ಶಿವಮೊಗ್ಗ | ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ಶಾಸನಬದ್ದ ತೀರ್ಮಾನವನ್ನು ತೆಗೆದುಕೊಳ್ಳಬೇಕು

Date:

ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ತಾಯ್ತನ ತೋರಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಶಾಸನಬದ್ದ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸ ಕರ ರಾಜ್ಯ ಸಮನ್ವಯ ಸಮಿತಿಯ ರಾಜ್ಯಾಧ್ಯಕ್ಷ ಡಾ. ಸೋಮಶೇಖರ್ ಹೆಚ್. ಶಿಮೊಗ್ಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ದಲ್ಲಿ ಸುಮಾರು 11 ಸಾವಿರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿದ್ದಾರೆ. ಇವರಲ್ಲಿ 5620 ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಪಡೆದವರಿದ್ದಾರೆ. ಉಳಿದ 5353 ಅತಿಥಿ ಉಪನ್ಯಾಸಕರು ಯುಜಿಸಿ ಅರ್ಹತೆ ಯನ್ನು ಪಡೆದಿಲ್ಲ. ಆದರೆ ಹತ್ತಾರು ವರ್ಷಗಳ ಕಾಲ ಇವರು ಭೋದನೆ ಮಾಡಿದ್ದಾರೆ.

ಲಕ್ಷಾಂತರ ವಿದ್ಯಾರ್ಥಿಗಳು ಇವರ ಪಾಠವನ್ನು ಪಡೆದು, ಉನ್ನತ ಹುದ್ದೆಗಳಲ್ಲಿ ಅವಕಾಶ ಪಡೆದಿದ್ದಾರೆ. ಈಗ ಇವರನ್ನು ಯುಜಿಸಿ ಅರ್ಹತೆ ಪಡೆದಿಲ್ಲ ಎಂಬ ಕಾರಣಕ್ಕೆ ಕೈ ಬಿಟ್ಟಿರುವುದು ಸರಿಯಲ್ಲ ಆದಕಾರಣ ಯಾವುದೇ ಕಾರಣಕ್ಕೂ ಅವರನ್ನು ಸೇವೆಯಿಂದ ಕೈ ಬಿಟ್ಟಿರುವುದು ಸರಿಯಲ್ಲ ಆದಕಾರಣ ಯಾವುದೇ ಕಾರಣಕ್ಕೂ ಅವರನ್ನು ಸೇವೆಯಿಂದ ಕೈ ಬಿಡಬಾರದು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯ ಕೂಡ ಒಬ್ಬ ತಾತ್ಕಾಲಿಕ ನೌಕರನ ಸ್ಥಾನವನ್ನು ಮತ್ತೊಬ್ಬ ತಾತ್ಕಾಲಿಕ ನೌಕರನು ಸ್ಥಳಾಂತರಿಸಲು ಅವಕಾಶ ಇಲ್ಲ ಎಂದು ತೀರ್ಪು ನೀಡಿದೆ. ಅತಿಥಿ ಉಪನ್ಯಾಸ ಕರು ತಮ್ಮನ್ನು ಸೇವೆಯಿಂದ ತೆರವು ಮಾಡದಂತೆ ಮಧ್ಯಂತರ ತಡೆಯಾಜ್ಞೆ ಕೂಡ ತಂದಿದ್ದಾರೆ ಎಂದ ಅವರು, ಜೊತೆಗೆ ಕಾಲೇಜು ಶಿಕ್ಷಣ ಇಲಾಖೆ ಯಾವುದೇ ಅತಿಥಿ ಉಪನ್ಯಾಸಕರನ್ನು ನೂತನ ಕಾಯಂ ನೇಮಕಾತಿ ಅಥವಾ ವರ್ಗಾವಣೆ ಸಂದರ್ಭದಲ್ಲಿ ಮತ್ತು ಕಾರ್ಯಭಾರದ ಕೊರತೆಯಾದ ಸಂದರ್ಭದಲ್ಲಿ ಮಾತ್ರ ಅತಿಥಿ ಉಪನ್ಯಾಸಕರ ಸ್ಥಾನವನ್ನು ತೆರವುಗೊಳಿಸಬಹುದು ಎಂದು ಹೇಳಿದೆ ಎಂದರು.

ಹಾಗಾಗಿ ಸರ್ಕಾರ 2025-26ನೇ ಸಾಲಿನ ಅತಿಥಿ ಉಪನ್ಯಾಸಕರ ನೇಮಕಾತಿಯ ಬಿಕ್ಕಟ್ಟನ್ನು ಪ್ರಾರಂಭಿಕವಾಗಿಯೇ ಬಗೆಹರಿಸ ಬೇಕು. ಅತಿಥಿ ಉಪನ್ಯಾಸಕರನ್ನು ಉಳಿಸಿಕೊಳ್ಳಬೇಕು. ಇದಕ್ಕಾಗಿ ನೇಮಕಾತಿ ಬಿಕ್ಕಟ್ಟನ್ನು ನಿವಾರಿಸಲು ಶಾಸನಬದ್ದ ಮಾಡಬೇಕು. ಸಚಿವ ಸಂಪುಟದಲ್ಲಿ ಈ ಬಗ್ಗೆ ಸ್ಪಷ್ಟನಿರ್ಧಾರ ತೆಗೆದುಕೊಳ್ಳಬೇಕು ಎಂದರು.

ಮುಖ್ಯಸ್ಥರಾದ ನಟರಾಜ್ ಆರ್.ಟಿ., ಟಿ.ಹೆಚ್. ಹಾಲೇಶಪ್ಪ, ಪ್ರೊ. ರಾಚಪ್ಪ ಎಸ್.ವಿ. ರಾಜಮ್ಮ, ಈಸೂರು ಧನಂಜಯಪ್ಪ ಮಂಜುನಾಥ್ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...