ಶಿವಮೊಗ್ಗ | ಡಿಕೆಶಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಸಿಗದ ‘ಸ್ಥಾನ’!

Date:

ಶಿವಮೊಗ್ಗ ಭದ್ರಾವತಿ ತಾಲೂಕಿನ ಬಿ ಆರ್ ಪಿಯ ಭದ್ರಾ ಜಲಾಶಯಕ್ಕೆ ಇಂದು ಜಲಸಂಪನ್ಮೂಲ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ತುಂಬಿದ ಭದ್ರೆಗೆ ಬಾಗಿನ ಅರ್ಪಿಸಿದರು.

186 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 185 ಅಡಿ ನೀರು ಸಂಗ್ರಹವಾಗಿದ್ದು ಇಂದು ಡಿಕೆಶಿ ಬಾಗಿನ ಅರ್ಪಿಸಿರುವುದು ವಿಶೇಷವಾಗಿತ್ತು.

ಇಂದು ಭದ್ರಾ ಅಣೆಕಟ್ಟಿನ ಬಾಗಿನ ಸಮಾರಂಭದಲ್ಲಿ ಭಾಗವಹಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭವಿಷ್ಯ ಉನ್ನತ ಹುದ್ದೆಯತ್ತ ಸಾಗುತ್ತಿದೆ ಎಂದು ಮಾರ್ಮಿಕವಾಗಿ ಅಭಿಪ್ರಾಯ ಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250912 WA0039

ಭದ್ರಾ ಅಣೆಕಟ್ಟು ಶಿವಮೊಗ್ಗ, ಭದ್ರಾವತಿ, ತರೀಕೆರೆ, ದಾವಣಗೆರೆ ಜಿಲ್ಲೆಗಳ ಸಾವಿರಾರು ಎಕರೆ ರೈತರ ಹೊಲಗಳಿಗೆ ಜೀವನಾಡಿಯಾಗಿ ಪರಿಣಮಿಸಿದೆ ಎಂದರು.

ಇನ್ನು ಕಾಂಗ್ರೆಸ್‌ ಸರ್ಕಾರ ಬಂದ ನಂತರ ಮಳೆ ಬರಲ್ಲ ಎಂದವರ ಮಾತಿಗೆ ತಿರುಗೇಟು ನೀಡಿದ ಅವರು, “ಇಂದು ಎಲ್ಲಾ ಅಣೆಕಟ್ಟುಗಳು ತುಂಬಿಕೊಂಡಿವೆ. ರೈತರ ಮುಖದಲ್ಲಿ ಸಂತೋಷ ಮೂಡಿದೆ’ ಎಂದರು.

ಗೋಪಾಲಕೃಷ್ಣ ಮತ್ತು ಪ್ರಭಾ ಮಲ್ಲಿಕಾರ್ಜುನ ಅವರಿಗೆ ತಲಾ ಕೋಟಿ, ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ ಶಿವಕುಮಾ‌ರ್, “ಬೇರು ಇಲ್ಲದಿದ್ದರೆ ಮರ ಬೆಳೆದು ಬರುವುದಿಲ್ಲ. ಹಾಗೆಯೇ ನಂಬಿಕೆ ಉಳಿಸಿಕೊಳ್ಳಬೇಕು” ಎಂದರು.

1002225187

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಕೇಂದ್ರದಿಂದ 5300 ಕೋಟಿ ಅನುದಾನ ಸಿಗಬೇಕಿತ್ತು. ಆದರೆ ಒಂದು ರೂಪಾಯಿಯೂ ಕೊಡಲಿಲ್ಲ. ನಮ್ಮ ಸಂಸದರು ಕೇಳದೆ ಕೂತಿದ್ದಾರೆ. ಕೇಳಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಬರಲಿ” ಎಂದು ಬಿಜೆಪಿ ಸಂಸದರನ್ನು ಕಟುವಾಗಿ ಟೀಕಿಸಿದರು.

“ಕೈ ಸರ್ಕಾರ ಅಧಿಕಾರದಲ್ಲಿದ್ದರೆ ದಾನ-ಧರ್ಮ ನಡೆಯುತ್ತದೆ. ಉಚಿತ ವಿದ್ಯುತ್, ಉಚಿತ ಬಸ್‌, ಮಹಿಳೆಯರಿಗೆ 2000 ರೂ. ಸಹಾಯ ನಮ್ಮ ಸರ್ಕಾರದ ಜನಪರ ತೀರ್ಮಾನಗಳು.

ಇತಿಹಾಸದಲ್ಲಿ ಯಾರೂ ನೀಡದ ರೀತಿಯ ಕಲ್ಯಾಣ ಕಾರ್ಯಕ್ರಮಗಳನ್ನು ನಾವು ಜಾರಿಗೊಳಿಸಿದ್ದೇವೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು, “ಬಯಲುಸೀಮೆಯ ರೈತರ ಬವಣೆ ನೀಗಿಸಲು ಭದ್ರಾ ನೀರು ಸಹಕಾರಿಯಾಗಿದೆ. ರೈತರಿಗೆ ಸಂಬಳವಿಲ್ಲ, ಲಂಚವಿಲ್ಲ, ಆದರೆ ಅವರ ಶ್ರಮವನ್ನು ಉಳಿಸುವ ಜವಾಬ್ದಾರಿ ನಮ್ಮದು” ಎಂದು ಹೇಳಿದರು.

1002225160

ಈ ಒಂದು ವೇದಿಕೆಯ ಕಾರ್ಯಕ್ರಮದಲ್ಲಿ ಐಜಿಪಿ, ಎಸ್ಪಿ, ಜಿಲ್ಲಾಧಿಕಾರಿ ಅವರೆ ಸೈಡ್ ನಲ್ಲಿ ನಿಂತಿದ್ದು, ಕಾರ್ಯಕ್ರಮಕ್ಕೆ ಕೈಹಿಡಿದಿರುವ ಸಂಗತಿ ಕಂಡು ಬಂದಿದೆ.

ಬಾಗಿನ ಮತ್ತು ಬಿಆರ್ ಪಿಯಲ್ಲಿ ನೂತನ ಐಬಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸೈಡ್ ನಲ್ಲಿ ನಿಲ್ಲಿಸಿ ಕಾರ್ಯಕ್ರಮ ನಡೆಸಿರುವುದು ರಾಜಕೀಯ ಜನಪ್ರತಿನಿಧಿಗಳ ಮೈಲುಗೈ ಸೂಚಿಸುತ್ತದೆ.

ಡಿಕೆಶಿ ಭಾಷಣದಲ್ಲಿಯೇ ಅವರು ಅವರನ್ನ ವೇದಿಕೆಗೆ ಕರೆಯಿಸದೆ ಇರುವುದು ದುರಂತವಾಗಿತ್ತು.

ಸರ್ಕಾರಿ ಕಾರ್ಯಕ್ರಮದಲ್ಲಿ ಡಿಕೆಶಿ ಕುರಿತು ಹಾಡು ;

ಬಿಆರ್ ಪಿಯಲ್ಲಿ ಬಾಗಿನ ಅರ್ಪಿಸುವ ಸರ್ಕಾರಿ ಕಾರ್ಯಕ್ರಮದಲ್ಲಿ ಡಿಕೆ ಸಾಹೇಬನ ಹಾಡಿನ ಅಬ್ಬರ ಜೋರಾಗಿತ್ತು. ಇದು ಸಹ ಕಾನೂನು ಬಾಹಿರವಾಗಿದ್ದರೂ ಯಾವುದೇ ಕಾರ್ಯಕ್ರಮ ಉಲ್ಲಂಘನೆಯಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...