ಶಿವಮೊಗ್ಗ | ಬೌದ್ಧ ಧರ್ಮ ಭಾರತೀಯ ಮೂಲ ಧರ್ಮ, ಭಾರತೀಯ ಸಂಸ್ಕೃತಿಯಲ್ಲಿ ಅಡಗಿದೆ: ಶಿವಬಸಪ್ಪ

Date:

ಬೌದ್ಧ ಧರ್ಮದ ಅನುಸರಣೆ ಆಚರಣೆಯ ಮೂಲಕ ನಾವು ನಮ್ಮ ಮೂಲ ಧರ್ಮಕ್ಕೆ ಹಿಂತಿರುಗಿದಂತೆ ಎಂದು ನಿವೃತ್ತ ಪ್ರಾಚಾರ್ಯ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಶಿವಬಸಪ್ಪ ತಿಳಿಸಿದರು.ಅವರು ಭದ್ರಾವತಿ ತಾಲೂಕಿನ ಹೊಸ ನಂಜಾಪುರದ ಬುದ್ಧ ದಮ್ಮಂಕುರ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಬುದ್ಧ ಪೂರ್ಣಿಮೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧರ್ಮವನ್ನು ಸ್ವೀಕರಿಸಿದ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಇದಕ್ಕೆ ಬಹುದೊಡ್ಡ ಸಾಕ್ಷಿಯಾಗಿದ್ದಾರೆ. ಅಸ್ಪೃಶ್ಯತೆ, ಜಾತಿ ವ್ಯವಸ್ಥೆ , ಮೇಲು ಕೀಳುಗಳಿಂದ ಕೂಡಿದ ಹಿಂದೂ ಧರ್ಮವನ್ನು ತೊರೆದ ಡಾ. ಅಂಬೇಡ್ಕರ್ ಸ್ವಾತಂತ್ರ್ಯ ಸಮಾನತೆ ಹಾಗೂ ಸಹೋದರತೆಗಳಿಂದ ಕೂಡಿದ ಬೌದ್ಧ ಧರ್ಮ ಸ್ವೀಕರಿಸುವ ಮೂಲಕ ಅವರು ತಮ್ಮ ಮೂಲ ಧರ್ಮಕ್ಕೆ ಹಿಂತಿರುಗಿದ್ದಾರೆ ಎಂದು ಅವರು ಹೇಳಿದರು.

ಮುಖ್ಯ ಪ್ರವಾಚಕರಾಗಿ ಆಗಮಿಸಿ ಮಾತನಾಡಿದ, ಕುವೆಂಪು ವಿಶ್ವವಿದ್ಯಾನಿಲಯದ ಶಿಕ್ಷಣ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಂದೀಪ್ ಚೌಲಿಹಳ್ಳಿ ಬುದ್ಧ ಪೂರ್ಣಿಮಾ ಜಯಂತಿ 2025 ‘ನಿನಗೆ ನೀನೆ ಬೆಳಕು’ ಎಂಬ ಬುದ್ಧರ ಶಾಶ್ವತ ಸಂದೇಶದ ಪ್ರಭಾವವು ಇಂದು ಹೆಚ್ಚು ಅಗತ್ಯವಿದೆ. ಇಂದಿನ ಸಮಾಜದಲ್ಲಿ ಬುದ್ಧರ ಸಂದೇಶ ಅಂದರೆ’ ನಿನಗೆ ನೀನೆ ಬೆಳಕು’ ಎಂಬ ಸಂದೇಶವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬುದ್ಧ ದಮ್ಮಾಂ ಕುರ ಟ್ರಸ್ಟಿನ ಕಾರ್ಯದರ್ಶಿ ಶ್ರೀನಿವಾಸ್ ವಹಿಸಿದ್ದರು.ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಪೇಪರ್ ಸುರೇಶ್, ನಿವೃತ್ತ ಅಬಕಾರಿ ಇನ್ಸ್ಪೆಕ್ಟರ್ ಸಾವಕ್ಕನವರ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ರಘು ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ದಮ್ಮಾಧಿಕಾರಿ ಶೇಖರ್ ನಾಯಕ್ ಅವರು ಬುದ್ಧ ವಂದನೆ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...