ಶಿವಮೊಗ್ಗ | ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಆದ್ಯತೆ ನೀಡಿ : ಹಿರಿಯ ಸಿವಿಲ್ ನ್ಯಾ. ಸಂತೋಷ್ ಸಲಹೆ

Date:

ಶಿವಮೊಗ್ಗ, ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಸಲಹೆ ನೀಡಿದರು.

ನಗರದ ಕಮಲಾ‌ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ ನಿಲಯದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಆಧುನಿಕತೆಯ ಜಾಲತಾಣದಲ್ಲಿ ಕಾಣುವುದೆಲ್ಲವು ನಿಜವಲ್ಲ. ವಾಸ್ತವತೆಯ ಜ್ಞಾನವನ್ನು ಪಡೆಯಿರಿ. ಜಾಲತಾಣಗಳು ನಮ್ಮನ್ನು ಅಂಧತ್ವದ ಮೊಹದ ಬಲೆಗೆ ಸಿಲುಕಿಸುತ್ತಿದೆ. ಅಂತಹ ಆಕರ್ಷಣೆಗಳಿಂದ ಎಚ್ಚರದಿಂದಿರಿ ಎಂದರು.

ವಾಸ್ತವತೆಯನ್ನು ವಿಮರ್ಶಿಸಲು ಪ್ರಯತ್ನಿಸಿ. ಹಿರಿಯರ ಸಲಹೆಗಳನ್ನು ಕೇಳಿಸಿಕೊಳ್ಳುವ ಸಂಯಮತೆ ಬೇಕು.ನಮ್ಮ ಯುವ ಸಮೂಹದಲ್ಲಿ ಅದ್ಭುತವಾದ ಗುರಿಯಿದೆ, ಅದರೇ ಕ್ರಮಿಸುವ ಮಾರ್ಗ ಗೊತ್ತಿಲ್ಲ. ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಆದ್ಯತೆ ನೀಡಿ. ಪೋಷಕರು ಮತ್ತು ಸಮಾಜದ ಋಣ ತೀರಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂಬುದು ಜ್ಞಾಪಕದಲ್ಲಿ ಇಡಿ. ಕಾನೂನು ಎಂಬುವುದು ಒಂದು ಸಾಮಾನ್ಯ ಜ್ಞಾನ. ಅಂತಹ ಜ್ಞಾನ ಸದಾ ನಮ್ಮನ್ನು ಜವಾಬ್ದಾರಿಯಿಂದ ನಡೆಯುವಂತೆ ಮಾಡುತ್ತದೆ. ಹೆಣ್ಣು ಮಕ್ಕಳ ಪ್ರತಿ ಹಂತದ ರಕ್ಷಣೆಯಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಮಹಿಳಾ ಸಮಾನತೆ ಸಬಲಿಕರಣದ ಬಗ್ಗೆ ದೊಡ್ಡ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಎರಡು ಆಯಾಮವಿದೆ. ಸಾಮಾಜಿಕ ಮತ್ತು ಕಾನೂನಿನ ಆಯಾಮದ ಅಡಿಯಲ್ಲಿ ಈ ಚರ್ಚೆಗಳು ನಡೆಯುತ್ತಿದೆ‌. ಕಾನೂನಿನ ಕುರಿತು ಅರಿವಿದೆ ಅದರೇ ಅದರ ಮೌಲ್ಯವೇನು ಎಂಬುದು ಗೊತ್ತಿಲ್ಲ. ಹದಿಹರೆಯದ ವಿದ್ಯಾರ್ಥಿನಿಯರು ಅನೇಕ ಗೊಂದಲದಲ್ಲಿದ್ದಾರೆ. ಅಂತಹ ಗೊಂದಲಗಳಿಗೆ ಮೂಲ ಕಾರಣ ಆಧುನಿಕ ಮಾಧ್ಯಮಗಳು, ಜಾಲತಾಣಗಳು. ಸಾಮಾಜಿಕ‌ ಜಾಲತಾಣದಲ್ಲಿ ನೋಡುವ ವಿಚಾರವೆಲ್ಲವು ನಿಜವೆಂಬ ಭ್ರಮೆ ನಮ್ಮಲ್ಲಿದೆ. ನಾವು ಕೂಡ ಆಧುನಿಕವಾಗಿ ಸಮಾಜಕ್ಕೆ ತೆರೆದುಕೊಳ್ಳಬೇಕು ಎಂಬ ಆತುರ ಶುರುವಾಗಿದೆ. ಹಕ್ಕುಗಳನ್ನು ಬಳಸುವಾಗ ನಿಮ್ಮ ಮೇಲಿರುವ ಜವಾಬ್ದಾರಿಗಳ ಬಗ್ಗೆಯೂ ಅರಿವಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎನ್ಇಎಸ್ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ವಿದ್ಯಾರ್ಥಿ ನಿಲಯದ ಮುಖ್ಯಸ್ಥೆ ಸಂಜಿದಾ ಬಾನು, ದಿವ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...