ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ಕರ್ಮಕಾಂಡದ ವಿರುದ್ಧ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

Date:

ಶಿವಮೊಗ್ಗ ನಗರದ ಜೆ ಎಚ್ ಪಟೇಲ್ ಬಡಾವಣೆಯಲ್ಲಿನ ಹಾಲಿ ಚಾಲನೆಯಲ್ಲಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ನಾರ್ಧನ್ ಔಟ್ ಪಾಲ್ ಗೆ ಲಿಂಕ್ ಮಾಡುವ ಕಾಮಗಾರಿಯನ್ನು ತರಾತುರಿಯಲ್ಲಿ ಪ್ರಾರಂಭ ಮಾಡಿದ್ದು ಅಂದಾಜು ವೆಚ್ಚ 83.70, ಲಕ್ಷದ ಕಾಮಗಾರಿಗೆ ನಿಯಮದ ಪ್ರಕಾರ ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ಅನುಮತಿಯನ್ನು ತೆಗೆದುಕೊಂಡು ಕಾಮಗಾರಿಯನ್ನು ಪ್ರಾರಂಭಿಸಬೇಕಿತ್ತು,

ಆದರೆ ತರಾತುರಿಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ತುಂಗಾ ಮೇಲ್ದಂಡೆ ಯೋಜನಾ ವಿಭಾಗದಿಂದ ಮೇಲ್ಕಂಡ ಕಾಮಗಾರಿಗೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ ಪಡೆಯದೆ ಕಾಮಗಾರಿ ಮಾಡಿರುವುದು ಕರ್ತವ್ಯ ಲೋಪವಾಗಿದೆ ಹಾಗೆಯೇ ತುಂಗಾ ಮೇಲ್ದಂಡೆ ಯೋಜನೆ ವಿಭಾಗದಿಂದ ಅನುಮತಿ ಪತ್ರ ಸಿಗುವ ಮುನ್ನವೇ ತಮ್ಮ ಇಲಾಖೆಯ ಅಧಿಕಾರಿಗಳು ಈ ಕಾಮಗಾರಿಗೆ ಸಂಬಂಧಿಸಿದಂತೆ ಕಾರ್ಯ ಆದೇಶ ನೀಡಿದ್ದಾರೆ.

ಇದು ಕೂಡ ಕರ್ತವ್ಯ ಲೋಪವಾಗಿದೆ, ಉದ್ದೇಶ ಒಳ್ಳೆಯದಾಗಿದ್ದರು ಕೂಡ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುವಾಗ ನಿಯಮಗಳನ್ನು ಪಾಲಿಸದೆ ಕಾಮಗಾರಿಯನ್ನು ಪ್ರಾರಂಭ ಮಾಡುವುದು ಕೂಡ ಕರ್ತವ್ಯ ಲೋಪವಾಗುತ್ತದೆ, ಹಾಗೆಯೇ ತರಾತುರಿಯಲ್ಲಿ ಕಾಮಗಾರಿ ಪ್ರಾರಂಭ ಮಾಡುವುದು ಹಲವು ಅನುಮಾನಗಳನ್ನು ಹುಟ್ಟಿಸುತ್ತದೆ ಆದ್ದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವುಗಳು ಸಂಬಂಧಿಸಿದ ಅನಧಿಕೃತ ಕಾಮಗಾರಿಗಳನ್ನು ತೆಗೆಸಬೇಕು ಅನುಮತಿ ಸಿಗುವವರೆಗೂ ಕೆಲಸ ಮಾಡದಂತೆ ನೋಡಿಕೊಳ್ಳಬೇಕು ತರಾತುರಿಯಲ್ಲಿ ಕಾರ್ಯ ಪ್ರಾರಂಭಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಮಹಾನಗರ ಪಾಲಿಕೆ ಇಂಜಿನಿಯರ್ ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಗೂ ಮಹಾನಗರ ಪಾಲಿಕೆಯ ಕಾರ್ಯ ಪಾಲಕ ಅಭಿಯಂತರದ ವಿರುದ್ಧ ದೂರು ದಾಖಲಿಸಿ ಕೊಂಡು ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆಗ್ರಹಿಸುತ್ತದೆ ಎಂದು ಕರವೇ ಸ್ವಾಭಿಮಾನಿ ಬಣ ಅಗ್ರಹಿಸಿ ಆಯುಕ್ತರಿಗೆ ಮನವಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ರೀತಿಯ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟದ ಮುಖಾಂತರ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್ ತಿಳಿಸಿದ್ದಾರೆ.

1002305976

ಈ ಕರ್ತವ್ಯ ಲೋಪ ವಿರುದ್ಧವು ಸಹ ಕಾರ್ಯಪಾಲಕ ಅಭಿಯಂತರು ತುಂಗಾ ಮೇಲ್ದಂಡೆ ಯೋಜನೆಯ ವಿಭಾಗಕ್ಕೂ ಸಹ ತಮ್ಮ ವ್ಯಾಪ್ತಿಗೆ ಒಳಪಡುವ ಜಾಗದಲ್ಲಿ ನಿರಕ್ಷೇಪಣಾ ಪತ್ರವನ್ನು ಪಡೆಯದೆ ಕಾರ್ಯನಿರ್ವಹಿಸಿದವರ ವಿರುದ್ಧ ಮಹಾನಗರ ಪಾಲಿಕೆಯ ಗುತ್ತಿಗೆದಾರ ಇಂಜಿನಿಯರ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹಾಗೂ ಮಹಾನಗರ ಪಾಲಿಕೆಯ ಕಾರ್ಯ ಪಾಲಕ ಅಭಿಯಂತರದ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದರು.

ಅವರಲ್ಲೂ ಸಹ ಒಂದು ಮನವಿಯನ್ನು ಸಲ್ಲಿಸಿದ್ದಾರೆ, ಇಲ್ಲದಿದ್ದಲ್ಲಿ ಮುಂದಿನ ದಿನ ತುಂಗಾ ಮೇಲ್ದಂಡೆ ಯೋಜನೆಯ ಕಚೇರಿಗೆ ಮುತ್ತಿಗೆಯನ್ನು ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ನಗರಾಧ್ಯಕ್ಷರಾದ ಜೀವನ್, ಮುಹಮ್ಮದ್ ರಫಿ, ಯುವ ಘಟಕ ಅಧ್ಯಕ್ಷರಾದ ಸಂತೋಷ್, ಪ್ರಚಾರ ಸಮಿತಿಯ ಅಧ್ಯಕ್ಷರಾದ ಎನ್, ಮಾಲತೇಶ್, ಪ್ರವೀಣ್ ಕುಮಾರ್, ಗ್ರಾಮಾಂತರ ಅಧ್ಯಕ್ಷರಾದ ಮಂಜುನಾಥ್ ಹೆಚ್ ಎನ್, ನಾಗರಾಜ್ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...