ಶಾಸನ ಸಭೆಗಳಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲದೆ ಸಮಾನತೆ ಸಾಧ್ಯವಿಲ್ಲ: ನಿವೃತ್ತ ನ್ಯಾ. ನಾಗಮೋಹನ್‌ ದಾಸ್

Date:

ಶಿವಮೊಗ್ಗದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಂತಹ ಶಾಸನ ಸಭೆಗಳಲ್ಲಿ ಮಹಿಳೆಗೆ ಸಮಾನ ಅವಕಾಶ ಸಿಗುವ ತನಕ ಮಹಿಳಾ ಸಮಾನತೆ ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಅವರು ಸಂವಿಧಾನ ಓದು ಕರ್ನಾಟಕ ಮತ್ತು ಶಿವಮೊಗ್ಗದ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಗರ ಹೊರವಲಯದ ಸನ್ನಿಧಿ ಸಭಾಂಗಣದಲ್ಲಿ ಎರಡು ದಿನಗಳ ಆಯೋಜಿಸಿದ್ದ ಸಂವಿಧಾನ ಓದು ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದ ಕೊನೆ ದಿನವಾದ ಭಾನುವಾರ ಸಮಾರೋಪಕ್ಕೂ ಮುನ್ನ ಅವರು ಸಂವಿಧಾನ ಮತ್ತು ಮಹಿಳೆ ವಿಷಯ ಕುರಿತು ಮಾತನಾಡಿದರು.

1001793724

ಜಗತ್ತಿನ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಹಾಗೆಯೇ ಆರ್ಥಿಕ ಶ್ರಮ ಶಕ್ತಿಯಲ್ಲೂ ಅವರದೇ ಹೆಚ್ಚು ಪಾಲು ಇದೆ. ಆದರೂ ಅವರನ್ನ ಇಂದಿಗೂ ಎರಡನೇ ದರ್ಜೆಯ ವ್ಯಕ್ತಿಯನ್ನಾಗಿ ಪರಿಗಣಿಸಿದ್ದರ ಹಿಂದೆ ಮಹಿಳೆಯರು ರಾಜಕೀಯ, ಅರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರದಿಂದ ದೂರು ಇರುವುದೇ ಕಾರಣವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಲೋಕಸಭೆ ಸೇರಿದಂತೆ ಶಾಸನ ಸಭೆಗಳಲ್ಲಿ ಈಗಲೂ ಮಹಿಳೆಯರಿಗೆ ಸಮಾನ ಅವಕಾಶ ಸಿಕ್ಕಿಲ್ಲ. ಶೇ 33 ಮಹಿಳಾ ಮೀಸಲಾತಿ ಮಸೂದೆ ಅನುಷ್ಠಾನಕ್ಕೆ ಬರುತ್ತಿಲ್ಲ. ಆಳುವವರ ಪುರುಷಾಧಿಪತ್ಯದ ಮನಸ್ಥಿತಿ ಈಗಲೂ ಬದಲಾಗಿಲ್ಲ ಎಂದು ವಿಷಾಧಿಸಿದ ಅವರು,ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕಿದೆ ಎಂದು ಪ್ರತಿಪಾದಿಸಿದರು.

1001793723

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಈ ದೇಶದ ಮಹಿಳೆಯರ ಪಾತ್ರವೂ ದೊಡ್ಡದಿದೆ ಎಂದು ಅವರು ತಮ್ಮೂರಿನ ಪಾಲ್ಗೊಳ್ಳಬೇಕೆನ್ನುವುದನ್ನು ವೆಂಕಟಮ್ಮನ ಉದಾಹರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆ ಅಂದಾಕ್ಷಣ ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ ಅಂತಲೇ ಉದಾಹರಿಸಲಾಗುತ್ತದೆ ಎಂದರು. ಯಾಕೆಂದರೆ ಅವರು ಅಮರರಾದವರು.

ಹಾಗೆಯೇ ಈ ದೇಶದ ದೊಡ್ಡ ಮಹಿಳಾ ಶಕ್ತಿ ಶಕ್ತಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದೆ.ಹಾಗೆಯೇ ಅನೇಕ ಮಹಿಳಾ ಪರವಾದ ಕಾನೂನುಗಳ ಜಾರಿಗೆ ಬರುವುದಕ್ಕೂಕಾರಣವಾಗಿದ್ದಾರೆ ಎಂದರು. ಕೋಮುವಾದ, ಮೂಲಭೂತವಾದ ಇವತ್ತು ಸಮಾಜದ ಅಭಿವೃದ್ದಿ ಮತ್ತು ಐಕ್ಯತೆಗೆ ದೊಡ್ಡ ತೊಡಕಾಗಿದೆ ಎಂದು ತಿಳಿಸಿದರು. ಅವು ನಾಶವಾಗದ ಹೊರತು ಮಹಿಳಾವಿಮೋಚನೆ ಸಾಧ್ಯವಿಲ್ಲ ಎಂದರು. ವಿಶೇಷವಾಗಿ ಕಾನೂನು ಅರಿವು ಎಲ್ಲರಿಗೂ ಬೇಕಿದೆ ಎಂದರು.

ಮೊದಲು ದೇಶದಲ್ಲಿ ಬಹಳ ಕಡಿಮೆ ಸಂಖ್ಯೆ ಜನರು ಶಿಕ್ಷಿತರಿದ್ದರು. ಈಗ ಈ ಪ್ರಮಾಣ ಶೇ. 90 ಕ್ಕೆ ಏರಿದೆ. ಆದರೆ ಕಾನೂನು ಅರಿವು ಹೆಚ್ಚಾಗಿಲ್ಲ. ಸಂವಿಧಾನದ ಮಹತ್ವ ಗೊತ್ತಾಗಬೇಕಾದರೆ ಕಾನೂನು ಅರಿವು ಬರಬೇಕು. ಆ ಕೆಲಸ ತುರ್ತಾಗಿ ಆಗಬೇಕು ಎಂದರು.

1001793722

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್. ಆ‌ರ್.ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಮೂರ್ತಿ, ವಕೀಲರು ಹಾಗೂಸಮಾಜ ಸೇವಕ ಅನಂತ್ ನಾಯ್ಕ, ಜನಶಕ್ತಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಲ್ .ಅಶೋಕ್, ಜನಪರ ಹೋರಾಟಗಾರ ಅನಂತ ರಾಮು, ರಾಜು ಗೋರೂರು ಮಾತನಾಡಿದರು. ಪಾಧರ್ ಪಿಂಟೋ, ಫಾದರ್ ಡಿಸೋಜ ಉಪಸ್ಥಿತರಿದ್ದರು. ಶಿಬಿರದ ಪ್ರಧಾನ ಆಯೋಜಕರು ಹಾಗೂ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾದ ಕೆ.ಪಿ. ಶ್ರೀಪಾಲ್ ವಂದಿಸಿದರು. ಕೊನೆಯಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...