ಶಿವಮೊಗ್ಗ | ಈ ಕೆಳಕಂಡ ಮಕ್ಕಳ ಪಾಲನ ಸಂಸ್ಥೆಗಳ ಪರವಾನೆ ರದ್ದು

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆ,2015ರ ಸೆಕ್ಷನ್ 41 (1) ರಡಿ ನೋಂದಾಯಿಸಲ್ಪಟ್ಟಿರುವ ಮಕ್ಕಳ ಪಾಲನಾ ಆರು ಸಂಸ್ಥೆಗಳನ್ನ ರದ್ದುಗೊಳಿಸಲಾಗಿದೆ.

ಆಶಾ ಕಿರಣ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ, ವಿದ್ಯಾನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ಹಿರಿಯ ವಸತಿ ಶಾಲೆ, ಬಸವೇಶ್ವರನಗರ, ಶಿವಮೊಗ್ಗ, ತರಂಗ ಕಿವುಡು ಮಕ್ಕಳ ವಸತಿ ನಿಲಯ, ನ್ಯೂಟೌನ್, ಭದ್ರಾವತಿ, ಮದರ್ ತೆರೆಸಾ ರೆಸಿಡೆನ್ಸಿಯಲ್ ಸ್ಕೂಲ್ ಫಾರ್ ಹಿಯರಿಂಗ್ ಇಂಪರ‍್ಡ್, ಭದ್ರಾವತಿ, ಮಾತೃಛಾಯ ಸರ್ವಧರ್ಮ ಸಂಸ್ಥೆ, ಸ್ವಾಮಿ ವಿವೇಕಾನಂದ ಬಡಾವಣೆ, ಗೋಪಾಳ, ಶಿವಮೊಗ್ಗ ಮತ್ತು ಸುಜ್ಞಾನ ಸಂಸ್ಥೆ, ಶಾಂತಿನಗರ, ಶಿಕಾರಿಪುರ ತಾಲೂಕು.

ಈ ಮೇಲ್ಕಂಡ ಮಕ್ಕಳ ಪಾಲನಾ ಆರು ಸಂಸ್ಥೆಗಳನ್ನು ಪಾಲನೆ, ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿಲ್ಲದ ಕಾರಣ ಬಾಲನ್ಯಾಯ ಕಾಯ್ದೆ, 2015 ಸೆಕ್ಷನ್ 41(7)ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಸರ್ಕಾರಿ ಆದೇಶದನ್ವಯ ದಿನಾಂಕ 17 ಮಾರ್ಚ್ 2025 ರಿಂದ ಅನ್ವಯವಾಗುವಂತೆ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...