ಶಿವಮೊಗ್ಗ | ಗ್ರಾಮ ಒನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ; ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ

Date:

ಶಿವಮೊಗ್ಗ ನಾಮಫಲಕಗಳ ತೆರವು ರಿಪ್ಪನ್ ಪೇಟೆಯ ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿತ್ತು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ರಫ಼ಿ ರಿಪ್ಪನ್ ಪೇಟೆ ಸ್ಥಳಕ್ಕೆ ತೆರಳಿ ಗ್ರಾಮ ಒನ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ನಂತರ ಸ್ಥಳಕ್ಕೆ ದೌಡಯಿಸಿದ ಉಪ ತಹಶೀಲ್ದಾರ್ ರವರಿಗೆ ಭ್ರಷ್ಟಾಚಾರದ ಕೂಪವಾಗಿರುವ ಈ ಗ್ರಾಮ ಒನ್ ಐಡಿಯನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮನವಿಯನ್ನಾಧರಿಸಿ ಉಪ ತಹಶೀಲ್ದಾರ್ ಸ್ಥಳ ಮಹಜರು ನಡೆಸಿ ಆರೋಪದಲ್ಲಿ ಸತ್ಯಾಂಶವಿರುವ ಬಗ್ಗೆ ತಹಶೀಲ್ದಾರ್ ರಶ್ಮಿ ಹೆಚ್ ರವರಿಗೆ ವರದಿ ಸಲ್ಲಿಸಿದ್ದರು.

ಈ ಬಗ್ಗೆ ಮಾದ್ಯಮದವರೊಂದಿಗೆ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಸಕಾಲ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಕಂದಾಯ ಇಲಾಖೆಯ ವರದಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಕೇಂದ್ರದ ಐಡಿ ರದ್ದುಗೊಳಿಸುವಂತೆ ವರದಿ ಸಲ್ಲಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಐಡಿ ರದ್ದಾಗಿದ್ದು ನಮ್ಮ ಸಿಬ್ಬಂದಿಗಳು ಸದರಿ ಕೇಂದ್ರದಲ್ಲಿದ್ದ ನಾಮಫಲಕಗಳನ್ನು ತೆರವುಗೊಳಿಸಿದ್ದಾರೆ ಎಂದರು.

ಹೊಸನಗರ ತಾಲೂಕಿನ ಯಾವುದೇ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ಕೇಳಿದರೇ ಹಾಗೂ ಸಕಾಲ ಸೇವೆಗೆ 21 ದಿನಗಳಾಗುತ್ತದೆ ಅದನ್ನು ಬೇಗ ಮಾಡಿಕೊಡಿತ್ತೇವೆ ಎಂದು ಹೆಚ್ಚಿಗೆ ಹಣ ಕೇಳಿದರೆ ನಮ್ಮ ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಅಥವಾ ನನಗೆ ನೇರ ಕರೆ ಮಾಡಿ ತಿಳಿಸಿ ಎಂದು ಹೇಳಿ ನಮ್ಮ ತಾಲೂಕಿನಲ್ಲಿ ನಮ್ಮ ಸಿಬ್ಬಂದಿಗಳು ಉತ್ತಮ ಸೇವೆ ನೀಡುವ ಮೂಲಕ ಸಕಾಲ ಸೇವೆಗಳು 2 ರಿಂದ 3 ದಿನಗಳಲ್ಲಿ ದೊರಕುತಿದ್ದು ಇದ್ದನೇ ಬಂಡವಾಳ ಮಾಡಿಕೊಂಡಿರುವ ಕೆಲವು ಮದ್ಯವರ್ತಿಗಳು ಹಾಗೂ ಗ್ರಾಮ-ಓನ್ ಸಿಬ್ಬಂದಿಗಳು ಹೆಚ್ಚುವರಿ ಹಣ ಕೇಳುತ್ತಿರುವ ಬಗ್ಗೆ ದೂರು ಬಂದಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...