ಶಿವಮೊಗ್ಗ | ಹೂವಿನಕೋಣೆ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣ ; ವಿದ್ಯಾರ್ಥಿ ಹುಡುಗಾಟದಿಂದ ಘಟನೆ

Date:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಾಲೂಕಿನ ಕೇಶವಪುರ ಮಾರುತಿ ಪುರದ ಸಮೀಪದ ಹೂವಿನ ಕೋಣೆ ಎಂಬ ಊರು ಈಗ ಸುದ್ದಿಯಲ್ಲಿದೆ ಬಹುತೇಕ ಗಂಗಾಮತಸ್ಥರೇ ಇರುವ ಊರಿನಲ್ಲಿ ಸುಮಾರು 45 ಮನೆಗಳಿವೆ ಮಟ್ಟಿ ಮನೆ ದೊಡ್ಡೇರಿ ಎನ್ನುವ ಎರಡು ಕುಟುಂಬಗಳು ಇರುವ ಊರಿನಲ್ಲಿ ಒಂದರಿಂದ ಐದನೇ ತರಗತಿಯ ಸರ್ಕಾರಿ ಶಾಲೆ ಇದೆ ಸುಮಾರು 18 ಜನ ಮಕ್ಕಳು ಇಲ್ಲಿ ಓದುತ್ತಿದ್ದಾರೆ.

ಹೂವಿನಕೋಣೆ ಸರ್ಕಾರಿ ಶಾಲೆಗೆ ತನ್ನದೇ ಆದ ಹಿಂದೆ ಅಲ್ತಾಫ್ ಹಾಗೂ ತೀರ್ಥ್ ಕುಮಾರ್ ಎನ್ನುವ ಶಿಕ್ಷಕರು ಇದ್ದಾಗ ಈ ಶಾಲೆ ಉತ್ತುಂಗ ಸ್ಥಿತಿಯಲ್ಲಿತ್ತು ಆಗ ಸುಮಾರು 35 ಜನ ಮಕ್ಕಳಿದ್ದರು ಈಗ ಅದು 18 ಜನಕ್ಕೆ ಇಳಿದಿದೆ. ಈಗ ಅಲ್ತಾಫ್ ಹಾಗೂ ತೀರ್ಥ್ ಕುಮಾರ್ ಇಬ್ಬರ ಟೀಚರ್ ಗಳು ಇಲ್ಲ ಈಗ ಅತಿಥಿ ಶಿಕ್ಷಕರುಗಳು ಇದ್ದಾರೆ ಒಬ್ಬರು ಶಿವಮೊಗ್ಗದಿಂದ ಬಂದರೆ ಇನ್ನೊಬ್ಬರು ಸ್ಥಳೀಯ ವಿಜಯಪುರದಿಂದ ಬರುತ್ತಾರೆ

ಸ್ಥಳೀಯವಾಗಿ ಬರುವ ಅತಿಥಿ ಟೀಚರ್ ಮಹಿಳೆ ಆಗಿದ್ದಾರೆ. ಇವರ ಜೊತೆಗೆ ಅಡುಗೆ ಮಾಡುವ ಸಿಬ್ಬಂದಿ ಒಬ್ಬರು ಇದ್ದಾರೆ ಒಟ್ಟಾರೆ ನಾಲ್ಕು ಜನ ಇದ್ದಾರೆ. ಈ ಶಾಲೆ ಈಗ ಸುದ್ದಿಯಲ್ಲಿದೆ ಏಕೆಂದರೆ ಈ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಹಾಕಲಾಗಿದೆ. ಇದು ದೊಡ್ಡ ಮಟ್ಟದ ಸುದ್ದಿಯಾಗಿದ್ದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣ ತನಿಖೆ ನಡೆಸುವಂತೆ ಎಸ್ ಪಿ ಅವರಿಗೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್ ಪಿ ಮಿಥುನ್ ಕುಮಾರ್ ಅವರು ಸಹ ಸ್ಥಳಕ್ಕೆ ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿ ನಾಲ್ಕು ತಂಡಗಳನ್ನು ರಚನೆ ಮಾಡಿ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದರು.

1002005507

ಇವರ ಆದೇಶದ ಮೇರೆಗೆ ವಿವಿಧ ಹಂತಗಳಲ್ಲಿ ತನಿಖೆ ನಡೆಯುತ್ತಿದೆ ಆಡಳಿತ ಮಂಡಳಿ, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಪೋಷಕರು, ಊರಿನ ಜನರು, ಇವೆಲ್ಲದರ ಜೊತೆಗೆ ಶಾಲೆಯ ಮಕ್ಕಳನ್ನು ಪೊಲೀಸ್ ಇಲಾಖೆ ವಿಚಾರಣೆಗೆ ಒಳಪಡಿಸಿದ್ದರು.

ಹೂವಿನಕೋಣೆ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದಿಂದ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ನಾಲ್ಕು ದಿನಗಳ ಹಿಂದೆ ದಾಖಲಾಗಿದ್ದರು. ಬಹಳ ಗಂಭೀರವಾಗಿದ್ದ ವಿಷಯ ಮಕ್ಕಳಾಟಿಕೆಯಲ್ಲಿ ಕೊನೆಯಾಗಿದೆ. ಮಕ್ಕಳ ಹುಡುಗಾಟಿಕೆಯಲ್ಲಿ ನೀರಿಗೆ ವಿಷ ಬೆರೆಸಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರವರು ಸಹ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಭಯೋತ್ಪಾದನೆಗಿಂತ ಗಂಭೀರ ವಿಷಯ ಎಂದು ತಿಳಿಸಿದ್ದರು.

ಸಿಎಂ ಅವರ ಅದೇಶ ಬೆನ್ನಲ್ಲೇ ತನಿಖೆ ಚುರುಕುಗೊಂಡಿತ್ತು. ಪೊಲೀಸರು ಫುಲ್ ಅಲರ್ಟ್ ಆಗಿದ್ದು ವಿವಿಧ ರೀತಿಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣ ಭೇದಿಸಲು ಮೂರು ತಂಡಗಳ ರಚನೆಯನ್ನು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಡಿದ್ದರು. ತನಿಖೆಗಾಗಿ ಒಟ್ಟು 18 ಪೊಲೀಸರ ನಿಯೋಜಿಸಿದ್ದರು.

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ತಂಡ ರಚನೆ ಆಗಿತ್ತು. ಟೆಕ್ನಿಕಲ್ ಎವಿಡೆನ್ಸ್ ಕಲೆಹಾಲು ಪೊಲೀಸರು ಮುಂದಾಗಿದ್ದಾರೆ. ಟವರ್ ಡಂಪ್ ಮೂಲಕ ತನಿಖೆ ಆರಂಭ ಮಾಡಿದ್ದರು.

1002005506

ಐದನೇ ತರಗತಿಯ ಬಾಲಕನೇ ಈ ಕೃತ್ಯ ನಡೆಸಿರುವುದಾಗಿ ತನಿಖೆಯಿಂದ ಬೆಳಕಿಗೆ ಬಂದಿದೆ.ಈ ಘಟನೆ ನಡೆಯುವ 15 ದಿನಗಳ ಹಿಂದೆ ಈತನ ಸ್ನೇಹಿತ ಫಿನಾಯಿಲ್ ಹಾಕಿದ್ದನ್ನ ಗಮನಿಸಿದ ಬಾಲಕ ನೀರಿಗೆ ವಿಷ ಬೆರೆಸಿದ್ದಾನೆ ಎಂದು ತಿಳಿದು ಬಂದಿದೆ. ಮಕ್ಕಳ ಈ ಹುಡುಗಾಟಿಕೆ ಇತರರ ಪ್ರಾಣಕ್ಕೆ ಆಪತ್ತು ತಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...