ಶಿವಮೊಗ್ಗ | ಸಾಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಂದ ಸಂತಸ;ಮಧು ಬಂಗಾರಪ್ಪ

Date:

ಸೋಮವಾರ ಸಾಗರ ತಾಲ್ಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಇತರೆ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಪಟ್ಟಣದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಗರ ತಾಲ್ಲೂಕಿನಲ್ಲಿ ಅಕ್ರಮ- ಸಕ್ರಮ‌ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.

ಇಂದು ಸಾಗರ ತಾಲ್ಲೂಕಿನ ಸುಮಾರು 8 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.94 ಸಿ ಮತ್ತು ಸಿಸಿ 158 ಜನರಿಗೆ ಹಕ್ಕುಪತ್ರ ವಿತರಣೆ ,ಪೋಷಣ್ ಅಭಿಯಾನದಡಿ 98 ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ ವಿತರಣೆಗೆ ,ಜಂಬಗಾರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರೂಪಾಯಿ.2 ಕೋಟಿ ಮೊತ್ತದ 6 ಕೊಠಡಿಗಳಿಗೆ ಕಾಮಗಾರಿ, ಪರಿಶಿಷ್ಟ ಪಂಗಡದ ಬುಡಕಟ್ಟು ಜನಾಂಗದವರಿಗೆ 66 ಸೋಲಾರ್ ಲೈಟ್ಗಳನ್ಮು ನೀಡುತ್ತಿರುವುದು ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 7 ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುವ ಕುರಿತು ಸರ್ಕಾರದ ಹಂತದಲ್ಲಿ ಮಹತ್ವದ ಸಭೆ ನಡೆಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001600859

ಕಳೆದ ಬಾರಿಗಿಂತ ಎಸ್ ಎಸ್ ಎಲ್ ಸಿ ಯಲ್ಲಿಶೇ. 8.5 ಹೆಚ್ಚಿಗೆ ಫಲಿತಾಂಶ ಬರುವ ಮೂಲಕ ಉತ್ತಮ ಫಲಿತಾಂಶ ಬಂದಿದ್ದು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಧನ್ಯವಾದಗಳು ಎಂದ ಅವರು ಶಾಲೆಗಳು ಉದ್ದಾರವಾದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಾಲ್ಲೂಕು ಆಡಳಿತ ಸೌಧದ ಮೂಲಭೂತ ಸೌಕರ್ಯಗಳ ಅಭಿವೃದ್ದಿಗೆ ರೂ. 4 ಕೋಟಿ ಕಾಮಗಾರಿ, ಸೋಲಾರ್ ಲೈಟ್ ವಿತರಣೆ, ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಡಿವಿ ವಿತರಣೆ, ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸದ ವಿಷಯ. ಯುಜಿಡಿ ಕಾಮಗಾರಿಗೆ ರೂ. 20 ಕೋಟಿ ಬಿಡುಗಡೆ ಮಾಡಿದ್ದೇನೆ. , ಸರ್ಕಾರಿ ಪ್ರ.ದ.ಕಾಲೇಜು ಕೊಠಡಿ ನಿರ್ಮಾಣಕ್ಕೆ ರೂ.2 ಕೋಟಿ , ೧೫೮ ಜನರಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿರುವುದು, ಅಂಗನವಾಡಿ ಕೇಂದ್ರಗಳಿಗೆ ಎಲ್ ಇ ಡಿ ಟಿವಿ ವಿತರಣೆ ಮಾಡುತ್ತಿರುವು ಸೇರಿದಂತೆ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿರುವು ಹೆಮ್ಮೆಯ ವಿಚಾರ ಎಂದರು.

1001600858

ತಾಲ್ಲೂಕಿನ 5 ವರ್ಷದ ಅಭಿವೃದ್ಧಿ ಬಗ್ಗೆ ಯೋಚಿಸಿದ್ದೇನೆ. ನಗರ ರಸ್ತೆ ಅಗಲೀಕರಣ, ಮಾರ್ಕೆಟ್ ರಸ್ತೆ ಅಗಲೀಕರ ಮಾಡುತ್ತೇವೆ. ನಗರದ ಜನರಿಗೆ 24 ಗಂಟೆ ಕುಡಿಯುವ ನೀರಿಗೆ ರೂ. 250 ಕೋಟಿ ಯೋಜನೆ ತಯಾರಾಗಿದೆ.‌ ಮನೆ ಮನೆಗೆ ನೀರು ಒದಗಿಸಲಾಗುವುದು.‌ ಮಕ್ಕಳ ಆಸ್ಪತ್ರೆಗೆ ರೂ. 1.65 ಕೋಟಿ ವೆಚ್ಚದಲ್ಲಿ ಹೈಟೆಕ್ ಗೊಳಿಸಲಾಗುವುದು ಸಾರ್ವಜನಿಕ ಆಸ್ಪತ್ರೆಗೆ ರೂ. 1.25 ಕೋಟಿ ನೀಡಲಾಗಿದೆ.‌ ತಾಲ್ಲೂಕು ಆಸ್ಪತ್ರೆ ಅಪ್ ಗ್ರೇಡ್ ಮಾಡಲು ರೂ.‌70 ಲಕ್ಷ ಸರ್ಕಾರ ನೀಡಿದೆ .ನಗರದಲ್ಲಿ ರವೀಂದ್ರನಾಥ ಟ್ಯಾಗೋರ್ ರಂಗಮಂದಿರ ನಿರ್ಮಿಸಲು ರೂ. 13 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿದೆ. ನೀನಾಸಂ ಅಭಿವೃದ್ದಿಗೆ ರೂ.1 ಕೋಟಿ ನೀಡಲಾಗುತ್ತಿದೆ. ಫುಡ್ ಕೋರ್ಟ್ , ಪ್ರತಿ ವಾರ್ಡ್ ಪಾರ್ಕ್ ಮಾಡಲಾಗುವುದು ಎಂದು ತಿಳಿಸಿದರು.

1001600856

ಶರಾವತಿ ಮುಳುಗಡೆ ಪ್ರದೇಶಗಳಲ್ಲಿ ಕಾಲುಸಂಕಗಳಿಗೆ 40 ರಿಂದ 50 ಕೋಟಿ ನೀಡುವ ಭರವಸೆ ಸರ್ಕಾರ ನೀಡಿದೆ ಎಂದ ಅವರು ತಾಲ್ಲೂಕಿನಲ್ಲಿ ಯಾವುದೇ ಮೂಲಭೂತ ಸೌಕರ್ಯಕ್ಕೆ ಕೊರತೆ ಮಾಡುವುದಿಲ್ಲವೆಂದರು.‌

ಕಾರ್ಯಕ್ರಮದಲ್ಲಿ ಮುಖಂಡರಾದ ಜಯಂತ್, ತಹಶಿಲ್ದಾರ್ ಚಂದ್ರಶೇಖರ್, ಸೇರಿದಂತೆ ವಿವಿಧ ಮುಖಂಡರುಗಳ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...