ಶಿವಮೊಗ್ಗ | ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು : ಅನುಸಂಧಾನ, ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರ

Date:

ಶಿವಮೊಗ್ಗ, “ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು, : ಅನುಸಂಧಾನ” ಎಂಬ ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಹಾಗೂ ವಿಸ್ತರಣಾ ಕೇಂದ್ರ, ಬೆಂಗಳೂರು ಹಾಗೂ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯ ಸಹಾಯೋಗದಲ್ಲಿ 2025ರ ಸೆಪ್ಟಂಬರ್ 29 ಮತ್ತು 30 ರಂದು ಏರ್ಪಡಿಸಲಾಗಿದೆ.

ಈ ಕಾರ್ಯಾಗಾರವನ್ನು ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಡಾ. ಸಾಬೀರ ಅಹ್ಮದ್ ಮುಲ್ಲಾ ಅವರು ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿ ಪ್ರೊ. ಶರತ್ ಅನಂತಮೂರ್ತಿ ವಹಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಲಸಚಿವರಾದ ಶ್ರೀ ಎ.ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವರಾದ ಪ್ರೊ. ತಿಮ್ಮರಾಯಪ್ಪ, ಹಣಕಾಸು ಅಧಿಕಾರಿ ಪ್ರೊ. ಹೆಚ್.ಎನ್. ರಮೇಶ್, ದಸಂಸ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಅವರು ಭಾಗವಹಿಸುವರು.

1002306643

ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯ ಅಧ್ಯಕ್ಷರಾದ ಪ್ರೊ. ಸಬಿತಾ ಬನ್ನಾಡಿ, ಉಪಾಧ್ಯಕ್ಷರಾದ ಪ್ರೊ. ಕುಂಸಿ ಉಮೇಶ್, ಕಾರ್ಯದರ್ಶಿ ಪ್ರೊ. ಮುತ್ತಯ್ಯ ಭಾಗವಹಿಸುವರು. ಚಿಂತಕ ಡಾ. ಸಿ.ಜಿ. ಲಕ್ಷ್ಮೀಪತಿ ಅವರು ಎರಡು ದಿನಗಳ ಕಾರ್ಯಾಗಾರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಆರ್.ವಿ. ಚಂದ್ರಶೇಖರ್, ಡಾ. ಆಕೈ ಪದ್ಮಶಾಲಿ, ಹರ್ಷಕುಮಾರ್ ಕುಗ್ವೆ, ಡಾ. ಅನಸೂಯ ಕಾಂಬಳೆ, ಡಾ. ಪಿಚ್ಚಳ್ಳಿ ಶ್ರೀನಿವಾಸ್, ಡಾ. ರಾಜಪ್ಪ ದಳವಾಯಿ, ಡಾ. ಬಾಲಗುರುಮೂರ್ತಿ ಭಾಗವಹಿಸುವರು.

ದಿನಾಂಕ : 30.09.2025ರ ಮಧ್ಯಾಹ್ನ 2 ಘಂಟೆಯಿಂದ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಮತ್ತು ಸಂಸ್ಕೃತಿ ಚಿಂತಕರಾದ ಕೋಟಿಗಾನಹಳ್ಳಿ ರಾಮಯ್ಯ ಅವರು ಸಮಾರೋಪ ನುಡಿಗಳನ್ನು ಆಡಲಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸುವರೆಂದು ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...