ಶಿವಮೊಗ್ಗ | ಅ. 9ರಿಂದ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಅನಿರ್ದಿಷ್ಟವಧಿ ಧರಣಿ

Date:

ಶಿವಮೊಗ್ಗ, ತಾಲೂಕಿನ ನಿಧಿಗೆ ಹೋಬಳಿ ಸೋಗಾನೆ ಗ್ರಾಮದ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ಸರ್ಕಾರದ ಆದೇಶದ ಪ್ರಕಾರ ಜಮೀನು ಹಂಚಲು ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸಿರುವುದನ್ನು ಪ್ರತಿಭಟಿಸಿ ಅ. 9ರಿಂದ ವಿಮಾನ ನಿಲ್ದಾಣ ಮುಖ್ಯದ್ವಾರದಲ್ಲಿ ಅನಿರ್ದಿಷ್ಟ ಕಾಲಾವಧಿಯ ಧರಣಿ ಹಮ್ಮಿಕೊಂಡಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿಯ ಅಧ್ಯಕ್ಷ ಎಂ ಬಿ ಕೃಷ್ಣಪ್ಪ, ಜಮೀನು ಹಂಚುವಂತೆ ಹೋರಾಟ ಸಮಿತಿಯವರು ಮನವಿ ಮಾಡಿಕೊಂಡರೂ ಸಹ ಇಲ್ಲಿಯವರೆಗೂ ಜಮೀನನ್ನು ಹಂಚಿಕೆ ಮಾಡಿಲ್ಲ.

ಉಚ್ಚ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆ ಇದಾಗಿದೆ. ಆದ್ದರಿಂದ ನ್ಯಾಯ ಸಿಗುವವರೆಗೆ ಅನಿರ್ದಿಷ್ಟ ಕಾಲಾವಧಿಯ ಪ್ರತಿಭಟನೆ ಮತ್ತು ಧರಣಿಯನ್ನು ಸಂತ್ರಸ್ತರ ಕುಟುಂಬದ ರೈತರು ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆಸಲು ತೀರ್ಮಾನಿಸಿದ್ದಾಗಿ ಹೇಳಿದರು. ವಿಮಾನ ನಿಲ್ದಾಣಕ್ಕೆ ರೈತರು ಜಮೀನನ್ನು ಕೊಟ್ಟಿದ್ದು ಆ ಸಮಯದಲ್ಲಿ ಸಂತ್ರಸ್ತ ರೈತರಿಗೆ ೬೦*೪೦ರ ಅಡಿ ನಿವೇಶನ ನೀಡಲು ತೀರ್ಮಾನವಾಗಿತ್ತು. ಆ ಪ್ರಕಾರ 24 ಎಕರೆ ಒಂಬತ್ತು ಗಂಟೆ ಜಮೀನನ್ನು ವಶಪಡಿಸಿಕೊಂಡು ಅಲ್ಲಿ ಕೆ ಎಚ್ ಬಿ ಮುಖಾಂತರ ನಿವೇಶನ ಅಭಿವೃದ್ಧಿಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವಾರು ಬಾರಿ ಕೋರಿದರೂ ನಿವೇಶನ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಇದನ್ನು ಪುರಸ್ಕರಿಸಿ ನಿವೇಶನ ನೀಡಲು ಆದೇಶಿಸಿತ್ತು. ಆದರೂ ಸಹ ನಿವೇಶನ ಕೊಟ್ಟಿರಲಿಲ್ಲ. ಸಾರ್ವಜನಿಕರು ರೈತರ ಆದೇಶದ ವಿರೋಧ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದರು. ಅದು ತೆರವಾಗುವವರೆಗೆ ನಿವೇಶನ ಪ್ರಕ್ರಿಯೆ ಸ್ಥಗಿತಗೊಂಡಿತು ಎಂದು ವಿವರಿಸಿದರು.

ತಡೆಯಾಜ್ಞೆ ಎರಡು ದಿನಗಳೊಳಗೆ ನಿವೇಶನ ಹಂಚುವುದಾಗಿ ಜಿಲ್ಲಾಧಿಕಾರಿ ಹೇಳಿದ್ದರು. ಆದ್ದರಿಂದ ಆದೇಶ ತೆರವುಗೊಳಿಸಲು ಉಚ್ಚ ನ್ಯಾಯಾಲಯದಲ್ಲಿ ಇಂಪ್ಲೀಡ್ ಅಪ್ಲಿಕೇಶನ್ ಸಲ್ಲಿಸಿದ್ದು ಮಧ್ಯಂತರ ಅರ್ಜಿಯಂತೆ ಪರಿಶೀಲಿಸಿ ನಿವೇಶನವನ್ನು ಮೂರು ತಿಂಗಳೊಳಗೆ ಹಂಚಲು ಹೈಕೋರ್ಟ್ ಆದೇಶಿಸಿದೆ.

ಆದರೂ ಇಲ್ಲಿಯವರೆಗೆ ನಿವೇಶನ ಹಂಚಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...