ಶಿವಮೊಗ್ಗ | ನಂಜಪ್ಪ ಲೈಫ್ ಕೇರ್ ನಲ್ಲಿ ಮೆದುಳಿನ ರಕ್ತಸ್ರಾವ ತಪ್ಪಿಸಿದ ತಜ್ಞ ವೈದ್ಯರು : ಯುವತಿಯ ಜೀವ ಉಳಿಸಿದ ಸಣ್ಣ ರಂಧ್ರದ ಚಿಕಿತ್ಸೆ

Date:

ಶಿವಮೊಗ್ಗ, 21 ವರ್ಷದ ಯುವತಿಯು ತಲೆನೋವಿನಿಂದ ಬಳಲುತ್ತಿದ್ದಾಗ ಪರೀಕ್ಷಿಸಿದಾಗ ಮೆದುಳಿನ ಎಂ ಆರ್ ಐ ಎಡಭಾಗದಲ್ಲಿರುವ ಪುಮುಖ ರಕ್ತನಾಳದಲ್ಲಿ ಬಲೂನ್ ತರಹದ ಊತ (ಅರಿಸಮ್) ಕಂಡುಬಂದಿದೆ.

ಮೆದುಳು ರಕ್ತಸ್ರಾವ ವಾಗುವ ಸಂದರ್ಭ ಇತ್ತು. ಸಣ್ಣ ರಂಧ್ರದ ಮೂಲಕ ಚಿಕಿತ್ಸೆ ಮಾಡಿ ನಂಜಪ್ಪ ಲೈಫ್ ಕೇರ್ ವೈದ್ಯರು ಜೀವವುಳಿಸಿದ ಘಟನೆ ನಡೆದಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಆಸ್ಪತ್ರೆಯ ಇಂಟರ್ ವೆನ್ಶನಲ್ ರೇಡಿಯಾಲಜಿಸ್ಟ್ ಡಾ!! ನಿಶಿತಾ ಮತ್ತು ಅರವಳಿಕೆ ತಜ್ಞ ಡಾ!! ಪ್ರವೀಣ್ ಕುಮಾರ್, ಮೆದುಳಿನ ವೈದ್ಯಕೀಯ ಭಾಷೆಯಲ್ಲಿ “ಡಿಸ್ಸಂಗ್ ಅರಿಸಮ್” ಎಂದು ಕರೆಯಲ್ಪಡುವ ಈ ರೀತಿಯ ಊತವು ಗಂಭೀರ ಸಮಸ್ಯೆಯನ್ನು ಉಂಟುಮಾಡುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೀತಿಯ ಊತವು ಯುವತಿಯ ಮೆದುಳಿನಲ್ಲಿ 9 ಮಿಲಿಮೀಟರ್ ದೊಡ್ಡ ಗಾತ್ರ ಮತ್ತು ಅಪಾಯಕಾರಿಯಾಗಿತ್ತು. ಬಲೂನ್ ತರಹ ಊದಿರುವ ಈ ಊತವು ಹೊಡೆದು ಹೋಗಿದ್ದರೆ ಮೆದುಳಿನಲ್ಲಿ ತೀವ್ರ ರಕ್ತಸ್ರಾವ ಉಂಟಾಗಿ ಸಾವು ಅಥವಾ ಜೀವಿತಾವಧಿಯ ಅಂಗವೈಕಲ್ಯಕ್ಕೆ ಕಾರಣವಾಗುತ್ತಿತ್ತು ಎಂದರು.

ಎಂ.ಆರ್ ಐ ಸ್ಕ್ಯಾನ್ ರಿಪೋರ್ಟ್ ನೋಡಿದಾಗ ಈ ಸಮಸ್ಯೆಗೆ ತಕ್ಷಣದ ಚಿಕಿತ್ಸೆ ಅಗತ್ಯವೆಂದು ನಿರ್ಧರಿಸಲಾಯಿತು. ಆದರೆ ರಕ್ತನಾಳದಲ್ಲಿರುವ ಊತದ ಆಕಾರ ಮತ್ತು ಸ್ಥಳದಿಂದದಾಗಿ ತೆರೆದ ಮೆದುಳಿನ ಶಸ್ತ್ರಚಿಕಿತ್ಸೆ (ಓಪನ್ ನ್ಯೂರೋಸರ್ಜರಿ) ಸರಿಯಾದ ಆಯ್ಕೆಯಲ್ಲ ಎಂದು ತೀರ್ಮಾನಿಸಿ “ವೋ ಡ್ರೈವರ್ಟರ್ ಬಳಸಿ ಪ್ರಮುಖ ರಕ್ತನಾಳ ಪುನರ್ನಿರ್ಮಾಣ” ಎಂಬ ವಿಶೇಷ, ಸುಧಾರಿತ ವಿಧಾನವನ್ನು ಮಾಡಲು ನಿರ್ಧರಿಸಲಾಯಿತು ಎಂದರುಈ ರೀತಿಯ ಕಾರ್ಯವಿಧಾನಗಳನ್ನು ಸುಸಜ್ಜಿತ, ಉನ್ನತ ಮತ್ತು ಆಧುನಿಕ ತಂತ್ರಜ್ಞಾನನವನ್ನು ಒಳಗೊಂಡ ಅನುಭವಿ ನ್ಯೂರೋ ಇಂಟರ್ವೆನ್ನನಲಿಜಿಸ್ಟ್ ಗಳಿರುವ ಆಸ್ಪತ್ರೆಗಳಲ್ಲಿ ಮಾತ್ರ ಮಾಡಲಾಗುತ್ತದೆ.“ಫೋ ಡ್ರೈವರ್ಟರ್” ಎನ್ನುವುದು ಒಂದು ಸಣ್ಣ, ಮೃದುವಾದ ಜಾಲರಿಯ(ಮೆಶ್) ಕೊಳವ (ಅತ್ಯಂತ ಸೂಕ್ಷ್ಮವಾದ ಜಾಲದಂತೆ) ಇದನ್ನು ಮುಖ್ಯ ರಕ್ತನಾಳದೊಳಗೆ ಅಂದರೆ ಊತವಿರುವ ಜಾಗದ ಪಕ್ಕದಲ್ಲಿ ಇರಿಸಲಾಗುತ್ತದೆ.

ಇದು ಊತದ ಕಡೆಗೆ ಸಂಚರಿಸುವ ರಕ್ತವನ್ನು ತಡೆದು ಬೇರೆ ರಕ್ತನಾಳಕ್ಕೆ ರಕ್ತ ಸಂಚರಿಸಲು ಅನುವುಮಾಡಿಕೊಡುತ್ತದೆ. ಇದರಿಂದಾಗಿ ಊತವಿರುವ ರಕ್ತನಾಳದ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಮತ್ತು ಚಿಕಿತ್ಸೆಯ ನಂತರ ರಕ್ತಸಂಚಾರ ಕಡಿಮೆಯಾಗುವುದರಿಂದ ಕಾಲಾಂತರದಲ್ಲಿ ಊತವು ನಿಧಾನವಾಗಿ ಕುಗ್ಗುತ್ತದೆ ಮತ್ತು ಮೆದುಳಿನಲ್ಲಿ ರಕ್ತ ಸ್ರಾವವಾಗುವುದನ್ನು ತಡೆಗಟ್ಟುತ್ತದೆ ಎಂದರು. ಈ ಕಾರ್ಯವಿಧಾನವನ್ನು ಬಳಸಿ ತಮ್ಮ ತಂಡವು ಅನಸ್ತೇಶಿಯಾ ಅಡಿಯಲ್ಲಿ ಮೆದುಳಿನ ಪಮುಖ ರಕ್ತನಾಳ ತಲುಪಲು ತೊಡೆಯಲ್ಲಿ ಸಣ್ಣ ಸೂಜಿ ಗಾತ್ರದ ರಂಧ್ರದ ಮೂಲಕ ತೆಳುವಾದ ಟ್ಯೂಬ್ ಅನ್ನು ಬಳಸಿ ಊತವಿರುವ ಮೆದುಳಿನ ರಕ್ತನಾಳದೊಳಗೆ ತಲುಪಿ ಪೂ ಡ್ರೈವರ್ಟರ್ ಸೂಕ್ಷ್ಮಜಾಲರಿ(ಮೆಶ್) ಇರಿಸಿತು.

ಇದು ಊತವಿರುವ ರಕ್ತನಾಳಕ್ಕೆ ರಕ್ತ ಸಂಚರಿಸುವುದನ್ನು ನಿಲ್ಲಿಸಿ, ಊತವಿರುವ ರಕ್ತನಾಳವು ನೈಸರ್ಗಿಕವಾಗಿ ಗುಣವಾಗಲು ಸಹಾಯ ಮಾಡುತ್ತದೆ ಎಂದರು. ಯಶಸ್ವಿ ಚಿಕಿತ್ಸೆಯ ನಂತರ ರೋಗಿಯು ಚೇತರಿಸಿಕೊಂಡು ಯಾವುದೇ ತೊಂದರೆ ಇಲ್ಲದ ಮರುದಿನವೇ ಬಿಡುಗಡೆಯಾಗಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...