ಶಿವಮೊಗ್ಗ | ಹಬ್ಬಗಳನ್ನು ಸೌಹಾರ್ದಯುತವಾಗಿ ಸಂಭ್ರಮಿಸಿ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Date:

ಶಿವಮೊಗ್ಗ, ಜಿಲ್ಲೆಯಾದ್ಯಂತ ಆಗಸ್ಟ್ 27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ ೦5 ನಡೆಯಲಿರುವ ಈದ್ ಮಿಲಾದ್ ಹಬ್ಬಗಳನ್ನು ಸರ್ವಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.

ಬುಧವಾರ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಬ್ಬಗಳ ಸಂದರ್ಭದಲ್ಲಿ ಬೈಕ್ರ್ಯಾಲಿ ನಡೆಸದಂತೆ, ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ.

ಅಲ್ಲದೇ ವಿಶೇಷವಾಗಿ ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ತೆಪ್ಪ ಇಟ್ಟುಕೊಂಡಿರಬೇಕು. ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್ಜಾಕೇಟ್ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಣಪತಿ ಅಥವಾ ಈದ್ ಮಿಲಾದ್ ಹಬ್ಬದ ಸಂಭ್ರಮದ ಮೆರವಣಿಗೆಗಳು ಅತ್ಯಂತ ಶಾಂತಿಯುತವಾಗಿದ್ದು, ಮತ್ತೊಂದು ಸಮುದಾಯ, ಧರ್ಮ, ಜನಾಂಗಕ್ಕೆ ಅಥವಾ ಅವರ ಭಾವನೆಗಳಿಗೆ ಧಕ್ಕೆ ಉಂಟಾಗದಂತಿರಲಿ ಎಂದರು.

ಪ್ರಮುಖ ಬೀದಿಗಳಲ್ಲಿ, ವರ್ತುಲಗಳಲ್ಲಿ ಸಾಕಷ್ಟು ಬೀದಿದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಗತ್ಯವಿರುವಲ್ಲಿ ಡ್ರೋಣ ಕಣ್ಗಾವಲು ಇಡಲಾಗುವುದು ಎಂದರು.

ಇದನ್ನು ಓದಿದ್ದೀರಾ? ‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಯಲಕ್ಷ್ಮಮ್ಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...