ಶಿವಮೊಗ್ಗ | ಸೊರಬದ ಕ್ಯಾಸನೂರು – ನಿಸರಾಣಿಯಲ್ಲಿ ಹದಗೆಟ್ಟ ಸಂಪರ್ಕ ರಸ್ತೆ : ಜನರ ಜೀವಕ್ಕೆ ಕುತ್ತು

Date:

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗಡಿಭಾಗದ ಕ್ಯಾಸನೂರು ಗ್ರಾಮದಿಂದ ನಿಸರಾಣಿ ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು ದಿನನಿತ್ಯ ಇಲ್ಲಿನ ಸ್ಥಳೀಯರಿಗೆ ಸಾವಿನ ದವಡೆಯ ಮೇಲೆ ಸಂಚಾರ ಎಂಬಂತಾಗಿದೆ.

ನಿಸರಾಣಿ ಗ್ರಾಮದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ದಿನನಿತ್ಯ 30 ರಿಂದ 40 ವಿದ್ಯಾರ್ಥಿಗಳು ಈ ರಸ್ತೆಯ ಮೂಲಕವೇ ಹಾದುಹೋಗಬೇಕು. ಇವರ ಪರಿಸ್ಥಿತಿ ಈಜೋರಾದ ಮಳೆಗಾಲದಲ್ಲಿ ಹೇಳತೀರದು. ನಿಸರಾಣಿ, ಬನದಕೊಪ್ಪ, ಕೆರೆಕೊಪ್ಪ ಸೇರಿದಂತೆ ಹಲವು ಗ್ರಾಮಗಳ ಜನರಿಗೆ ಸಾಗರ ತೆರಳಲು ಇದುವೇ ಪ್ರಮುಖ ರಸ್ತೆಯಾಗಿದೆ. ಹಾಳಾದ ರಸ್ತೆ ಹಲವು ಅಪಘಾತಗಳಿಗೆ ಆಹ್ವಾನ ನೀಡುತ್ತಿದ್ದು ಇಷ್ಟಾದರೂ ಕೂಡ ಸ್ಥಳೀಯ ಪಂಚಾಯತ್ ಆಗಲಿ, ತಾಲ್ಲೂಕು ಆಡಳಿತವಾಗಲಿ ಇದರ ಬಗ್ಗೆ ಇನ್ನೂ ಗಮನ ಹರಿಸದೇ ಇರುವುದು ತೀರಾ ನಾಚಿಕೆಗೇಡಿನ ಸಂಗತಿಯಾಗಿದೆ.

ರಸ್ತೆ ಸಂಪೂರ್ಣ ಹಾಳಾಗಿದ್ದು ಪ್ರತಿವರ್ಷ ಅದನ್ನು ಸರಿಪಡಿಸುವ ಬದಲು ಈಗಿರುವ ರಸ್ತೆಯನ್ನು ಸಂಪೂರ್ಣ ತೆಗೆದು ಹೊಸ ರಸ್ತೆಯನ್ನು ನಿರ್ಮಿಸಬೇಕು. ಈ ಮಾರ್ಗದಲ್ಲಿ ಯಾವುದೇ ಅನಾಹುತವಾದರೇ ಸರ್ಕಾರವೇ ಅದರ ಸಂಪೂರ್ಣ ಜವಾಬ್ದಾರಿ ಹೊರಬೇಕಾಗುತ್ತದೆ. ಅಂತಹ ಘಟನೆಗೆ ಅವಕಾಶ ಮಾಡಿಕೊಡದೇ ಶೀಘ್ರವೇ ರಸ್ತೆಯ ಮರು ನಿರ್ಮಾಣಕ್ಕೆ ಸಂಬಂಧಿಸಿದ ಇಲಾಖೆಯು ಕಾರ್ಯ ಪ್ರವೃತ್ತವಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...