ಶಿವಮೊಗ್ಗ | ಅರಣ್ಯದಲ್ಲಿ ಜಾನುವಾರು ಮೇಯಿಸಬಾರದು ; ತಲೆ ಬುಡ ಇಲ್ಲದ ಆದೇಶ : ಆರಗ ಜ್ಞಾನೇಂದ್ರ ವಾಗ್ದಾಳಿ

Date:

ಶಿವಮೊಗ್ಗ, ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಬಾರದು ಎಂದು ತಲೆ ಬುಡ ಇಲ್ಲದ ಆದೇಶವನ್ನು ಸರ್ಕಾರ ಹೊರಡಿಸಿದೆ. ಕೂಡಲೇ ಇದನ್ನು ವಾಪಾಸ್ ಪಡೆಯಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ಅರಣ್ಯ ಸಚಿವರಿಗೆ ಜಾನುವಾರು ಸಾಕಣೆ ಅರಿವು ಇಲ್ಲ. ರಾಜ್ಯದಲ್ಲಿ ಸಾವಯವ ಕೃಷಿ ಪುನಃ ಸ್ಥಾಪಿಸಬೇಕು ಎಂಬ ಆಂದೋಲನ ನಡೆಯುತ್ತಿದೆ. ಈ ಆಂದೋಲನ ಯಶಸ್ವಿ ಆಗಲು ಜಾನುವಾರು ಸಾಕಣೆ ಅಗತ್ಯ ಎಂದರು.

ಸಾವಿರಾರು ಕೋಟಿ ಖರ್ಚು ಮಾಡಿ ವಿದೇಶದಿಂದ ರಸಗೊಬ್ಬರ ತರಿಸುತ್ತಿದ್ದೇವೆ. ಆದರೆ ಗೊಬ್ಬರದ ಕಾರ್ಖಾನೆ ಕೊಟ್ಟಿಗೆ ಗೊಬ್ಬರ.  2011ರ ಜಾನುವಾರು ಗಣತಿಗೆ ಹೋಲಿಸಿದರೆ 2021ರ ಜಾನುವಾರು ಗಣತಿಯಲ್ಲಿ ಜಾನುವಾರು ಸಂಖ್ಯೆ ಕಡಿಮೆ ಆಗಿದೆ. ಜಾನುವಾರು ಸಾಕಣೆಗೆ ಪ್ರೋತ್ಸಾಹ ಕೊಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆಗಡಿ ಬಂದಿದೆ ಅಂತ ಮೂಗು ಕೊಯ್ಯುವ ಸ್ಥಿತಿಯನ್ನು ಈ ಆದೇಶ ನೆನಪಿಸುತ್ತದೆ. ಹಾಗಾಗಿ ಆದೇಶ ವಾಪಸ್ ಪಡೆಯಬೇಕು. ಪಶ್ಚಿಮ ಘಟ್ಟಗಳ ಅನೇಕ ಹಳ್ಳಿಗಳು ಕಾಡಿನಲ್ಲಿ ಇವೆ. ನಾಳೆ ಮನುಷ್ಯ ಅಲ್ಲಿ ಓಡಾಡಬಾರದು ಎಂದೂ ಆದೇಶ ಹೊರಡಿಸಬಹುದು ಎಂದು ವ್ಯಂಗ್ಯವಾಡಿದರು.

ಇಲಾಖೆ ದಬಾವಣೆ ಆಗುತ್ತದೆ. ಇದು ಆಗಲು ಬಿಡಬಾರದು. ಜನರು ಹೋರಾಟಕ್ಕೆ ಇಳಿಯುತ್ತಾರೆ ಎಂದು ಎಚ್ಚರಿಸಿದರು.ಎನ್ ಆರ್ ಪುರ ಆನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದಾರೆ. ಹಂದಿ, ಮಂಗ ಊರಿನಲ್ಲಿ ದಾಳಿ ಮಾಡುತ್ತಿವೆ. ಕಾಡು ಪ್ರಾಣಿಗಳನ್ನು ಕಾಡಿನಲ್ಲಿ ಇಟ್ಟುಕೊಂಡು ಬಿಡಿ. ರೈತರ ಜಮೀನಿಗೆ ಅವುಗಳನ್ನು ಬಿಡಬೇಡಿ ಎಂದರು.

ಹಿಂದೆ ಗೋಮಾಳ ಇತ್ತು. ಶಿವಮೊಗ್ಗ ಜಿಲ್ಲೆಯಲ್ಲಿಯೇ 25,000 ಎಕರೆ ಸರ್ಕಾರಿ ಪ್ಲಾಂಟೇಷನ್ ಆಗಿದೆ. ಅದನ್ನು ದನ ಮೇಯಿಸಲು ಕೊಡಿ ಎಂದರು. ಮಾಧ್ಯಮ ಸಂಚಾಲಕ ಕೆ.ವಿ.ಅಣ್ಣಪ್ಪ, ಶರತ್ ಕಲ್ಯಾಣಿ ಇದ್ದರು.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...