ಶಿವಮೊಗ್ಗ | ಬಿಜೆ.ಪಿ., ಆರ್.ಎಸ್.ಎಸ್.ನದ್ದು ಸಂವಿಧಾನ ಆಶಯಗಳಿಗೆ ವಿರುದ್ಧ ನಿಲುವು : ಕಿಮ್ಮನೆ ರತ್ನಾಕರ್

Date:

ಶಿವಮೊಗ್ಗ, ಬಿ.ಜೆ.ಪಿ. ಮತ್ತು ಆರ್.ಎಸ್.ಎಸ್. ಪರಿವಾರದವರು ಸಂವಿಧಾನ ಆಶಯಗಳಿಗೆ ವಿರುದ್ಧವಾದ ನಿಲುವನ್ನು ಹೊಂದಿವೆ. ಇಂದಿನ ಬಿ.ಜೆ.ಪಿ. ಕೇಂದ್ರ ಸರ್ಕಾರ, ಹೆಡಗೆವಾರ್, ಗೊಳ್ವಾಳ್ಕರ್‍ಳ್, ಸಾವರ್‌ಕರ್, ಗಾಂಧಿಹಂತಕ ನಾಥುರಾಮ ಗೋಡ್ಸೆ ಬೆಂಬಲಿತ ಚಿಂತನ ಗಂಗಾ ಕೃತಿ, ಸಂಘದರ್ಶನದ, ಸಂವಿಧಾನವನ್ನು, ತಂತ್ರಗಾರಿಕೆಯ ಹಿಂಸೆಯನ್ನು ಪ್ರತಿಪಾದಿಸುವ ವಿಚಾರ ಧಾರೆಯನ್ನು ಅನುಷ್ಠಾನಗೊಳಿಸುವ ಕೇಂದ್ರದ ಬಿ.ಜೆ.ಪಿ. ಸರ್ಕಾರವನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧಿ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ನಾರಾಯಣ ಗುರು, ಜವಹಾರ್‌ಲಾಲ್ ನೆಹರು ಪ್ರತಿಪಾದನೆ ಮಾಡಿದ, ಸಮಾಜವಾದಿ ಚಿಂತನೆಯ, ಜಾತ್ಯತೀತ ನಿಲುವಿನ, ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನವು ಜನರ ಆಶಯಗಳಿಗೆ ಪೂರಕ ನೀತಿಯನ್ನು ಹೊಂದಿದೆ.

ಕಾಂಗ್ರೆಸ್ ಸರ್ವರನ್ನು ಎಲ್ಲ ಜಾತಿ, ಧರ್ಮದವರನ್ನು ಒಳಗೊಳ್ಳುವ, ಶಾಂತಿ ನೆಮ್ಮದಿಯ, ಅಹಿಂಸೆಯ, ಜಾತ್ಯಾತೀತ, ಬಹುತ್ವದ ಭಾರತವನ್ನು ಕಟ್ಟುವ ಮತ್ತು ದೇಶದಲ್ಲಿನ ಸಾಮಾಜಿಕ ಅಸಮಾನತೆ ಮತ್ತು ಶೈಕ್ಷಣಿಕ ಅಸಮಾನತೆಯನ್ನು ತೆಗೆದುಹಾಕಿ, ಸಹಬಾಳ್ವೆಯ ವಾತಾವರಣವನ್ನು ನಿರ್ಮಿಸುವುದು ಕಾಂಗ್ರೆಸ್ ಪಕ್ಷದ ಮೂಲತತ್ವವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೇಣೀಕೃತ ಸಮಾಜವನ್ನು ಸಮರ್ಥಿಸುವ, ಮೀಸಲಾತಿಯನ್ನು ವಿರೋಧಿಸುವ, ಸಂವಿಧಾನವನ್ನು ಬದಲಿಸುವ, ದಲಿತ ಸಮಾಜದ ಅಸ್ಪೃಶ್ಯತೆಯನ್ನು ಉಳಿಸಿ ಮನುಷ್ಯನ ದೇಹದಿಂದ ಅವರನ್ನು ಹೊರಗಿಡುವ, ದೇಶದ ಒಕ್ಕೂಟ ವ್ಯವಸ್ಥೆಯನ್ನು ರದ್ದು ಮಾಡಿ, ದೇಶಕ್ಕೆ ಒಂದೇ ಸಂಸತ್, ಒಂದೇ ಭಾಷೆ (ಸಂಸ್ಕೃತಿ), ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಉಳಿಸಿಕೊಂಡು, ದೇಶದಲ್ಲಿನ ಎಲ್ಲಾ ರಾಜ್ಯ ಭಾಷೆಗಳೊಂದಿಗೆ ಇತರೆ ೪೦೦೦ ಸಾವಿರ ಭಾಷೆಗಳು (ರದ್ದು ಮಾಡುವ) ಅಗತ್ಯವಿಲ್ಲ ಎಂದು ಹೇಳುವ ಮೂಲಕ ಇಂಗ್ಲೀಷ್‌ನ್ನು ತೆಗೆದು ಹಾಕಿ, ಇಂದಿನ ರಾಷ್ಟ್ರಧ್ವಜವನ್ನು ತೆಗೆದು ಹಾಕಿ ಚಿಂತನ ಗಂಗ ಪ್ರತಿಪಾದಿಸುವ ಭಾಗಧ್ವಜವನ್ನು ರಾಷ್ಟ್ರಧ್ವಜವನ್ನು ಮಾಡಬೇಕು ಎನ್ನುವ ಉದ್ದೇಶದಿಂದ ೫೨ ವರ್ಷ ಆರ್.ಎಸ್.ಎಸ್. ಕೇಂದ್ರ ಕಚೇರಿ ನಾಗಪುರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಿಲ್ಲ. ಬಿ.ಜೆ.ಪಿ. ಮತ್ತು ಪರಿವಾರದವರು, ಸಂವಿಧಾನ ಒಪ್ಪಿದರೆ, ಚಿಂತನಗಂಗ, ಕೃತಿ ಸಂಘ ರೂಪದರ್ಶನ ವಿಚಾರ ಧಾರೆಯನ್ನು ತಿರಸ್ಕಾರ ಮಾಡಬೇಕು. ಎರಡು ಒಂದಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿ.ಜೆ.ಪಿ.ಗೆ ರಾಷ್ಟ್ರದಲ್ಲಿ ೩೬೦ ಸಂಸತ್ ಸದಸ್ಯರ ಆಯ್ಕೆಗೊಂಡ ದಿನ ದೇಶದ ನಮ್ಮ ಸಂವಿಧಾನವನ್ನು ತೆಗೆದು ಹಾಕಿ, ಚಿಂತನ ಗಂಗ ಮತ್ತು ಜನವಿರೋಧಿ, ಮನುಷತ್ವ ಮತ್ತು ಮಾನವೀಯತೆಯ ವಿರೋಧ ಕೃತಿ ಸಂಘ ರೂಪದರ್ಶನ ವಿಚಾರ ಧಾರೆಯನ್ನು ಅನುಷ್ಠಾನಗೊಳಿಸುತ್ತಾರೆ.

ಇಂದಿನ ಭಾರತದ ಸಂವಿಧಾನವನ್ನು ಈಗ ಬಿ.ಜೆ.ಪಿ. ಸಮರ್ಥಿಸುವ ವಿಧಾನ, ತಮ್ಮ ಗುರಿಮುಟ್ಟುವವರೆಗಿನ ಒಂದು ತಂತ್ರಗಾರಿಕೆಯಷ್ಟೆ ಎಂದ ಅವರು, ಕಾಂಗ್ರೆಸ್ ಬಿಜೆಪಿಯ ಈ ಎಲ್ಲ ನಿಲುವುಗಳ ವಿರುದ್ಧ ಸದಾ ಹೋರಾಟ ಮುಂದುವರೆಸಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ, ಶಿವಾನಂದ್, ಕಲಗೋಡು ರತ್ನಾಕರ್ ಮೊದಲಾದವರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...