ಶಿವಮೊಗ್ಗ | ಶಾಲೆಗಳಲ್ಲಿ ಕರಾಟೆ ಕಡ್ಡಾಯವಾಗಲಿ : ನಟ ಸುಮನ್ ತಲ್ವಾರ್

Date:

ಶಿವಮೊಗ್ಗ, ಸ್ವರಕ್ಷಣಾ ಕೌಶಲ್ಯ ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಮುಖ್ಯವಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರೌಢಶಾಲೆ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ಕಡ್ಡಾಯವಾಗಬೇಕು ಎಂದು ಬಹುಭಾಷಾ ನಟ, ಡಾನ್ ಬ್ಲ್ಯಾಕ್ ಬೆಲ್ಟ್ ಸುಮನ್ ತಲ್ವಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾಟೆ ತರಬೇತಿ ಪಡೆಯುವ ಮೂಲಕ ಮನುಷ್ಯ ತನ್ನನ್ನು ತಾನು ಪ್ರತಿಕೂಲ ಸಂದರ್ಭದಲ್ಲಿ ರಕ್ಷಿಸಿಕೊಳ್ಳಬಹುದಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರಿಗೆ ಆತ್ಮರಕ್ಷಣಾ ಕಲೆಯ ಅಗತ್ಯವಿದೆ ಎಂದರು.

ಶಾಲಾ ಹಂತದಲ್ಲೇ ಬಾಲಕಿಯರಿಗೆ ಇದನ್ನು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯ ಮಾಡಬೇಕು ಕಲಿಸಬೇಕು. ದೇಹಕ್ಕೆ ಉತ್ತಮ ವ್ಯಾಯಾಮ ಲಭ್ಯವಾಗುತ್ತದೆ. ಮತ್ತು ದುಶ್ಚಟಗಳು ದೂರವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಎಲ್ಲಾ ಕಡೆ ಮಾದಕ ವ್ಯಸನ ಹೆಚ್ಚಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ಆತನ ದೈಹಿಕ ಆರೋಗ್ಯ ಮತ್ತು ಮುಖಚರ್ಯೆ ಬದಲಾಗುವುದು ಮಾತ್ರವಲ್ಲ, ಕುಟುಂಬದ ನೆಮ್ಮದಿ ಮತ್ತು ಪ್ರತಿಷ್ಠೆ ಹಾಳಾಗುತ್ತದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು, ಸರ್ಕಾರ ಈ ನಿಟ್ಟಿನಲ್ಲಿ ಕಠಿಣ ಕಾನೂನು ಕ್ರಮ ಜಾರಿಗೆ ತರಬೇಕು ಎಂದರು.

ಅಮೆರಿಕಾದ ಕರಾಟೆ ಗ್ರಾಂಡ್ ಮಾಸ್ಟರ್ ಫೆರಿಎಫ್. ಮೌಲೆ ಮಾತನಾಡಿ, ಭಾರತ ಆರೋಗ್ಯದಲ್ಲಿಯೂ ಸದೃಢವಾಗಿದೆ. ಆರ್ಥಿಕವಾಗಿಯೂ ಸದೃಡವಾಗಿದೆ. ರಾಷ್ಟ್ರಗಳ ಮೇಲೂ ಇದು ಪ್ರಭಾವ ಬೀರುತ್ತಿದೆ. ಎಲ್ಲಾ ರಂಗಗಳಲ್ಲೂ ಭಾರತ ಮುಂದುವರೆದಿದ್ದು, ಕರಾಟೆಯು ಭಾರತವನ್ನು ಆರೋಗ್ಯ ವಂತರನ್ನಾಗಿಸಿದೆ ಎಂದರು.

ಬಾಕ್ಸ್ನಾಳೆ ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಆರನೇ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯಲಿದ್ದು, ಶ್ರೀಲಂಕಾ, ನೇಪಾಳ, ಮಹಾರಾಷ್ಟ್ರ, ಗೋವಾ, ಆಂಧ್ರ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಮತ್ತು ದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಶಿವಮೊಗ್ಗ ಕರಾಟೆ ಅಸೋಷಿಯೇಷನ್ನಿನ ಅಧ್ಯಕ್ಷ ವಿನೋದ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಜಯ್ ಲಾವ, ಅಲ್ತಾಫ್ ಪಾಶಾ, ರಾಘವೇಂದ್ರ ಆರ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...