ಶಿವಮೊಗ್ಗ | ಚಿನ್ನಾಭರಣ ಕಳ್ಳತನ ಆರೋಪಿ ಬಂಧನ

Date:

ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಕೇರಿ ನಿವಾಸಿ ಮಹಿಳೆಯೋರ್ವರ ಮನೆಯಲ್ಲಿ, ಯಾರು ಇಲ್ಲದ ವೇಳೆ 18/3/2025 ರಂದು ಮನೆ ಮುಂಬಾಗಿಲಿನ ಬೀಗ ಮುರಿದು ಮನೆಯಲ್ಲಿದ್ದ 45 ಗ್ರಾಂ ತೂಕದ ಚಿನ್ನಾಭರಣ ಹಾಗೂ 12 ಸಾವಿರ ನಗದು ಅಪಹರಿಸಲಾಗಿತ್ತು.

ಮನೆಯೊಂದರಲ್ಲಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದ ಆರೋಪದ ಮೇರೆಗೆ, ಓರ್ವನನ್ನು ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನ ನಿಡನೇಗಿಲು ಗ್ರಾಮದ ನಿವಾಸಿ ಕೃಷ್ಣಪ್ಪ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆರೋಪಿಯಿಂದ 44 ಗ್ರಾಂ 840 ಮಿಲಿ ತೂಕದ 4.36 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಪಲ್ಸರ್ ಬೈಕ್ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ. ಶಿಕಾರಿಪುರ ಡಿವೈಎಸ್ಪಿ ಕೇಶವ ಕೆ ಇ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಗಳಾದ ಪ್ರಶಾಂತ್ ಕುಮಾರ್ ಟಿ ಬಿ, ಶರತ್,ಸಿಬ್ಬಂದಿಗಳಾದ ಸಿಹೆಚ್’ಸಿ ಸಂತೋಷ್ ಕುಮಾರ್ ಆರ್, ಸಿಪಿಸಿಗಳಾದ ರಾಕೇಶ್ ಜಿ, ಸಲ್ಮಾನ್ ಖಾನ್ ಹಾಜಿ, ಹಜರತ್ ಅಲಿ, ಪ್ರಶಾಂತ್ ಕುಮಾರ್, ಜಗದೀಶ್, ಗಿರೀಶ್ ನಾಯ್ಕ್, ಜಿಲ್ಲಾ ಪೊಲೀಸ್ ಕಚೇರಿ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಇಂದ್ರೇಶ್, ಗುರುರಾಜ್, ವಿಜಯ್ ಕುಮಾರ್, ಎಪಿಸಿ ಆದರ್ಶ್ ಅವರ ಆರೋಪಿ ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...