ಶಿವಮೊಗ್ಗ | ನರಗುಂದದಲ್ಲಿ ಜು. 21ರಂದು ರೈತ ಹುತಾತ್ಮ ದಿನಾಚರಣೆ : ಎಚ್ ಆರ್ ಬಸವರಾಜಪ್ಪ

Date:

ಶಿವಮೊಗ್ಗ, ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಭೂಸ್ವಾಧೀನದ ಹೋರಾಟದ ಜಯವನ್ನು ಜುಲೈ-21 ರಂದು ನರಗುಂದ-ನವಲಗುಂದ ಹುತಾತ್ಮರಿಗೆ ಹಾಗೂ ಇಲ್ಲಿಯವರೆಗೆ ಹೋರಾಟದಲ್ಲಿ ಹುತಾತ್ಮರಾದ ಎಲ್ಲಾ ಹುತಾತ್ಮರಿಗೆ ಅರ್ಪಿಸಿಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನಹೋರಾಟವನ್ನು ರೂಪಿಸಲು 45ನೇ ರೈತ ಹುತಾತ್ಮ ದಿನಾಚರಣೆಯನ್ನು ಜು.21 ರ ಸೋಮವಾರ 11ಗಂಟೆಗೆ ನರಗುಂದದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಎಚ್ ಆರ್. ಬಸವರಾಜಪ್ಪ , ದೇವನಹಳ್ಳಿ ಚನ್ನರಾಯಪಟ್ಟಣ ಭೂಸ್ವಾಧೀನದ ವಿರುದ್ಧ 1,198ದಿನದ ಹೋರಾಟದಲ್ಲಿ 1,777ಎಕರೆ ಕೆ.ಐ.ಎ.ಡಿ.ಬಿ ಗೆ ನೋಟೀಫಿಕೆಷನ್‌ ಮಾಡಿದ್ದನ್ನು ಹೋರಾಟದ ಫಲವಾಗಿ ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳ ಹೋರಾಟಕ್ಕೆ ಪ್ರಗತಿಪರ ಚಿಂತಕರು, ಸಿನಿಮಾ ನಟರು, ಕಲಾವಿದರ ಬೆಂಬಲ ವ್ಯಕ್ತವಾಗಿದ್ದರಿಂದ ಸರ್ಕಾರ ಹೋರಾಟಕ್ಕೆ ಮಣಿದು ಸ್ವತಃ ಮುಖ್ಯಮಂತ್ರಿಗಳೇ ಇದೊಂದು ಐತಿಹಾಸಿಕ ಹೋರಾಟ ಇದು ಎಲ್ಲಾ ಹೋರಾಟಗಾರರಿಗೆ ಸಂದ ಜಯ ಎಂದು ಭೂಮಿಯನ್ನು ಡಿನೋಟೀಫೈ ಮಾಡಲು ಘೋಷಿಸಿದ್ದಾರೆ ಎಂದರು.

1001918649

ಈ ಐಕ್ಯ ಹೋರಾಟಕ್ಕೆ ಸಂದ ಜಯವನ್ನು ನರಗುಂದ-ನವಲಗುಂದ ರೈತ ಹುತಾತ್ಮರಿಗೆ ಜುಲೈ 21ರಂದು ಅರ್ಪಣೆ ಮಾಡಲಾಗುವುದು ಮತ್ತು ರೈತರ ಜ್ವಲಂತ ಸಮಸ್ಯೆಗಳನ್ನ ಇಟ್ಟುಕೊಂಡು ಮುಂದಿನ ಹೋರಾಟದ ರೂಪುರೇಷೆಗಳನ್ನು ಈ ಬೃಹತ್‌ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ ಈ ಬೃಹತ್‌ ಬಹಿರಂಗ ಸಭೆಗೆ ರೈತರು, ರೈತ ಮಹಿಳೆಯರು, ಕೃಷಿ ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕೋರಿದರು.

1001918652

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ರೈತರಿಗೆ ಮಹತ್ತರ ನೀರಾವರಿ ಯೋಜನೆಯಾದ ಮಹಾದಾಯಿ ಸುಮಾರು 2 ದಶಕಗಳು ಕಳೆದರೂ ಈಗಿನವರೆಗೂ ಯಾವುದೇ ರೀತಿಯಲ್ಲೂ ಕಾಮಗಾರಿ ಆರಂಭಗೊಂಡಿಲ್ಲ. ಮಹಾದಾಯಿ ಯೋಜನೆಯ ಹೆಸರಿನಲ್ಲಿ ವಿವಿಧ ರಾಜಕೀಯ ಪಕ್ಷದ ರಾಜಕಾರಣಿಗಳು ಅಧಿಕಾರಕ್ಕೆ ಬಂದು ಆಡಳಿತ ನಡೆಸಿದರೂ ಸಹ ಯೋಜನೆಯ ಬಗ್ಗೆ ಗಮನಹರಿಸಿಲ್ಲ. ಮಹಾದಾಯಿ ಯೋಜನೆಯನ್ನು ವಿಶೇಷವಾಗಿ ಪರಿಗಣಿಸಿ ಸರ್ಕಾರಗಳು ಕೂಡಲೇ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿದರು.

ಆಲಮಟ್ಟಿ ಜಲಾಶಯದ ಎತ್ತರವನ್ನು ಸುಪ್ರೀಂ ಕೋರ್ಟ್ ಆದೇಶದಂತೆ 524 ಮೀಟರ್ ಎತ್ತರಿಸಿ ಆ ಭಾಗದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕೆಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...