ಶಿವಮೊಗ್ಗ | ಆಗುಂಬೆ ಭಾಗದಲ್ಲಿ ಕಾಳಿಂಗ ಸರ್ಪ ಸಂಶೋಧನಾ ಹೆಸರಿನಲ್ಲಿ ವಂಚನೆ: ತನಿಖೆಗೆ ಆದೇಶಿಸಿದ ಈಶ್ವರ್ ಖಂಡ್ರೆ

Date:

ಶಿವಮೊಗ್ಗ, ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ.

ಜನ ಸಂಗ್ರಾಮ ಪರಿಷತ್‌ನಿಂದ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡದಿಂದ ತನಿಖೆ ನಡೆಸಿ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಕಾಳಿಂಗ ಸರ್ಪ ಸಂಶೋಧನೆ ಹೆಸರಲ್ಲಿ ಆಗುಂಬೆ ಮಳೆಕಾಡು ಸಂಶೋಧನಾ ಕೇಂದ್ರದ (ಎಆರ್‌ಆರ್‌ಎಸ್‌) ವಂಚನೆ, ಕಾನೂನು ಉಲ್ಲಂಘನೆ ಬಗ್ಗೆ ಜನ ಸಂಗ್ರಾಮ ಪರಿಷತ್‌ ಅಧ್ಯಕ್ಷ ಅಖಿಲೇಶ್‌ ಚಿಪ್ಲಿ ಅವರು ಸಚಿವ ಈಶ್ವರ್ ಖಂಡ್ರೆ ಅವರಿಗೆ ದೂರು ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾಳಿಂಗ ಸರ್ಪ ಮತ್ತದರ ಮರಿಗಳ ವಿಡಿಯೋ ಅಂತಾರಾಷ್ಟ್ರೀಯ ವನ್ಯಜೀವಿ ಚಲನಚಿತ್ರದಲ್ಲಿ ಬಳಕೆ ಮಾಡುತ್ತಿದ್ದು, ಚಿತ್ರೀಕರಣದ ತುಣುಕಿಗೆ ಭಾರಿ ಬೇಡಿಕೆ ಇದೆ. ಹೀಗಾಗಿ ಇದನ್ನೇ ಬಂಡವಾಳವಾಗಿ ಮಾಡಿಕೊಂಡು ಹಣದ ಆಸೆಗೆ ಸಂಶೋಧನಾ ಹೆಸರಿನಲ್ಲಿ ವಂಚನೆ ನಡೆಯುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ತಲ್ಲೂರು ಗ್ರಾಮದ ಸರ್ವೆ ನಂ.11ರ ಸೋಮೇಶ್ವರ ಅಭಯಾರಣ್ಯದ ಕೇಂದ್ರ ಭಾಗದಲ್ಲಿ ಆಗುಂಬೆಯ ಎಆರ್‌ಆರ್‌ಎಸ್‌ನವರು ಅಕ್ರಮವಾಗಿ ಜಮೀನು ಖರೀದಿಸಿದ್ದಾರೆ. ಯಾವುದೇ ಸಂಶೋಧನೆಗೆ ನಿರ್ದಿಷ್ಟ ಸಮಯಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ. ಆದರೆ, ಇಲ್ಲಿ ವರ್ಷವಿಡೀ ಸಂಶೋಧನೆ ಹೆಸರಲ್ಲಿ ಛಾಯಾಗ್ರಹಣ ನಡೆಸಲಾಗುತ್ತಿದೆ.

ಕಾಳಿಂಗ ಸರ್ಪಗಳ ಸೆರೆ, ರಕ್ಷಣೆ ಹೆಸರಲ್ಲಿ ಪರಿಶಿಷ್ಟರ ಮೇಲೆ ಆಗುತ್ತಿರುವ ಶೋಷಣೆ ಬಗ್ಗೆ ದೂರುದಾರರು ಪ್ರಸ್ತಾಪಿಸಿದ್ದರು.

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅರಣ್ಯ ಭೂಮಿ ಒತ್ತುವರಿ, ಕಟ್ಟಡ ನಿರ್ಮಾಣ, ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯೊಳಗೆ ಪರಿಸರ ಸೂಕ್ಷ್ಮ ಪ್ರದೇಶದ ಭೂಮಿ ಖರೀದಿ ಮಾಡಿರುವ ಗಂಭೀರ ಅಕ್ರಮಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದರು.

ಕಾಳಿಂಗ ಸರ್ಪಗಳ ಆವಾಸದಲ್ಲಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳು, ಅರಣ್ಯ ಮತ್ತು ವನ್ಯಜೀವಿ ಕಾಯಿದೆಗಳ ನೇರ ಉಲ್ಲಂಘನೆ ಬಗ್ಗೆ ಉನ್ನತ ಮಟ್ಟದ ಪಾರದರ್ಶಕ ತನಿಖೆಗೆ ಮನವಿ ಮಾಡಿದ್ದರು.ಇತ್ತೀಚಿಗೆ ಕೊಡಗು ಸಮೀಪದಲ್ಲಿ ಅಕ್ರಮವಾಗಿ ಕಾಳಿಂಗ ಸರ್ಪ ಹಿಡಿದುಕೊಂಡು ವಿಡಿಯೋ, ಫೋಟೋ ಛಾಯಾಗ್ರಹಣ ಮಾಡುತ್ತಿದ್ದ ಮಹಾರಾಷ್ಟ್ರದ ಮೂವರ ಮೇಲೆ ಪ್ರಕರಣ ದಾಖಲಾಗಿದೆ.

ಇದು ಮಾಸುವ ಮುನ್ನವೇ ಆಗುಂಬೆಯ ಎ ಆರ್ ಆರ್ ಎಸ್ ಖಾಸಗಿ ಸಂಸ್ಥೆಯ ಸಿಬ್ಬಂದಿ ಅಕ್ರಮವಾಗಿ ಕಾಳಿಂಗ ಸರ್ಪ ಮತ್ತು ಮರಿಗಳನ್ನು ತಂದು ಇಟ್ಟುಕೊಂಡು ತಮ್ಮ ಜಾಗದಲ್ಲಿ ವನ್ಯಜೀವಿ ಛಾಯಾಗ್ರಾಹಕರಿಗೆ ಫೋಟೋ ವಿಡಿಯೋ ಶೂಟ್ ಮಾಡಲು ವ್ಯವಸ್ಥೆ ಮಾಡಿದೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...