ಶಿವಮೊಗ್ಗ | ಬಹುತ್ವವನ್ನು ಗೌರವಿಸಿದಾಗ ಕನ್ನಡ ಸಂಸ್ಕೃತಿ ಉಳಿಯುವುದು : ಪ್ರೊ.ಹಿ.ಚಿ.ಬೋರಲಿಂಗಯ್ಯ

Date:

ಶಿವಮೊಗ್ಗ, ಬಹುತ್ವವನ್ನು ಗೌರವಿಸಿದಾಗ ಕನ್ನಡ ಸಂಸ್ಕೃತಿ ಉಳಿಯುವುದು ಎಂದು ಹೇಳುತ್ತಾ ಎಪ್ಪತ್ತರ ದಶಕದಲ್ಲಿದ್ದ ವಾಗ್ವಾದಗಳು ಇಂದು ಕುಂಠಿತಗೊಳ್ಳುತ್ತಿವೆ. ಇಂಥ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಮತ್ತು ಸಾಹಿತ್ಯದ ಪುನರ್ ಮನನ ಅತಿಅಗತ್ಯವಾಗಿದೆ ಎಂದರು. ಬಹುತ್ವವನ್ನು ಗೌರವಿಸಿದಾಗ ಮಾತ್ರ ಕನ್ನಡ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯವೆಂದು ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಹಿ.ಚಿ.ಬೋರಲಿಂಗಯ್ಯ ಅವರು ಅಭಿಪ್ರಾಯಪಟ್ಟರು.

ಅವರು ಕುವೆಂಪು ವಿಶ್ವವಿದ್ಯಾಲಯದ ನುಡಿಲೋಕ ಸಭಾಂಗಣದಲ್ಲಿ ಕನ್ನಡಭಾರತಿ ಸಂಶೋಧನಾರ್ಥಿಗಳ ವೇದಿಕೆಯು ಏರ್ಪಡಿಸಿದ್ದ ರಾಷ್ಟ್ರೀಯ ಸಂಶೋಧನಾ ವಿಚಾರಸಮ್ಮೇಳನವನ್ನು ಉದ್ಘಾಟಿಸಿ ಮಾತಾಡಿ ಕನ್ನಡಭಾಷೆಯನ್ನು ಅನ್ನದ ಭಾಷೆಯಾಗಿ, ಜ್ಞಾನದಭಾಷೆಯಾಗಿಸಿಕೊಳ್ಳಬೇಕು.

ಇವತ್ತು ಪ್ರತಿಯೊಬ್ಬರೂ ಹಣದ ಹಿಂದೆ ಬಿದ್ದಿದ್ದಾರೆ. ತೃಪ್ತಿಯಿಲ್ಲ ದಾಹದಲ್ಲಿದ್ದಾರೆ. ಅವುಗಳ ನಿವಾರಣೆಯ ಸಾಧನಾ ಸಾಹಿತ್ಯ ಸಂಸ್ಕೃತಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಅವರು ಕನ್ನಡ ಸಂಸ್ಕೃತಿ ಇಂದು ಚಲ್ಲಪಿಲ್ಲಿಯಾಗಿದೆ. ವಿಚಿತ್ರವಾದ ಆಧುನಿಕೋತ್ತರ ‌ಸಮಾಜದಲ್ಲಿದ್ದೆವೆ.ಬ್ರಾಂಡ್ ಮಾಡಿ ವಿಮರ್ಶೆ ಮಾಡಬಾರದು. ಇವತ್ತು ಸಾಹಿತ್ಯ ಲೋಕದಲ್ಲಿ ಗುಂಪುಗಾರಿಕೆ ಹೆಚ್ಚಾಗುತ್ತದೆ. ಈ ಹಿಂದೆ ಇದ್ದ ಆರೋಗ್ಯಕರ ವಾತಾವರಣವಿಲ್ಲ ಎಂದರು. ಮೆಲುದನಿಯಲ್ಲೂ ಸತ್ಯ ಅಡಗಿರುತ್ತದೆ ಎಂದು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಕನ್ನಡಭಾರತಿ ನಿರ್ದೇಶಕ ಪ್ರೊ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ಅವರು ಈವೊತ್ತಿನ ವಿಜ್ಞಾನಯುಗದಲ್ಲಿ ಆನಂದದ ಅನುಭವ ಕಷ್ಟಸಾಧ್ಯವಾಗತ್ತದೆ. ಸರಿದಾರಿ ತೋರಿಸುವ ಸಾಧನ ಸಂಸ್ಕೃತಿ ಮತ್ತು ಸಾಹಿತ್ಯವೆಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಎಸ್.ಎಂ.ಗೋಪಿನಾಥ್ ಅವರು ಮಾತಾಡಿ ವ್ಯಕ್ತಿ ಮತ್ತು ಸಮಾಜದ ಸುಧಾರಣೆ ಸಾಧನಗಳು ಕನ್ನಡ ಮತ್ತು ಸಂಸ್ಕೃತಿ. ಬದುಕನ್ನು ಅರ್ಥಪೂರ್ಣ ವಾಗಿಸುವ ಸಾಹಿತ್ಯ ದ ಅಧ್ಯಯನ ಇಂದು ಅಗತ್ಯವಾಗಿದೆ ಎಂದರು. ಹಿರಿಯ ಪ್ರಾಧ್ಯಾಪಕ ಪ್ರಶಾಂತನಾಯಕ ಮಾತಾಡಿದರು.

ಡಾ..ರವಿನಾಯ್ಕ ಸ್ವಾಗತಿಸಿದರು. ಡಾ.ನವೀನ ವಂದಿಸಿದರು. ಮಂಜುನಾಥ್ ನಿರೂಪಿಸಿದರು.ಮಧ್ಯಾಹ್ನ ಜರುಗಿದ ಪ್ರಾಚೀನ ಕನ್ನಡ ಸಾಹಿತ್ಯ ಗೋಷ್ಠಿ ಅಧ್ಯಕ್ಷತೆಯನ್ನು ಕುಪ್ಪಂ, ದ್ರಾವಿಡ ವಿಶ್ವವಿದ್ಯಾಲಯದ ಪ್ರೊ.ದುರ್ಗಾಪ್ರವೀಣ್, ಮಧ್ಯಕಾಲೀನ ಕನ್ನಡ ಸಾಹಿತ್ಯ ಗೋಷ್ಠಿಯನ್ನು ಮದ್ರಾಸ್ ವಿಶ್ವವಿದ್ಯಾಲಯದ ಪ್ರೊ.ರಂಗಸ್ವಾಮಿ, ಆಧುನಿಕ ಕನ್ನಡ ಸಾಹಿತ್ಯ ಗೋಷ್ಠಿ ಅಧ್ಯಕ್ಷತೆಯನ್ನು ಪ್ರೊ.ಕುಮಾರಸ್ವಾಮಿ ಬೆಜ್ಜಹಳ್ಳಿ, ಸಾಹಿತ್ಯ ಮತ್ತು ಅನ್ಯಶಿಸ್ತು ಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ.ಮೋಹನ್ ಚಂದ್ರಗುತ್ತಿ ವಹಿಸಿದ್ದರು. ಜನಪದಸಾಹಿತ್ಯ ಗೋಷ್ಠಿಯ ಅಧ್ಯಕ್ಷತೆಯನ್ನು ಪ್ರೊ.ಎಸ್.ಎಂ.ಮುತ್ತಯ್ಯ ವಹಿಸಿದ್ದರು.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ, ಸಂಶೋಧಕರು ಪ್ರಬಂಧಗಳನ್ನು ಮಂಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...