ಶಿವಮೊಗ್ಗ | ಹಂದಿ ಶಿಕಾರಿಗೆ ಇಟ್ಟಿದ್ದ ಸಿಡಿಮದ್ದು ಸಿಡಿದು ಹಸು ಸಾವು ; ಆರೋಪಿ ಬಂಧನ

Date:

ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ನಡೆದಿದ್ದು.

ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗುರು ಹಂದಿ ಶಿಕಾರಿಗೆಂದು ಸಿಡಿಮದ್ದು ತಯಾರು ಮಾಡಿದ್ದನು. ಹಿಂದಿನ ದಿನ ಸಿಡಿಮದ್ದು ತಯಾರಿಸಿ ಒಣಗಲೆಂದು ತನ್ನ ಮನೆ ಪಕ್ಕದ ಮೈದಾನದ ಗುಂಡಿಯೊಳಗೆ ಇಟ್ಟಿದ್ದನು.

1001696809

ಭಾನುವಾರ (ಜೂ.01) ರಂದು ಹಸು ಮೈದಾನಕ್ಕೆ ಮೇಯಲು ಬಂದಿತ್ತು. ಈ ವೇಳೆ ಹಸು ಕಾಲು ಜಾರಿ ಗುಂಡಿಯೊಳಗೆ ಬಿದ್ದಿದೆ. ಹಸು ಬಿದ್ದ ಕೂಡಲೆ ಸಿಡಿಮದ್ದು ಬ್ಲಾಸ್ಟ್ ಆಗಿ ಹಸು ಮೃತಪಟ್ಟಿದೆ.ಸ್ಪೋಟಕವನ್ನು ಪಟಾಕಿ ಮದ್ದು ಹಾಗೂ ಬೆಂಕಿ ಕಡ್ಡಿ ಮದ್ದು ಬಳಸಿ ಆರೋಪಿ ಗುರು ತಯಾರಿಸಿದ್ದ ಎಂದು ತಿಳಿದುಬಂದಿದೆ. ಭದ್ರಾವತಿ ಪೇಪರ್ ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...