ಶಿವಮೊಗ್ಗ | ಅಪರ ಜಿಲ್ಲಾಧಿಕಾರಿ ಏಕಪಕ್ಷಿಯ ನಿರ್ಧಾರದಿಂದ ಅನ್ಯಾಯ;ಪ್ರೊಫ್. ರಾಚಪ್ಪರಿಂದ ಜಿಲ್ಲಾಧಿಕಾರಿಗೆ ಮನವಿ

Date:

ತಾ: 6/5/2025 ರಂದು ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಭಗವಾನ್ ಬುದ್ಧರ ಜಯಂತಿಗೆ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು ಎಂದು ಪ್ರೊಫ್. ರಾಚಪ್ಪ ತಿಳಿಸಿದ್ದು.ಅದರಂತೆ ಸಭೆಯಲ್ಲಿ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆದು ಕೆಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು ಎಂದರು. ಅದರಂತೆ ಕಾರ್ಯಕ್ರಮದಲ್ಲಿ

ಪ್ರೊ|| ರಾಚಪ್ಪ ಇವರನ್ನು ವಿಶೇಷ ಉಪನ್ಯಾಸಕರನ್ನಾಗಿ ಆಹ್ವಾನಿಸುವುದು. ಭಗವಾನ್ ಬುದ್ಧರ ಕುರಿತ ಕಿರುಪುಸ್ತಕವನ್ನು ಸಭಿಕರಿಗೆ ಹಂಚುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಮೂವರನ್ನು ಸನ್ಮಾನಿಸುವುದು ಇತ್ಯಾದಿಗಳ ಬಗ್ಗೆ ಚರ್ಚಿಸಿ ಅವುಗಳನ್ನು ಒಪ್ಪಿಕೊಳ್ಳಲಾಗಿತ್ತು ಎಂದು ರಾಚಪ್ಪ ತಿಳಿಸಿದರು.

ಆದರೆ ತಾ. 7/5/2025 ರಂದು ಸದರಿ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಚರ್ಚಿಸಲು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ಕಛೇರಿಗೆ ಹೋದಾಗ ಅಲ್ಲಿಯ ಸಿಬ್ಬಂದಿಗಳು ನೆನ್ನೆ ತೆಗೆದುಕೊಂಡಿರುವ ಮೂರು ವಿಚಾರಗಳು ಬದಲಾಗಿದೆ ಎಂದು ತಿಳಿಸಿದರಲ್ಲದೆ, ಹೆಚ್ಚಿನ ಮಾಹಿತಿಗಳಿಗೆ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001607567

ತಕ್ಷಣವೆ ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳನ್ನು ರಾಚಪ್ಪ ಅವರು ಭೇಟಿಯಾಗಿ ವಿಚಾರಿಸಿದಾಗ ಸಭೆಯಲ್ಲಿ ತೆಗೆದುಕೊಂಡ ಎಲ್ಲಾ ನಿರ್ಣಯಗಳನ್ನು ಬದಿಗಿಟ್ಟು ಏಕಪಕ್ಷೀಯವಾಗಿ ತಮ್ಮದೇ ತೀರ್ಮಾನಗಳನ್ನು ತೆಗೆದುಕೊಂಡಿರುವ ವಿಚಾರ ತಿಳಿದುಬಂತು ಎಂದು ತಿಳಿಸಿದರು.

ಈ ದಿಸೆಯಲ್ಲಿ ರಾಚಪ್ಪ ಅವರು ಸರ್ಕಾರದ ಗಮನಕ್ಕೆ ತರಬಯಸುವುದೇನೆಂದರೆ ಎಂದು ಪ್ರಶ್ನೆಗಳನ್ನು ಕೇಳಿದರು ಅದರಂತೆ

ಏಕಪಕ್ಷೀಯವಾಗಿ ತಮ್ಮ ಇಚ್ಛೆಗೆ ಬಂದಂತ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವು ಅಪರ ಜಿಲ್ಲಾಧಿಕಾರಿಗಳಿಗೆ ಇದೆಯೇ ಎಂದು ಕೇಳಿದರು?

ಅಪರ ಜಿಲ್ಲಾಧಿಕಾರಿಗಳು ಏಕಪಕ್ಷೀಯವಾಗಿ ತೀರ್ಮಾನವನ್ನು ತೆಗೆದುಕೊಳ್ಳುವುದೇ ಆದಲ್ಲಿ ಸಭೆ ಕರೆಯುವ ಅವಶ್ಯಕತೆ ಏನಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು?

ಸಭೆಯಲ್ಲಿ ಪ್ರಜಾಸತ್ತಾತ್ಮಕವಾಗಿ ತೆಗೆದುಕೊಂಡ ತೀರ್ಮಾನಗಳಿಗೆ ಬೆಲೆ ಇಲ್ಲವೇ?ಎಂಬ ಪ್ರಶ್ನೆಗಳು ಉದ್ಭವಿಸುತ್ತಿವೆ ಎಂದರು.

ಆದ್ದರಿಂದ ಸಂಬಂಧಪಟ್ಟವರಾದ ಜಿಲ್ಲಾಧಿಕಾರಿ ಅವರೇ ಈ ಬಗ್ಗೆ ಅಪರ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ-ನಿರ್ದೇಶಕರನ್ನು ವಿಚಾರಿಸಿ, ಸೂಕ್ತ ಮಾರ್ಗದರ್ಶನ ನೀಡುವುದರ ಮೂಲಕ ನಮ್ಮ ಅಹವಾಲುಗಳಿಗೆ ನ್ಯಾಯ ಒದಗಿಸಬೇಕೆಂದು ಈ ಮೂಲಕ ಕೋರುತ್ತೇವೆ ಎಂದು ಪ್ರೊಫ್. ರಾಚಪ್ಪರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮನವಿಗೆ ಸಾಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಈ ಕುರಿತು ಮಾಹಿತಿ ಪಡೆದು ತಿಳಿಸುತ್ತೇನೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...