ಶಿವಮೊಗ್ಗ | “ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ ” ; ಮಧು ಬಂಗಾರಪ್ಪರ ವೈರಲ್ ವಿಡಿಯೋ ಅಸಲಿಯತ್ತೇನು? ಎಸ್ಪಿಗೆ ದೂರು

Date:

ಶಿವಮೊಗ್ಗ ಜಿಲ್ಲಾ ಈಡಿಗರ ಸಂಘ ಮತ್ತು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು.

ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ ಮೂಡಿಸಿ, ಶಾಂತಿಭಂಗ ಮಾಡಲು ಹೊರಟವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

1001945142

21ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯ ಭೇಟಿಯ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿರುವಾಗ, ಮಾಧ್ಯಮ ಪ್ರತಿನಿಧಿಗಳು ಸಿಗಂಧೂರು ಸೇತುವೆ ವಿಷಯವಾಗಿ ಕೇಳಿರುವ ಪ್ರಶ್ನೆಗೆ ಪ್ರತಿಕ್ರಿಸುವಾಗ, ಸಿಗಂಧೂರು ದೇವಸ್ಥಾನವನ್ನು ಯಾರು ಹಾಳು ಮಾಡಲು ಪ್ರಯತ್ನಿಸಿದರು ಎಂಬುದನ್ನು ಒಂದು ತಿಂಗಳಲ್ಲಿ ಹೇಳುತ್ತೇನೆ ಎಂದು ಮಾದ್ಯಮದವರ ಮುಂದೆ ನೀಡಿದ ಹೇಳಿಕೆಯನ್ನು ಬಿಜೆಪಿಯ ಸೋಶಿಯಲ್ ಮೀಡಿಯಾ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಅರ್ದಕ್ಕೆ ಕತ್ತರಿಸಿ, “ಸಿಗಂದೂರು ದೇವಸ್ಥಾನವನ್ನು ಹೇಗೆ ಹಾಳು ಮಾಡಬೇಕೆಂದು ಒಂದು ತಿಂಗಳೊಳಗೆ ನಿಮಗೆ ಡಿಟೈಲ್ ಹೇಳುವೆ ” ಎಂಬ 19 ಸೆಕೆಂಡ್ ವಿಡಿಯೋವನ್ನು ಮಾಡಿ ಅದರ ಕೆಳಗಡೆ ಅಜ್ಞಾನಿ ವಿದ್ಯಾ ಮಂತ್ರಿಗಳೇ ಸಿಗಂದೂರು ಚೌಡೇಶ್ವರಿ ಮಾತೆಯಮಂದಿರ ಹಾಳು ಮಾಡ್ತೀವಿ ಎಂದ ನಾಲಿಗೆಗೆ ತಾಯಿ ಬರೆ ಹಾಕುವುದು ನಿಶ್ಚಿತ, ಎಂದು ದೇವರ ಚಿತ್ರದೊಂದಿಗೆ ಬರೆದ ವಿಡಿಯೋ ವೈರಲ್ ಮಾಡಿದ್ದಾರೆ.

ಈ ರೀತಿ ಹೇಳಿಕೆಯನ್ನು ತಿರುಚಿರುವುರೊಂದಿಗೆ ಜನರಲ್ಲಿ ಧಾರ್ಮಿಕ ಭಾವನೆಯನ್ನು ಕೆರಳಿಸಿ ಮಂತ್ರಿಗಳ ಬಗ್ಗೆ ದ್ವೇಷ ಭಾವನೆ ಮೂಡುವಂತೆ ಪ್ರಚೋದಿಸಿ. ಜನರನ್ನು ಉದ್ರೆಕಗೊಳಿಸಿ ಸಮಾಜದಲ್ಲಿ ಅಶಾಂತಿ ಮೂಡಿಸಿ ಸಂಘರ್ಷ ಏರ್ಪಡಿಸುವ ಉದ್ದೇಶ ಹೊಂದಿರುವ ಬಿಜೆಪಿ ಕಾರ್ಯಕರ್ತರು ಸೋಶಿಯಲ್ ಮೀಡಿಯಾದ ಈ ವಿಡಿಯೋವನ್ನು ವೈರಲ್ ಮಾಡಿದ್ದು, ಮಂತ್ರಿಗಳನ್ನು ಗೌರವಿಸುತ್ತಿದ್ದ ಸಮಾಜದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಿಂದ ಧಾರ್ಮಿಕ ಭಾವನೆಗೆ ದಕ್ಕೆ ತರುವ ಹೇಳಿಕೆ ನೀಡಿದ್ದಾರೆ ಎಂದು ಜನ ತಪ್ಪು ಭಾವನೆ ಮೂಡುವಂತೆ ಸಾರ್ವಜನಿಕರನ್ನು ಉದ್ರಿಕಿಸುವಂತೆ ಪ್ರಚೋದಿಸುತ್ತಿದ್ದಾರೆ.

ಈ ಹಿಂದಿನ ಸರ್ಕಾರವು ಸಿಗಂಧೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸಲು ಹುನ್ನಾರ ನೆಡೆಸಿದ್ದನ್ನು ಹಾಗೂ ಆಡಳಿತ ಮಂಡಳಿಗೆ ನೀಡಿದ್ದ ಕಿರುಕುಳ, ದೇವಸ್ಥಾನದ ಅಭಿವೃದ್ಧಿಗೆ ಅಡ್ಡಿಪಡಿಸಿರುವುದನ್ನು ಖಂಡಿಸಿ “ಶ್ರೀ ಸಿಗಂಧೂರು ಕ್ಷೇತ್ರ ಹೋರಾಟ ಸಮಿತಿ ರಚಿಸಿ” ಮಧು ಬಂಗಾಪ್ಪನವರು ಹಿಂದಿನ ಸರ್ಕಾರಕ್ಕೆ ಎಚ್ಚರಿಕೆಯನ್ನು, ನೀಡಿ ಸಿಗಂಧೂರು ದೇವಸ್ಥಾನ ಬಹುಸಂಖ್ಯಾತ ಈಡಿಗ ಸಮಾಜದ ಅಸ್ಮಿತೆ, ಪವಿತ್ರ ಧಾರ್ಮಿಕ ಕ್ಷೇತ್ರವಾಗಿದ್ದು ಸರ್ಕಾರ ಮುಜರಾಯಿಗೆ ಸೇರಿಸುವ ಹುನ್ನಾರ ಕೈಬಿಡದಿದ್ದರೆ ಜೇನು ಗೂಡಿಗೆ ಕೈ ಹಾಕಿದಂತೆ ಎಂದು ಎಚ್ಚರಿಸಿ ಹೋರಾಟದ ಎಚ್ಚರಿಕೆಯನ್ನು ನೀಡಿದ್ದರು.

IMG20250723124901 01
oplus_0

ಅಂದಿನಿಂದ ಪ್ರತಿಹಂತದಲ್ಲು ಶ್ರೀ ಕ್ಷೇತ್ರದ ವಿಷಯವಾಗಿ ಸಲ್ಲದ ಸುಳ್ಳುಸುದ್ದಿ ಹರಡುವ ಕುತಂತ್ರ ರಾಜಕಾರಣ ಮಾಡುತ್ತಿದ್ದು, ಈ ನಕಲಿ ವೀಡಿಯೊ ಸೃಷ್ಠಿ ಇದರ ಭಾಗವಾಗಿದೆ.ಈ ರೀತಿಯ ಹೇಳಿಕೆಯಿಂದ ಸಮಾಜದಲ್ಲಿ ಅಶಾಂತಿ ಮೂಡಿ ಶಾಂತಿಭಂಗವಾಗುವ ಸಾದ್ಯತೆಗಳಿರುವುದರಿಂದ, ಉಸ್ತುವಾರಿ ಸಚಿವರಾದ ಮಧುಬಂಗಾರಪ್ಪನವರ ಹೇಳಿಕೆಯನ್ನು ತಿರುಚಿರುವವರ ಮೇಲೆ ಮೊಕದ್ದಮೆ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಈ ಮೂಲಕ ಕೋರುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...