ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅಧಿಕಾರದ ಆಸೆಗಾಗಿ ಯಾವುದೇ ಪಕ್ಷಕ್ಕೆ ಸೀಮಿತರಾಗದೇ ಜಾತಿ, ಮತ, ಧರ್ಮಗಳನ್ನು ಮೀರಿದ ಸಮಾನತೆಯನ್ನು ಮೈಗೂಡಿಸಿಕೊಂಡಿದ್ದರು. ಹಾಗಾಗಿ ಅವರ ಹೆಸರು ಎಂದಿಗೂ ಅಜರಾಮರ ಎಂದು ತಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಗಣಪತಿ ಹೇಳಿದರು.
ಶನಿವಾರ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹುಟ್ಟುಹಬ್ಬದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ 35 ವರ್ಷಗಳು ಕಳೆದಿವೆ. ಆದರೆ ಅವರು ರೂಪಿಸಿದ ಅಕ್ಷಯ, ಆರಾಧನಾ, ಆಶ್ರಯ, ಗ್ರಾಮೀಣ ಕೃಪಾಂಕ, ಉಚಿತ ವಿದ್ಯುತ್ ಮೊದಲಾದ ಜನೋಪಯೋಗಿ ಯೋಜನೆಗಳು ಇಂದಿಗೂ ಪ್ರಸ್ತುತವಾಗಿ ಚಿರಸ್ಥಾಯಿಯಾಗಿ ಉಳಿದಿವೆ.
ಕೇವಲ ಮತ ಬ್ಯಾಂಕ್ಗಾಗಿ ಎಂದೂ ಆಡಳಿತ ಮಾಡದ ಬಂಗಾರಪ್ಪನವರು ಹಿಂದುಳಿದ ಸಮುದಾಯಗಳು ಆರಾಧಿಸುವ ದೇವರ ದೇಗುಲಗಳ ಅಭಿವೃದ್ಧಿಯನ್ನೂ ಮಾಡಿದ್ದಾರೆ ಎಂದ ಅವರು, ಅ. 26ರಂದು ಅವರ ಹುಟ್ಟುಹಬ್ಬವನ್ನು ಸಚಿವ ಮಧು ಬಂಗಾರಪ್ಪ ಅವರ ಮುಖಂಡತ್ವದಲ್ಲಿ ಪ್ರತೀ ವರ್ಷ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದರು.
ಅ. ೨೬ರಂದು ಪಟ್ಟಣದ ಬಂಗಾರಧಾಮದಲ್ಲಿ ಎಸ್. ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್ ಮೊದಲಾದವರು ಭಾಗವಹಿಸುವರು.
ಈ ಸಂದರ್ಭದಲ್ಲಿ ಸಾಹಿತಿ ಕಾಳೇಗೌಡ ನಾಗವಾರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಲಾಗುವುದು. ಅಲ್ಲದೇ ಆಳ್ವಾಸ್ ನುಡಿಸಿರಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರುತ್ತದೆ. ತಾಲ್ಲೂಕಿನಾದ್ಯಂತ ಸುಮಾರು 1೦ ಸಾವಿರದಷ್ಟು ಬಂಗಾರಪ್ಪ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಜಿ.ಪಂ. ಮಾಜಿ ಸದಸ್ಯ ತಬಲಿ ಬಂಗಾರಪ್ಪ ಮಾತನಾಡಿದರು.ಸಭೆಯಲ್ಲಿ ತಾಲೂಕು ಬಹರ್ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಯುವ ಘಟಕದ ಅಧ್ಯಕ್ಷ ಪ್ರವೀಣ್ಕುಮಾರ್ ಶಾಂತಗೆರೆ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಮುಖಂಡರಾದ ನಾಗರಾಜ ಚಿಕ್ಕಸವಿ, ಕಲ್ಲಂಬಿ ಹಿರಿಯಣ್ಣ, ಪ್ರಕಾಶ್ ಹಳೆಸೊರಬ, ಶ್ರೀಕಾಂತ್ ಚಿಕ್ಕಶಕುನ, ಪ್ರಶಾಂತ್ ಮೇಸ್ತಿç, ಸುನಿಲ್ಗೌಡ್ರು, ಪರಶುರಾಮ ಸಣ್ಣಬೈಲ್, ನಾಗರಾಜ ಚಂದ್ರಗುತ್ತಿ, ರಶೀದ್ ಸಾಬ್, ನಾಗಪ್ಪ ಮಾಸ್ತರ್, ಪ್ರಭಾಕರ ಶಿಗ್ಗಾ, ಫಯಾಜ್ ಅಹ್ಮದ್, ಬಸವೇಶ್ವರ, ಕೆ.ಪಿ. ರಾಜೇಶ್, ಸೇವಾದಳದ ಶಿವಣ್ಣ ಮೊದಲಾದವರು ಹಾಜರಿದ್ದರು.





