ಶಿವಮೊಗ್ಗ | ಉತ್ತಮ ಗುಣ, ನಡತೆ, ಆಧಾರ 353 ರೌಡಿ ಶೀಟರ್ಸ್ ಗೆ ಬಿಗ್ ರಿಲೀಫ್

Date:

ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚಿನ 10 ವರ್ಷಗಳಲ್ಲಿ ಯಾವುದೇ ಪ್ರಕರಣ ದಾಖಲಾಗದೇ ಇರುವಂತಹ ಹಾಗೂ ಉತ್ತಮ ಗುಣ, ನಡತೆ ಹೊಂದಿರುವ ಹಾಗೂ ಮೃತ ಪಟ್ಟಂತಹ ಹಾಗೂ ವಯಸ್ಸಿನ ಆಧಾರದ ಮೇಲೆ ಶಿವಮೊಗ್ಗ – ಎ ಉಪ ವಿಭಾಗದ – 17, ಶಿವಮೊಗ್ಗ – ಬಿ ಉಪ ವಿಭಾಗದ – 60, ಭದ್ರಾವತಿ ಉಪ ವಿಭಾಗದ – 72, ಸಾಗರ ಉಪ ವಿಭಾಗದ – 55, ಶಿಕಾರಿಪುರ ಉಪ ವಿಭಾಗದ – 124 ಹಾಗೂ ತೀರ್ಥಹಳ್ಳಿ ಉಪ ವಿಭಾಗದ – 25 ಜನ ರೌಡಿ ಆಸಾಮಿಗಳು ಸೇರಿ ಒಟ್ಟು 353 ಜನ ರೌಡಿಗಳಿಗೆ ರಿಲೀಫ್ ಸಿಕ್ಕಿದೆ.

ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮುಕ್ತಾಯ ಮಾಡುವ ಸಂಬಂಧ ಇಂದು ಮಧ್ಯಾಹ್ನ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ. ಕೆ, ನೇತೃತ್ವದಲ್ಲಿ, ಶಿವಮೊಗ್ಗ ಡಿಎಆರ್ ಪೊಲೀಸ್ ಕವಾಯತು ಮೈಧಾನದಲ್ಲಿ ರೌಡಿಗಳ ಪರೇಡ್ ಕರೆಯಲಾಗಿತ್ತು, ಪರೇಡ್ ನಲ್ಲಿ ಹಾಜರಿದ್ದ ರೌಡಿಶೀಟರ್ ಕೆಲವೊಂದು ಸೂಚನೆಗಳನ್ನು ನೀಡಲಾಗಿದೆ.

1001742632

ಯಾವುದೋ ಕೆಟ್ಟ ಸಂದರ್ಭ ಹಾಗೂ ನಿಮ್ಮ ನಡೆತೆಯಿಂದ ನಿಮ್ಮಗಳ ವಿರುದ್ಧ ಈ ಹಿಂದೆ ರೌಡಿ ಹಾಳೆಯನ್ನು ತೆರೆದಿದ್ದು, ಆದರೆ ಇತ್ತೀಚಿನ ದಿನಗಳಲ್ಲಿ ನಿಮ್ಮ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗದೇ ಇರುವುದರಿಂದ ಹಾಗೂ ಸಮಾಜದಲ್ಲಿ ನಿಮ್ಮ ನಡತೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಮಾನದಂಡಗಳ ಆಧಾರದಲ್ಲಿ ನಿಮ್ಮ ವಿರುದ್ಧ ಈ ಹಿಂದೆ ತೆರೆಯಲಾಗಿದ್ದ ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮಾಡುತ್ತಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದಲ್ಲಿ ಎಲ್ಲ ನಾಗರೀಕರ ರೀತಿ ನೀವು ಸಹಾ ಉತ್ತಮ ಜೀವನ ನಡೆಸಲು ಇದು ಒಂದು ಸದಾವಕಾಶವಾಗಿರುತ್ತದೆ.ಇನ್ನು ಮುಂದೆ ಸಮಾಜದಲ್ಲಿ ಉತ್ತಮ ಪ್ರಜೆಗಳ ರೀತಿ ಜೀವನ ನಡೆಸಿ.

ನಿಮ್ಮೆಲ್ಲರ ವಿರುದ್ಧ ಪೊಲೀಸ್ ಇಲಾಖೆಯು ಸೂಕ್ಷ್ಮವಾಗಿ ಗಮನ ಹರಿಸಲಿದ್ದು, ನೀವು ಯಾವುದೇ ಸಣ್ಣ ಪುಟ್ಟ ಕಾನೂನು ಬಾಹೀರ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಬಂದರೂ ಸಹಾ ತಾತ್ಕಾಲಿಕವಾಗಿ ಮುಕ್ತಾಯ ಮಾಡಲಾದ ರೌಡಿ ಹಾಳೆಯನ್ನು ಪುನಾಃ ತೆರೆಯಲಾಗುತ್ತದೆ ಹಾಗೂ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತದೆ.

1001742262

ನಿಮ್ಮ ಕುಟುಂಬ,ಸಮಾಜ ಹಾಗೂ ಪೊಲೀಸ್ ಇಲಾಖೆಯೊಂದಿಗೆ ನಿಷ್ಠೆಯಿಂದಿರಿ, ಜೀವನೋಪಾಯಕ್ಕಾಗಿ ನಿರ್ವಹಿಸುವ ಕರ್ತವ್ಯಗಳನ್ನು ಶಿಸ್ತಿನಿಂದ ಮಾಡಿ, ಸಮಾಜದಲ್ಲಿ ಒಬ್ಬ ಉತ್ತಮ ನಾಗರೀಕನಾಗಿ ರೂಪುಗೊಳ್ಳಿ. ಸಮಾಜದಲ್ಲಿ ಒಳ್ಳೆಯ ಸ್ಥಾನ ಮಾನ ಗಳಿಸಲು ನಿಮಗೆ ಒದಗಿ ಬಂದ ಸದಾವಕಾಶ ಸಿಕ್ಕಿದ್ದು, ಇದರ ಉಪಯೋಗ ಪಡೆಯಿರಿ ಎಂದು ತಿಳಿಸಲಾಗಿದೆ.

ತಾತ್ಕಾಲಿಕವಾಗಿ ಮುಕ್ತಾಯ ಮಾಡಲಾದ ರೌಡಿ ಹಾಳೆಯು ಯಾವುದೇ ಕಾರಣಕ್ಕೆ, ಪುನಃ ತೆರೆಯುವ ಸಂದರ್ಭ ಬಂದರೇ ನಿಮ್ಮ ಜೀವನ ಪರ್ಯಂತ ನಿಮ್ಮ ವಿರುದ್ಧ ತೆರೆಯಲಾದ ರೌಡಿ ಹಾಳೆಯು ಪ್ರಚಲಿತದಲ್ಲಿರುತ್ತದೆ ಹಾಗೂ ನೀವು ಪೊಲೀಸ್ ಇಲಾಖೆಯ ನೇರ ಕಣ್ಗಾವಲಿನಲ್ಲಿರುತ್ತೀರಿ ಹಾಗೂ ಕಾನೂನು ರೀತ್ಯಾ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಎಲ್ಲರು ಸನ್ನಡತೆಯಿಂದ ಜೀವನ ನಡೆಸಿ, ನಿಮ್ಮ ಸುತ್ತ ಮುತ್ತಲು ನಡೆಯುವ ಯಾವುದೇ ಘಟನೆಗಳ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...