ಶಿವಮೊಗ್ಗ | ದಸರಾ ವಿಚಾರದಲ್ಲಿ ಬಿಜೆಪಿಯವರದ್ದು ಕ್ಷುಲ್ಲಕ ರಾಜಕೀಯ : ಹೆಚ್ ಸಿ ಯೋಗೇಶ್

Date:

ಶಿವಮೊಗ್ಗ: ಮೈಸೂರು ದಸರಾ ಉದ್ಘಾಟನೆ ವಿಚಾರದಲ್ಲಿ ಬಿಜೆಪಿಯವರು ಜಾತಿ, ಧರ್ಮ ನೋಡಬಾರದು. ಇದು ನಾಡಹಬ್ಬ. ಎಲ್ಲರೂ ಸೇರಿ ಆಚರಿಸಬೇಕು. ಆದರೆ ಉದ್ಘಾಟನೆಯ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹೆಚ್ ಸಿ ಯೋಗೀಶ್ ದೂರಿದ್ದಾರೆ.

ಮಂಗಳವಾರ ಸುದ್ದಿಗೋಷ್ಠ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆಯುವ ನಾಡಹಬ್ಬ ಆಚರಣೆಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಜವಾಬ್ದಾರಿ ನೀಡಲಾಗಿದೆ.

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಸೂಕ್ತ ವ್ಯಕ್ತಿ ಎಂದು ಆಯ್ಕೆ ಮಾಡಿದಾಗ ಬಿಜೆಪಿ ಟ್ವೀಟ್ ಮತ್ತು ಸುದ್ದಿಗೋಷ್ಠಿಯ ಮೂಲಕ ವಿರೋಧಿಸಿದ್ದಾರೆ. ಬಾನು ಸಾಹಿತ್ಯದಲ್ಲಿ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ಇದು ಕನ್ನಡಿಗರ ಹೆಮ್ಮೆಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ಫೋಸಿಸ್ ನಾರಾಯಣಮೂರ್ತಿ ಅವರ ಅಳಿಯ ನಮ್ಮವರು ಎನ್ನುವ ಬಿಜೆಪಿಗೆ ಬಾನು ಮುಷ್ತಾಕ್ ನಮ್ಮ ರಾಜ್ಯದವರೇ ಎನ್ನುವುದು ಮರೆತಂತಿದೆ. ಅವರ ವಿಚಾರದಲ್ಲಿ ಡಬ್ಬಲ್ ಸ್ಟ್ಯಾಂಡರ್ಡ್ ತೋರುತ್ತಾರೆ.

ಶಿವಮೊಗ್ಗದಲ್ಲಿಯೂ ಚಾಮುಂಡಿ ಬೆಳ್ಳಿ ವಿಗ್ರಹದ ಮೆರವಣಿಗೆ ಆರಂಭಿಸಿದ್ದು ಸಿಎಂ ಸಿದ್ದರಾಮಯ್ಯ. ಅಂಬೇಡ್ಕರ್ ಮತ್ತು ಬೆಳ್ಳಿ ಮೂರ್ತಿಯ ಚಾಮುಂಡಿಯನ್ನು ೨೦೧೭ ರಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಆಗ ಮಹಾನಗರ ಪಾಲಿಕೆಗೆ ಖುರ್ಷಿದಾನು ಮೇಯರ್ ಆಗಿದ್ದರು. ಸಾಹಿತಿ ನಾ.ಡಿಸೋಜಾ, ನಿಸಾರ್ ಅಹಮದ್ ಸಹ ದಸರಾ ಉದ್ಘಾಟಿಸಿದ್ದಾರೆ. ಇದರಲ್ಲೆಲ್ಲ ರಾಜಕೀಯವನ್ನು ಬಿಜೆಪಿಯರು ಕೈ ಬಿಟ್ಟು ಜನ ಮೆಚ್ಚುವಂತೆ ಸಲಹೆ ಕೊಡಲಿ ಎಂದು ಸಲಹೆ ನೀಡಿದರು.

ಶಿವಮೊಗ್ಗಕ್ಕೆ ದಸರಾಕ್ಕೆ ಬರುವ ಆನೆಗೆ ಮಾವುತರು ಮುಸ್ಲೀಂ ಆಗಿರುತ್ತಾರೆ. ದೇವರ ವಿಗ್ರಹವನ್ನು ಆನೆಯ ಮೇಲೆ ಇಡುವರು, ಇಳಿಸುವವರು ಅವರೇ ಆಗಿದ್ದಾರೆ. ದಸರಾದಲ್ಲಿ ಅಂಬು ಕಡಿಯುವುದು ತಹಶೀಲ್ದಾರ್. ತಹಸೀಲ್ದಾರ್ ಒಂದು ವೇಳೆ ಮುಸ್ಲೀಂ ಆಗಿದ್ದರೆ ಅದನ್ನೂ ಬಿಜೆಪಿಯವರು ವಿರೋಧಿಸುತ್ತಿದ್ದರು.

ಇವರನ್ನು ಬೇಡ ಎನ್ನಲಾಗುತ್ತದೆಯೇ ಎಂದು ಪ್ರಶ್ನಿಸಿದ ಅವರು, ದಸರಾ ಉದ್ಘಾಟನೆಯ ವಿಚಾರದಲ್ಲಿ ಶಿವಮೊಗ್ಗದ ಶಾಸಕರು ಎಚ್ಚರಿಕೆ ಗಂಟೆ ನೀಡಿದ್ದಾರೆ. ನಾಡಹಬ್ಬಕ್ಕೆ ಶಾಸಕರು ಎಚ್ಚರಿಕೆ ನೀಡುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...