ಶಿವಮೊಗ್ಗ | ಶ್ರೀ ಕೃಷ್ಣರು ತೋರಿದ ಸನ್ಮಾರ್ಗದಲ್ಲಿ ನಡೆದು ಬದುಕು ಸಾಗಿಸೋಣ : ಬಲ್ಕಿಸ್ ಬಾನು

Date:

ಶಿವಮೊಗ್ಗ, ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಆಶಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಕುವೆಂಪು ರಂಗಮAದಿರದಲ್ಲಿ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಷ್ಣುವಿನ ಎರಡನೇ ಅವತಾರವೇ ಶ್ರೀಕೃಷ್ಣ, ಪ್ರೀತಿ ವಿಶ್ವಾಸದಿಂದ ಎಲ್ಲರೊಂದಿಗೆ ಬೆರೆಯುವ ಗುಣ, ವ್ಯಕ್ತಿತ್ವ ಶ್ರೀ ಕೃಷ್ಣರದ್ದು. ಈ ಗುಣ ಗೊಲ್ಲರ ಸಮುದಾಯದಲ್ಲಿ ಬೆರೆತಿದೆ. ಇವರು ಸಂಘ ಜೀವಿಗಳು. ಈ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿ ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಈ ಸಮುದಾಯ ಹಸು, ಎಮ್ಮೆ ಸಾಕಾಣಿಕೆ-ಹೈನುಗಾರಿಕೆ ಮೂಲಕ ಸ್ವಾಭಿಮಾನದ ಬದುಕು ನಡೆಸುತ್ತಿದ್ದು ಸಮಾಜಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ನಿಮ್ಮ ಬೇಡಿಕೆಗಳಿಗೆ ಸರ್ಕಾರ ಖಂಡಿತ ಸ್ಪಂದಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರ ಹಾಗೂ ಸಮಾಜದ ಮಧ್ಯೆ ಕೊಂಡಿಯಾಗಿ ನಾನು ಕೆಲಸ ಮಾಡುತ್ತೇನೆ ಎಂದ ಅವರು ನಾವೆಲ್ಲರೂ ಶ್ರೀ ಕೃಷ್ಣರು ತೋರಿದ ಸನ್ಮಾರ್ಗದಲ್ಲಿ ನಡೆದು ನೆಮ್ಮದಿಯಿಂದ ಬದುಕು ಸಾಗಿಸೋಣವೆಂದು ಕರೆ ನೀಡಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ಮಾತನಾಡಿ, ಶ್ರೀ ಕೃಷ್ಣ ಭಗವಂತನ ವಂಶಸ್ಥರಾದ ನೀವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಬಲಿಷ್ಠರಾಗಿ ಬೆಳೆಯಬೇಕು. ಪ್ರೀತಿ ವಿಶ್ವಾಸಕ್ಕೆ ಮತ್ತೊಂದು ಹೆಸರೇ ಗೊಲ್ಲರ ಸಮಾಜ. ಜನರ ಆರ್ಥಿಕ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯಾದಂತೆ. ಆದ್ದರಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ.ಜಿ.ಕೆ ಪ್ರೇಮ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ನಾವೆಲ್ಲರೂ ಶ್ರೀ ಕೃಷ್ಣನನ್ನು ಓರ್ವ ಪುರಾಣ ಪುರುಷನನ್ನಾಗಿ ನೋಡಿದ್ದೇವೆ. ಇಡೀ ವಿಶ್ವ ಕೊಂಡಾಡುವ ಶ್ರೀ ಕೃಷ್ಣನ ಜನನ, ಬಾಲ ಲೀಲೆ, ತುಂಟಾಟ, ಜೀವನ ಚರಿತ್ರೆ ಸಾಮಾನ್ಯವಾಗಿ ಎಲ್ಲರಿಗೆ ಗೊತ್ತಿದೆ.

ಬಾಲ್ಯದ ನಂತರ ಶ್ರೀ ಕೃಷ್ಣರು ಶಂಕಚಕ್ರ ಗಧಾದಾರಿಯಾಗಿ ಹೊರಟು ಹೋಗುತ್ತಾರೆ. ರಾಜಕೀಯ ಧುರೀಣನಾಗಿ, ಸಂಧಾನಕಾರನಾಗುತ್ತಾರೆ. ಶ್ರೀ ಕೃಷ್ಣನಿಗೆ ಬಹು ಆಯಾಮಗಳಿವೆ.

ಇಷ್ಟೊಂದು ಆಯಾಮಗಳನ್ನು ಬೇರೆಯವರಲ್ಲಿ ನಾವು ಕಾಣಲು ಸಾಧ್ಯವಿಲ್ಲದಷ್ಟು ವೈವಿಧ್ಯಮಯವಾದ ಕೃಷ್ಣನನ್ನು ನಾವು ಕಂಡಿದ್ದೇವೆ. ಇವರನ್ನು ಕುರಿತು ಹಾಡಿ ಹೊಗಳಿದ ಸಾಕಷ್ಟು ಸಾಹಿತ್ಯವಿದೆ. ಪಂಪ, ರನ್ನ, ಕುಮಾರವ್ಯಾಸರಾದಿಯಾಗಿ ಇವರ ಕುರಿತು ವಿಧ ವಿಧ ವರ್ಣನೆ ಇದೆ. ಕಾವ್ಯದಲ್ಲಿ ಮೆರೆಸಲಾಗಿದೆ.

ಇಡೀ ಮಹಾಭಾರತ ಕಥೆ ಕೃಷ್ಣನನ್ನೇ ಆವರಿಸಿಕೊಂಡು, ಅವನಿಂದಲೇ ಮುಕ್ತಾಯವಾಗುತ್ತದೆ. ಆದರೆ ಈಗ ನಾವು ನಿಜ ಕೃಷ್ಣನನ್ನು ಹುಡುಕಬೇಕಾಗಿದೆ. ಕೊಳಲು ಹಿಡಿದ, ದನ ಕಾಯುವ, ನಮ್ಮ ಮನೆ, ಮನ, ದನದ ಹಟ್ಟಿ, ಕೇರಿಗಳಲ್ಲಿ ಇದ್ದ ಕೃಷ್ಣನನ್ನು ಕಾಣಬೇಕಿದೆ. 13-14 ನೇ ಶತಮಾನದ ದಾಸ ಪರಂಪರೆಯಲ್ಲಿ ಎಲ್ಲರೂ ಭಜಿಸುವುದು ಕೃಷ್ಣನನ್ನು. ನನಗೆ ಮುಖ್ಯವಾಗಿ ಇಷ್ಟವಾಗುವುದು ಕೃಷ್ಣ ಕನಕನ ಕಿಂಡಿ ಮೂಲಕ ದರ್ಶನ ನೀಡುವುದು. ರುಕ್ಮಿಣಿಗೆ ಒಲಿದ, ಗೊಲ್ಲರನ್ನು ಕಾಪಾಡಿದ ಕೃಷ್ಣ, ಇಡೀ ಜಗತ್ತನ್ನು ಸೌಹಾರ್ಧಯುತವಾಗಿ ಬೆಸೆಯುವ ಕೃಷ್ಣ ಎಂದ ಅವರು ಶ್ರೀ ಕೃಷ್ಣ ಜಯಂತಿ ಕೇವಲ ಆಚರಣೆ ಆಗಬಾರದು.

ನಮ್ಮಂಥ ಸಣ್ಣ ಪುಟ್ಟ ಸಮುದಾಯದ ಜನತೆ ಒಟ್ಟಿಗೆ ಬೆರೆತು, ತಮ್ಮ ಕುಂದು ಕೊರತೆ ಚರ್ಚಿಸಿ, ಪರಿಹಾರಕ್ಕೆ ವೇದಿಕೆ ಕೂಡ ಆಗಬೇಕೆಂದರು. ಜಿಲ್ಲಾ ಗೊಲ್ಲರ(ಯಾದವ) ಸಂಘದ ಅಧ್ಯಕ್ಷ ಕೆ.ಅಂಜನಪ್ಪ, ತಾಲ್ಲೂಕು ಗೊಲ್ಲರ ಸಂಘದ ಅಧ್ಯಕ್ಷ ಎಸ್ ಹೆಚ್ ಜಗದೀಶ್, ಡಿಸಿ ಕಚೇರಿ ತಹಶೀಲ್ದಾರ್ ಲಿಂಗರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಸಮಾಜದ ಮುಖಂಡರು, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...