ಓರ್ವ ಯುವಕನನ್ನು ಆತನ ಮಾವ ಮತ್ತು ಸಂಬಂಧಿಕರೇ ಸೇರಿ ರಾಡ್ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪದ ಶ್ರೀನಿಧಿ ವೈನ್ ಶಾಪ್ ಎದುರು ನಡೆದಿದೆ.
ಹತ್ಯೆಯಾದ ಯುವಕ ಅರುಣ್ ಎಂಬಾತ, ಯಶಸ್ವಿನಿ ಎಂಬುವವರು ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೂ ಒಂದು ಮಗು ಕೂಡ ಇದೆ. ಕೂಲಿ ಕೆಲಸ ಮಾಡುತ್ತಿದ್ದ ಅರುಣ್ ಆರಂಭದಲ್ಲಿ ಚೆನ್ನಾಗಿದ್ದರೂ, ದಿನಕಳೆದಂತೆ ಗಾಂಜಾ ಮತ್ತು ಮದ್ಯಪಾನವನ್ನ ಹೆಚ್ಚಾಗಿ ಮಾಡುತ್ತಿದ್ದ ಎನ್ನಲಾಗಿದೆ. ಈ ಚಟದ ಬೆನ್ನಲ್ಲೇ ಪತ್ನಿ ಯಶಸ್ವಿನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದ. ಪತಿಯ ದೌರ್ಜನ್ಯ ತಾಳಲಾರದೆ ಯಶಸ್ವಿನಿ ಕಳೆದ ಮೂರು ತಿಂಗಳಿನಿಂದ ಮಗುವಿನೊಂದಿಗೆ ತವರು ಮನೆಯಲ್ಲಿ ಆಶ್ರಯ ಪಡೆದಿದ್ದರು.
ಹತ್ಯೆಯಾದ ಯುವಕ ಪತ್ನಿಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ನಿಮ್ಮ ಇಡೀ ಕುಟುಂಬವನ್ನೇ ಟಾರ್ಗೆಟ್ ಮಾಡಿ ಮುಗಿಸುತ್ತೇನೆ ಎಂಬ ಅರುಣ್ ಬೆದರಿಕೆ ಹಾಕುತ್ತಿದ್ದ ಇದರಿಂದ ಪತ್ನಿ ಯಶಸ್ವಿನಿ ಮನೆಯವರು ಭಯಭೀಯತರಾಗಿದ್ದರು. ಬುಧವಾರ ರಾತ್ರಿ ಅರುಣ್ ವೈನ್ ಶಾಪ್ ಮುಂದೆ ನಿಂತಿದ್ದಾಗ, ಬೈಕ್ನಲ್ಲಿ ಬಂದ ಮಾವ ತಿಪ್ಪೇಶ್ ಮತ್ತು ಹೆಂಡತಿಯ ಸೋದರ ಮಾವ ಲೋಕೇಶ್ (ಕೆಲವು ಮೂಲಗಳ ಪ್ರಕಾರ ಪತ್ನಿಯ ತಮ್ಮ ಮಂಜುನಾಥ್) ಏಕಾಏಕಿ ದಾಳಿ ನಡೆಸಿದ್ದಾರೆ. ಕೈಯಲ್ಲಿದ್ದ ಕಬ್ಬಿಣದ ರಾಡ್ನಿಂದ ಅರುಣ್ನ ತಲೆಗೆ ಬಲವಾಗಿ ಹೊಡೆದಿದ್ದಾರೆ. ಹೊಡೆತದ ತೀವ್ರತೆಗೆ ಅರುಣ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | KPS ಮ್ಯಾಗ್ನೆಟ್ ಯೋಜನೆ ಕೈಬಿಡದಿದ್ದರೆ ರಾಜ್ಯವ್ಯಾಪಿ ಹೋರಾಟ; AIDSO ಎಚ್ಚರಿಕೆ
ಈ ಕುರಿತು ವಿನೋಬ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸ, ಪ್ರಕರಣ ದಾಖಲೀಸಲಾಗಿದೆ.





