ಶಿವಮೊಗ್ಗ | ಕೋಮು ಸಂಘರ್ಷ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ; ಪೊಲೀಸರ ಪಥ ಸಂಚಲನ

Date:

ಶಿವಮೊಗ್ಗ ಜಿಲ್ಲೆಯಲ್ಲಿ ಕೋಮು ಸಂಘರ್ಷ ನಿಗ್ರಹಕ್ಕೆ ರಾಜ್ಯ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ತಂದಿರುವ, ವಿಶೇಷ ಕಾರ್ಯಪಡೆ ಪೊಲೀಸರು ಜೂನ್ 19 ರ ಸಂಜೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದ್ದಾರೆ.ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ‘ಕಾನೂನು – ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ, ವಿಶೇಷ ಪಥ ಸಂಚಲನ ನಡೆಸಲಾಗಿದೆ ಎಂದು ತಿಳಿಸಿದೆ.

1001778452

ಎಎ ವೃತ್ತದಿಂದ ಆರಂಭವಾದ ಪಥ ಸಂಚಲನವು ಎಂಕೆಕೆ ರಸ್ತೆ, ಸಿದ್ದಯ್ಯ ವೃತ್ತ, ಬಿ ಬಿ ರಸ್ತೆ, ಸೀಗೆಹಟ್ಟಿ, ಬೈಪಾಸ್ ರಸ್ತೆ, ನ್ಯೂ ಮಂಡ್ಲಿ, ಇಮಾಮ್ ಬಾಡ, ಇಲಿಯಾಸ್ ನಗರ,ಆರ್.ಎಂ.ಎಲ್ ನಗರ, ಟೆಂಪೋ ಸ್ಟ್ಯಾಂಡ್, ಓ ಟಿ ರಸ್ತೆ ಮುಖಾಂತರ ಮತ್ತೆ ಎ ಎ ವೃತ್ತದಲ್ಲಿಯೇ ಅಂತ್ಯಗೊಂಡಿದೆ.ಸದರಿ ಪಥ ಸಂಚಲನದಲ್ಲಿ ವಿಶೇಷ ಕಾರ್ಯಪಡೆಯ ಅಧಿಕಾರಿ – ಸಿಬ್ಬಂದಿಗಳು ಹಾಗೂ ಶಿವಮೊಗ್ಗ ನಗರದ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳು ಭಾಗಿಯಾಗಿದ್ದರು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏನಿದು ಪಡೆ? : ದೇಶದಲ್ಲಿಯೇ ಮೊದಲ ಬಾರಿಗೆ ಕೋಮು ಸಂಘರ್ಷ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕೋಮು ಸಂಘರ್ಷ ನಿಗ್ರಹ ಪಡೆ ರಚಿಸಿದೆ. ಇತ್ತೀಚೆಗೆ ಮಂಗಳೂರಿನಲ್ಲಿ ನೂತನ ಪಡೆಯ ಕಚೇರಿ ಉದ್ಘಾಟನೆ ಮಾಡಲಾಗಿತ್ತು.ಮಂಗಳೂರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಸಂಘರ್ಷ ಮಟ್ಟ ಹಾಕುವ ಉದ್ದೇಶದಿಂದ ಸದರಿ ಪಡೆಯನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಸದರಿ ಪಡೆಯಲ್ಲಿ 248 ಸಿಬ್ಬಂದಿಗಳಿದ್ದು, ಮೂರು ತುಕಡಿಗಳಲ್ಲಿ ಕಾರ್ಯ ನಿರ್ವಹಿಸಲಿದೆ.ಸದರಿ ಪಡೆ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಗಮನ ಸೆಳೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...