೆಗೆ ಇಂದಿನ ಆಧುನಿಕ ಜಗತ್ತಿಗೆ ಅವಶ್ಯಕವಾದ ಸಂವಹನ ಕೌಶಲ್ಯಗಳನ್ನು, ಕಲಿತು ವೃತ್ತಿ ನಿರ್ಮಾಣ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದಂತಹ ಡಾ.ಸಿದ್ದರಾಜು, ಇಂದಿನ ಜಗತ್ತಿನಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ವಿಚಾರಧಾರೆಗಳು ಎಂದೆಂದಿಗೂ ಅತ್ಯವಶ್ಯಕ. ಡಾ.ಬಿ.ಆರ್ ಅಂಬೇಡ್ಕರ್‌ರವರ ಚಿಂತನೆಗಳೇ ನಮಗೆ ದಾರಿದೀಪ, ಎಲ್ಲರ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಆ ನಿಟ್ಟಿನಲ್ಲಿ ಭಾವೀ ಶಿಕ್ಷಕರರಾಗುವ ತಾವೆಲ್ಲರೂ ಜ್ಞಾನದ ಜೊತೆ ವೃತ್ತೀಯ ಕೌಶಲ್ಯಗಳಾದ ಸಂವಹನ, ಚಿತ್ರಕಲೆ, ಭಾಷಣ ಕಲೆಗಳನ್ನು ಕಲಿತು, ವಿವಿಧ ರಂಗಗಳಲ್ಲಿ ಸಾಧನೆ ಮಾಡುವ ಮೂಲಕ ಮಾನಸಿಕ ನೆಮ್ಮದಿ, ಸಂತೋಷದ ಜೀವನವನ್ನು ನಡೆಸಲು ಕಾರಣವಾಗಲಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಬಿ.ಇಡಿ ಕಾಲೇಜುಗಳ ಪ್ರಶಿಕ್ಷಣಾರ್ಥಿಗಳು ಮತ್ತು ಉಪನ್ಯಾಸಕರುಗಳು, ಹಾಗೂ ನಿರ್ದೇಶಕರಾದ ನೇತ್ರಾವತಿ ಸುಭಾಷ್, ಸಾವಿತ್ರಿ ಗಣೇಶಪ್ಪ, ಹನುಮಂತಪ್ಪ ಎಸ್. ಸಂಶೋಧಕರು, ಪವನ್‌ರಾಜ್, ಪ್ರಜ್ವಲ್ ಕುಮಾರ್, ತೀರ್ಪುಗಾರರಾಗಿ ನಾಗೇಶ್ ಮುಖ್ಯಶಿಕ್ಷಕರು, ಹೊಸಮನೆ, ತಮಟೆ ಜಗದೀಶ್, ಕಲಾವಿದರು, ಭದ್ರಾವತಿ ಶ್ರೀಯುತ ಶಿವಕುಮಾರ್, ಚಿತ್ರಕಲಾ ಶಿಕ್ಷಕರು, ಡಾ.ವೈ.ಕೆ. ಹನುಮಂತಯ್ಯ, ಹಿರಿಯ ರಂಗ ಕಲಾವಿದರು ಭದ್ರಾವತಿ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...