ಶಿವಮೊಗ್ಗ | ಒಳಮೀಸಲಾತಿ ಸಮೀಕ್ಷೆಯಿಂದ ಅಲೆಮಾರಿಗಳು ಬಿಟ್ಟುಹೋಗುವ ಅತಂಕ : ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಆರೋಪ

Date:

ಶಿವಮೊಗ್ಗ ಈಗ ನಡೆಯುತ್ತಿರುವ ಒಳಮೀಸಲಾತಿ ಸಮೀಕ್ಷೆಯಲ್ಲಿ ಯಾವುದೇ ನೆಲೆ ಇಲ್ಲದ ಅಲೆಮಾರಿ ಜನಾಂಗಗಳು ಬಿಟ್ಟುಹೋಗುವ ಸಂಭವವಿದೆ ಎಂದು ಕರ್ನಾಟಕ ಪ.ಜಾ ಮತ್ತು ಪ.ಪಂಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲೆಮಾರಿ ಸಮುದಾದವರಲ್ಲಿ ಜಾಗೃತಿ ಮೂಡಿಸಲು ಸಮೀಕ್ಷೆಯನ್ನು ಹೋಬಳಿ ಮಟ್ಟದಲ್ಲಿ ಕನಿಷ್ಠ 3 ದಿನಗಳ ಕಾಲ ನಡೆಸುವಂತೆ ಮುಖ್ಯಮಂತ್ರಿಯ ಮೇಲೆ ಒತ್ತಡ ಹೇರಲು ಜಿಲ್ಲಾಧಿಕಾರಿ ಮೂಲಕ‌ ಮನವಿ ಸಲ್ಲಿಸಲಾಗುವುದು ಎಂದರು.

ಯಾವುದೇ ಸಮುದಾಯಕ್ಕೆ ದತ್ತಾಂಶಗಳು ಇಲ್ಲದೆ ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ಆದುದರಿಂದಲೇ ಮೇ.5 ರಿಂದ ಮನೆ ಮನೆಗಳಿಗೆ ತೆರಳಿ ಸಮೀಕ್ಷೆ ಮಾಡಲಾಗುತ್ತಿದೆ. ಅವಕಾಶ ವಂಚಿತರಾದ ಸಾಮಾಜಿಕ ಕಳಂಕಿತರಾದವರು ಕಣಿ ಹೇಳುವ, ಧಾರ್ಮಿಕ ಭಿಕ್ಷಾಟನೆ ಮಾಡುತ್ತಿದ್ದ ಪ.ಜಾತಿಯ ಅಲೆಮಾರಿಗಳಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2016 ರಲ್ಲಿ ದೊಂಬರ, ಸುಡುಗಾಡುಸಿದ್ದ, ಕೊರಚ, ಕೊರಮ, ಹಂದಿ ಜೋಗಿ, ಶಿಳ್ಳೆಕ್ಯಾತ, ಬುಡುಗಜಂಗಮ, ಘಂಟಿಚೋರ, ಮುಕ್ರಿ, ಚನ್ನ ದಾಸರ, ಮಾಲದಾಸರ, ಮಾಂಗ್, ಗಾರುವಾಡಿ, ಗೋಸಂಗಿ, ಸಿಂಧೋಳ್ಳು, ಪಾಲೆ, ಅಜಿಲ, ಆದಿಲ ಇತ್ಯಾದಿ 51 ಸಮುದಾಯಗಳು ಅಲೆಮಾರಿಗಳು, ಮುಕ್ತ ಬುಡಕಟ್ಟು ಅತೀ ಸೂಕ್ಷ್ಮ ಎಂದು ಗುರುತಿಸಿದೆ ಎಂದರು.

24 ಜಿಲ್ಲೆಗಳ ಪ್ರವಾಸ ಮಾಡಿ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದ್ದೇನೆ. ತಿಳುವಳಿಕೆ ಶಿಕ್ಷಣ ಇಲ್ಲದೆ ಹೊಟ್ಟೆಪಿಗಾಗಿ ವಿವಿಧ ಕೆಲಸ ಮಾಡುತ್ತಿದ್ದಾರೆ. ವೋಟರ್ ಐಡಿ, ಕ್ಯಾಸ್ಟ್ ಚೋಪಡಿಯಲ್ಲಿ ವಾಸಚಾಗಿರುವ ವಿಶೇಷ ತಜ್ಞರ ಆಯೋಗವು ಹೋಬಳಿ ಮಟ್ಟದಲ್ಲಿ ಅಲೆಮಾರಿ ವಿಶೇಷ ಸಮೀಕ್ಷೆ ಕಾರ್ಯಕ್ರಮ ಕೈಗೊಳ್ಳಬೇಕು ಎಂದರು.

ನಿಗಮದಿಂದ ಪ್ರತ್ಯೇಕ ಸಮೀಕ್ಷೆ ಮಾಡಲು ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ಮತ್ತು ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆಯೋಗ ಈ ಬಗ್ಗೆ ಕ್ರಮ ಜರುಗಿಸಿಲ್ಲ. ವಿಖಾಸವಿಲ್ಲದೆ ಬದುತ್ತಿರುವ ಈ ಸಮುದಾಯಕ್ಕೆ ಜಿಲ್ಲಾ ಅನುಷ್ಠಾನ ಸಮಿತಿ ನೀಡಬೇಕು. ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ದೂರಿದರು. ಪ್ರವಾಸದಿಂದ ವಿಶೇಷ ಶಿಬಿರ ನಡೆಸಿ ಸ್ಥಳ ಮಹಜರ್ ಮಾಡಿ ವಂಶವೃಕ್ಷ, ಜಾತಿ ಸೆರ್ಟಿಫಿಕೇಟ್ ನೀಡಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...