ಶಿವಮೊಗ್ಗ | ದೇಹದ ಮೋಹ ಮರೆತು ವಚನ ಸಾಹಿತ್ಯ ಬೆಳೆಸಿದವರು ಡಾ.ಫ.ಗು.ಹಳಕಟ್ಟಿ : ಡಾ ಬಸವ ಮರುಳಸಿದ್ಧ ಸ್ವಾಮೀಜಿ

Date:

ಶಿವಮೊಗ್ಗ,ದೇಹದ ಮೇಲಿನ ಮೋಹ ಮರೆತು ವಚನ ಸಾಹಿತ್ಯ ಬೆಳೆಸಿದವರು ಡಾ.ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ಎಂದು ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮಿಗಳು ಹೇಳಿದರು.

ಅವರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ವತಿಯಿಂದ ನಡೆದ ಡಾ.ಫ.ಗು.ಹಳಕಟ್ಟಿರವರ ಜನ್ಮದಿನ ಮತ್ತು ವಚನ ಸಾಹಿತ್ಯ ಸಂರಕ್ಷಣೆ ದಿನಾಚರಣೆ ಯಲ್ಲಿ ಮಾತನಾಡಿದರು..

ಬಣಜಿಗ ಸಮುದಾಯದ ಮೂಲಪುರುಷ ಗುಜರಾತಿನ ಆದಯ್ಯನವರಂತೆ ಹಳಕಟ್ಟಿ ಕೆಲಸ ಮಾಡಿದರು.ತನ್ನ ಮಗ ತೀರಿಕೊಂಡ ಮೇಲೆ ಸಂಪೂರ್ಣ ವಚನ ಸಂಗ್ರಹ ಮಾಡುವುದರಲ್ಲಿ ತೊಡಗಿ ಒಂದು ಸಾವಿರಕ್ಕೂ ಹೆಚ್ಚು ವಚನ ಸಂಗ್ರಹ ಮಾಡಿದರು. ಅದಕ್ಕೂ ಮೊದಲು ಕೇವಲ 50 ಕ್ಕಿಂತ ಕಡಿಮೆ ವಚನಗಳಿದ್ದವು. ತಾವು ಸಂಗ್ರಹಿಸಿದ ವಚನಗಳನ್ನು ಪುಸ್ತಕ ರೂಪದಲ್ಲಿ ಬಿಡುಗಡೆ ಮಾಡಲು ತಮ್ಮ ಸ್ವಂತ ಮನೆ ಮಾರಿ ಮುದ್ರಣಾಲಯ ಸ್ಥಾಪನೆ ಮಾಡಿ ವಚನ ಸಾಹಿತ್ಯ ಸಂಗ್ರಹ ಮಾಡಿದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಲೂರು ವೆಂಕಟರಾಯರ ಜೊತೆ ಬಾಂಬೆಯಲ್ಲಿ ಲಾ ಶಿಕ್ಷಣ ಪಡೆದ ಇವರು ಮುಂದೆ ಶಿವಾನುಭವ ಎಂಬ ಮಾಸಿಕ ಪತ್ರಿಕೆ ಹೊರಡಿಸಿದರು..ಜೊತೆಗೆ ಕನ್ನಡಿಗರಿಗಾಗಿ ನವ ಕರ್ನಾಟಕ ಎಂಬ ವಾರಪತ್ರಿಕೆ ಸ್ಥಾಪಿಸಿ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಟ ಮಾಡಿದರು. ಬಿಜಾಪುರದ ನಗರಸಭೆ ಅಧ್ಯಕ್ಷ ರಾಗಿ ಇಡೀ ನಗರಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರು ಎಂದು ವಿವರಿಸಿದರು.

ಮುಂಬೈ ಸರ್ಕಾರದಿಂದ ರಾವ್ ಬಹದ್ದೂರ್ ಪ್ರಶಸ್ತಿ ಪಡೆದರು. ವಚನಗಳನ್ನು ಸಂಗ್ರಹಿಸಿ ಇವರು ಜನ ಸಾಮಾನ್ಯರಿಂದ ವಚನ ಪಿತಾಮಹ ವಚನ ಗುಮ್ಮಟ ಎಂಬ ಬಿರುದು ಪಡೆದರು.ಇಂದು ಇಪ್ಪತ್ತು ಸಾವಿರಕ್ಕೂ ಹೆಚ್ಚು ವಚನ ಸಂಗ್ರಹವಿದೆ ಎಂದರು.

ಕರ್ನಾಟಕ ಸರ್ಕಾರ ಕೂಡ ವಚನ ಸಾಹಿತ್ಯಕ್ಕೆ ಆದ್ಯತೆ ನೀಡಿ ಕಡಿಮೆಯಾದ ಬೆಲೆಯಲ್ಲಿ ಪುಸ್ತಕ ಮುದ್ರಿಸಿ ಜನರಿಗೆ ನೀಡಿದೆ ಎಂದು ಹೇಳಿದರು. ಫ.ಗು.ಹಳಕಟ್ಟಿಯವರು ಶ್ರೀ ಗಂಧದ ಮರವಿದ್ದಂತೆ . ಅವರು ತೀರಿಕೊಂಡರೂ ಕೂಡ ಅವರು ಮಾಡಿದ ಕೆಲಸ ನಾಡಿನಾದ್ಯಂತ ಕೆಂಪು ಬೀರುತ್ತಲೇ ಇದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗದ ಸಹಾಯಕ ನಿರ್ದೇಶಕ ಉಮೇಶ್ ಸ್ವಾಗತಿಸಿದರು.ವೇದಿಕೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್, ಗ್ಯಾರಂಟಿ ಯೋಜನೆಯ ಅಧ್ಯಕ್ಷ ಚಂದ್ರಭೂಪಾಲ್,ನೃಪತುಂಗ ನಿರೂಪಣೆ ಮಾಡಿದರು. ಹೊಸನಗರದ ಅಭಿನವ ಚನ್ನಬಸವ ಸ್ವಾಮೀಜಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...