ಶಿವಮೊಗ್ಗ | ನಾನು ಸಚಿವ ಸ್ಥಾನದ ಆಕಾಂಕ್ಷಿ : ಬೇಳೂರು ಗೋಪಾಲಕೃಷ್ಣ

Date:

ಶಿವಮೊಗ್ಗ, ಕರ್ನಾಟಕ ರಾಜ್ಯಕ್ಕೆ ವಿದ್ಯುತ್ ಸ್ವಾವಲಂಬನೆ ತರಲು ಶರಾವತಿ ಕಣಿವೆಯಲ್ಲಿ 8,644 ಕೋಟಿ ರೂಪಾಯಿ ವೆಚ್ಚದ “ಶರಾವತಿ ಪಂಪ್ಡ್ ಯೋಜನೆ” ಯನ್ನು ಸರ್ಕಾರ ಘೋಷಿಸಿದೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ. ಇದು ದೇಶದಲ್ಲೇ ಅತಿ ದೊಡ್ಡ ಯೋಜನೆಯಾಗಿದ್ದು, 2,000 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಈ ಯೋಜನೆಯು ರಾಜ್ಯದ ಭವಿಷ್ಯದ ವಿದ್ಯುತ್ ಅಭಾವವನ್ನು ಸಂಪೂರ್ಣವಾಗಿ ನಿವಾರಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಯೋಜನೆಯಿಂದ ವಿದ್ಯುತ್ ಭದ್ರತೆ ಮತ್ತು ಉದ್ಯೋಗಾವಕಾಶಯೋಜನೆಯ ಕುರಿತು ವಿವರಿಸಿದ ಗೋಪಾಲಕೃಷ್ಣ, “ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ವಿದ್ಯುತ್ ಕೊರತೆಯುಂಟಾಗಿ ಹಣ ನೀಡಿ ವಿದ್ಯುತ್ ಖರೀದಿಸಬೇಕಾಗಿತ್ತು. ಆದರೆ, ಶರಾವತಿ ಪಂಪ್ಡ್ ಯೋಜನೆಯಿಂದ ಇಂತಹ ಪರಿಸ್ಥಿತಿ ಮರುಕಳಿಸುವುದಿಲ್ಲ” ಎಂದರು.

ಈ ಯೋಜನೆಗೆ ಸ್ಥಳೀಯ ಜನರ ಸುಮಾರು 8 ಎಕರೆ ಜಾಗವನ್ನು ಬಳಸಿಕೊಳ್ಳಲಾಗುವುದು ಮತ್ತು 7 ಕಿಲೋಮೀಟರ್ ವ್ಯಾಪ್ತಿಯಲ್ಲಿ ದೊಡ್ಡ ಸುರಂಗವನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು. ರೈತರ ಭೂಮಿಗೆ ಹೆಚ್ಚಿನ ಹಾನಿಯಾಗುವುದಿಲ್ಲ ಎಂದು ಭರವಸೆ ನೀಡಿದ ಅವರು, ಯೋಜನೆಗೆ ಭೂಮಿ ನೀಡುವ ರೈತರಿಗೆ ಸರ್ಕಾರದಿಂದ ಉದ್ಯೋಗ ನೀಡಲಾಗುವುದು ಎಂದು ಪ್ರಕಟಿಸಿದರು.ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕವಾಗಿ ದುರ್ಬಲವಾಗಿದೆ ಎಂದು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಗೋಪಾಲಕೃಷ್ಣ, “ಗ್ಯಾರಂಟಿ ಯೋಜನೆಗಳಿಗೆ ಹಣ ನೀಡುವುದರ ಜೊತೆಗೆ, ಈ 8 ಸಾವಿರ ಕೋಟಿ ರೂಪಾಯಿ ವೆಚ್ಚದ ಪಂಪ್ಡ್ ಯೋಜನೆಗೆ ಹಣ ಬಿಡುಗಡೆ ಮಾಡುವ ಮೂಲಕ ನಾವು ನಮ್ಮ ಸಾಮರ್ಥ್ಯವನ್ನು ತೋರಿಸಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾನು ಸಚಿವ ಸ್ಥಾನದ ಆಕಾಂಕ್ಷಿ ;

ರಾಜ್ಯದಲ್ಲಿ 10 ಸಚಿವರ ಬದಲಾವಣೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಗೋಪಾಲಕೃಷ್ಣ, ಸುರ್ಜೇವಾಲರವರು ರಾಜ್ಯ ಪ್ರವಾಸ ಕೈಗೊಂಡು 100 ಶಾಸಕರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಆ ವಿಚಾರವನ್ನು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದಾರೆ.

“ಸುರ್ಜೇವಾಲರವರು ನನ್ನನ್ನು ಸಹ ಭೇಟಿ ಮಾಡಿದ್ದರು, ನಾನು ಸಹ ಸಚಿವ ಆಕಾಂಕ್ಷಿ ಎಂದು ಅವರ ಬಳಿ ನನ್ನ ಅಭಿಪ್ರಾಯ ತಿಳಿಸಿದ್ದೇನೆ” ಎಂದರು.

ಸಿಗಂದೂರು ಸೇತುವೆ ಉದ್ಘಾಟನೆ ಗೈರು ಹಾಜರಿ ಸ್ಪಷ್ಟನೆ ;

ಇದೇ ವೇಳೆ, ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭಕ್ಕೆ ತಾವು ಗೈರು ಹಾಜರಾಗಿದ್ದಕ್ಕೆ ಸ್ಪಷ್ಟನೆ ನೀಡಿದ ಅವರು, ಸೇತುವೆ ನಿರ್ಮಾಣಕ್ಕಾಗಿ ತಾವು ಪಾದಯಾತ್ರೆ ಮಾಡಿ ಹೋರಾಟ ನಡೆಸಿದ್ದಲ್ಲದೆ, ಕಾಮಗಾರಿ ಉತ್ತಮ ರೀತಿಯಲ್ಲಿ ನಡೆಯಲು ಸಲಹೆಗಳನ್ನೂ ನೀಡಿದ್ದಾಗಿ ಹೇಳಿದರು.

ಆದರೆ, ನಿನ್ನೆ ನಡೆದ 2,000 ಕೋಟಿ ರೂಪಾಯಿ ಕಾಮಗಾರಿ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿಗಳಿಗೆ ಕೇವಲ ಮೂರು ದಿನಗಳ ಹಿಂದೆ ಪತ್ರದ ಮೂಲಕ ಆಹ್ವಾನ ನೀಡಲಾಗಿತ್ತು. “ಅದೇನು ಮದುವೆ ಕಾರ್ಯಕ್ರಮನ?” ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳು ಕರೆ ಮಾಡಿ ಕಾರ್ಯಕ್ರಮಕ್ಕೆ ತೆರಳದಂತೆ ಸೂಚಿಸಿದ್ದರಿಂದ ತಾವು ಹಾಜರಾಗಿರಲಿಲ್ಲ ಎಂದು ತಿಳಿಸಿದರು.

ನಿನ್ನೆ ನಡೆದ ಕಾರ್ಯಕ್ರಮವು ಬಿಜೆಪಿಯ ಕಾರ್ಯಕ್ರಮವಾಗಿದ್ದು, ಇದಕ್ಕೆ ಅಧಿಕಾರಿಗಳು ಶಾಮೀಲಾಗಿದ್ದರು. ಶಾಮೀಲಾದ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಗೋಪಾಲಕೃಷ್ಣ ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...