ಶಿವಮೊಗ್ಗ | ಸ್ವಾತಂತ್ರ್ಯ ಹೋರಾಟದ ಧೃವತಾರೆ ಭಗತ್ ಸಿಂಗ್ : ಶಾಸಕ ಚನ್ನಬಸಪ್ಪ

Date:

ಶಿವಮೊಗ್ಗ, ಸ್ವಾತಂತ್ರ್ಯ ಹೋರಾಟದ ಧೃವತಾರೆಯಾಗಿದ್ದ ಭಗತ್ ಸಿಂಗ್ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿವಮೊಗ್ಗ ಶಾಸಕ ಚನ್ನಬಸಪ್ಪ ಹೇಳಿದ್ದಾರೆ.

ಶಿವಮೊಗ್ಗದ ಗಾಂಧಿ ಬಜಾರ್ ನ ಉಪ್ಪಾರ ಕೇರಿಯಲ್ಲಿ, ಭಗತ್ ಸಿಂಗ್ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕ್ರಾಂತಿಕಾರಿ ಭಗತ್ ಸಿಂಗ್ ಅವರ 118 ಜನುಮ ದಿನಾಚರಣೆ ಕಾರ್ಯಕ್ರಮಕ್ಕೆ ಭಗತ್ ಸಿಂಗ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಚಾಲನೆ ನೀಡಿ ಅವರು ಮಾತನಾಡಿದರು.

1002317379

ಭಗತ್ ಸಿಂಗ್ ಎಂಬ ಕಿಚ್ಚು ಎಲ್ಲರಲ್ಲೂ ಅದರಲ್ಲೂ ಯುವಕರ ಮನದಲ್ಲಿ ಮೂಡಬೇಕು. ಅವರ ವಿಚಾರಗಳನ್ನು ವಿದ್ಯಾರ್ಥಿ ಹಾಗೂ ಯುವ ಜನರು ಸ್ಫೂರ್ತಿಯಾಗಿ ತಗೆದುಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಾಂತಿಕಾರಿಯಾಗಿದ್ದ ಭಗತ್ ಸಿಂಗ್ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ರು. ದೇಶದ ವಿರುದ್ಧವಾಗಿ ಯಾರೆ ಬಂದರೂ ಅವರನ್ನು ಸದೆಬಡಿಯುವಂತೆ ಅಂದಿನ ಕಾಲದಲ್ಲೇ ಕರೆ ನೀಡಿದ್ದರು ಎಂದರು.

ಭಗತ್ ಸಿಂಗ್ ಎಂದರೆ ರೋಮಾಂಚನಗೊಳ್ಳುವ ಒಂದು ದೊಡ್ಡ ಶಕ್ತಿ. ಭಾರತದ ಸ್ವಾತಂತ್ರ್ಯ ಚಳವಳಿಗೆ ಯುವಕರ ಪಡೆಯನ್ನು ಒಗ್ಗೂಡಿಸಿ ಪ್ರಮುಖ ಪಾತ್ರವಹಿಸಿದ ಭಗತ್ ಸಿಂಗ್ ಇಂದಿನ ಅವ್ಯವಸ್ಥೆ, ಅನ್ಯಾಯದ ವಿರುದ್ಧವಾಗಿ ಸ್ಫೂರ್ತಿಯಾಗಬೇಕಿದೆ ಎಂದು ತಿಳಿಸಿದರು.

1002317380

ಆ ನಿಟ್ಟಿನಲ್ಲಿ ವಿದ್ಯಾರ್ಥಿ-ಯುವಜನರ ಆಲೋಚನೆ ಮಾಡಬೇಕು ಎಂದು ಚನ್ನಬಸಪ್ಪ ಹೇಳಿದರು.

ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಜನುಮ ದಿನಾಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ನು, ಪೆನ್ಸಿಲ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಬಳಿಕ ನೂರಾರು ಜನರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್, ಮಾಜಿ ಸೈನಿಕರಾದ ಬಾನೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರಾದ ಅರುಣಗಿರಿ, ಮಂಜು ಆರ್.ಟಿ.ಆರ್. ರಘು ಗೌಡ, ಸಂಜು, ಶಶಿ ಕುಮಾರ್ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...