ಶಿವಮೊಗ್ಗ | ಸ್ಥಳೀಯ ಪಂಚಾಯಿತಿಗಳ ಚುನಾವಣೆ ನಡೆಸದ ಸಿಎಂ, ಸಚಿವರುಗಳ ; ವಿರುದ್ಧ ಕಾನೂನು ಕ್ರಮ ಜರುಗಿಸಿ

Date:

ಶಿವಮೊಗ್ಗ, ರಾಜ್ಯದ ಹೈಕೋರ್ಟ್ ಮತ್ತು ದೇಶದ ಸುಪ್ರಿಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳನ್ನು 2 ವರ್ಷಗಳಿಂದ ನಡೆಸದೇ ಇರುವುದರಿಂದ ರಾಜ್ಯ ಚುನಾವಣಾ ಆಯೋಗವು ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರ ಮೇಲೆ ಶಿಸ್ತುbಕ್ರಮ ಕೈಗೊಳ್ಳಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಟ್ರಸ್ಟ್ ಮುಖ್ಯಸ್ಥ ಕಲ್ಲೂರು ಮೇಘರಾಜ, ರಾಜ್ಯದ 187 ಸ್ಥಳೀಯ ಸಂಸ್ಥೆಗಳ ಅವಧಿಯು ಬರುವ ನವೆಂಬರ್ ಗೆ ಮುಗಿಯಲಿದೆ. ರಾಜ್ಯದಲ್ಲಿ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾಪಂಚಾಯತ್ ಚುನಾವಣೆಗಳು ಕಳೆದ 4 ವರ್ಷಗಳಿಂದ ನಡೆದಿಲ್ಲ.

ಬಸವರಾಜ್ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷಗಳ ಕಾಲ ಚುನಾವಣೆ ನಡೆಸದೆ ಕಾಲಹರಣ ಮಾಡಿದೆ. ಈಗ ಸಿದ್ದರಾಮಯ್ಯನವರ ಸರ್ಕಾರವೂ ಸಹ ಮೀಸಲಾತಿ ಹಾಗೂ ಕ್ಷೇತ್ರ ವಿಂಗಡಣೆಯ ಕುಂಟು ನೆಪವೊಡ್ಡಿ, ಪಂಚಾಯತ್ ರಾಜ್ ಕಾಯ್ದೆಯ ಮೂಲ ಆಶಯಕ್ಕೆ ಧಕ್ಕೆ ಬರುವ ರೀತಿ ಕಾಲದಿಂದ ಕಾಲಕ್ಕೆ ಕೋರ್ಟ್‌ ಆದೇಶಗಳಿದ್ದರೂ ಸಹ ಚುನಾವಣೆಗಳನ್ನು ಮುಂದೂಡುತ್ತಾ ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಚುನಾವಣೆಯ ವಿಳಂಬಕ್ಕೆ ಹೊಣೆಗಾರರಾದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ. ವಾಸ್ತವವಾಗಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಶಾಸಕಾಂಗವೇ ಅಂದರೆ ರಾಜ್ಯ ಸರ್ಕಾರವೇ ಕಾರ್ಯಾಂಗದ ಮೇಲೆ ಅಂದರೆ ಅಧಿಕಾರಿಗಳ ಮೇಲೆ ಅಂದರೆ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ರಾಜ್ಯ ಸರ್ಕಾರವು ಮುಖ್ಯ ಕಾರ್ಯದರ್ಶಿಗಳನ್ನೊಳಗೊಂಡು ಎಲ್ಲಾ ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ಆಡಳಿತ ನಡೆಸುತ್ತಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಕೊಂಡಜ್ಜಿ ವಿಜಯಕುಮಾರ್, ಹೊಳೆಮಡಿಲು ವೆಂಕಟೇಶ, ಶಂಕರ ನಾಯ್ಕ್, ಸಂಗಯ್ಯ, ಜನಮೇಜಿರಾವ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...